Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
ಲೇಖನಗಳು

ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು

ಬೇಳೂರು ಸುದರ್ಶನBy ಬೇಳೂರು ಸುದರ್ಶನFebruary 6, 2020Updated:May 19, 2025No Comments5 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಕಲಬುರಗಿಯಲ್ಲಿ ನಡೆದ ೮೫ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧ

ಕನ್ನಡ ಭಾಷೆ – ಹೊಸ ತಂತ್ರಜ್ಞಾನ : ಈ ಗೋಷ್ಠಿಯಲ್ಲಿ ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳ ಬಗ್ಗೆ ನಾನು ನನ್ನ ಅರಿವಿಗೆ ಬಂದ ಸಂಗತಿಗಳನ್ನು ನಿಮ್ಮ ಮುಂದೆ ಇಡಲು ಬಯಸಿದ್ದೇನೆ. ಅನ್ವಯಿಕ ತಂತ್ರಾಂಶಗಳ ವಿಷಯದಲ್ಲಿ ಇರುವ ತೊಡಕುಗಳ ಬಗ್ಗೆ ತಮ್ಮೆಲ್ಲರ ಗಮನವನ್ನು ಸೆಳೆಯಲು ಯತ್ನಿಸುತ್ತೇನೆ.

  1. ಕಾರ್ಯ ಸಮನ್ವಯದ ಕೊರತೆ: ಭಾಷಾ ಸಾಧನ ಮತ್ತು ತಂತ್ರಾಂಶ ಅಭಿವೃದ್ಧಿ ಪ್ರಕ್ರಿಯೆಗಳು ವಿವಿಧ ಸಂಘ ಸಂಸ್ಥೆಗಳ ನಡುವೆ ಹಂಚಿಹೋಗಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಂಬಂಧಿತ ಇಲಾಖೆಗಳು, ಖಾಸಗಿ ಸಂಸ್ಥೆಗಳು ಮತ್ತು ಮುಕ್ತ ತಂತ್ರಾಂಶ ಸಮುದಾಯದ ನಡುವೆ ಸೂಕ್ತವಾದ ಸಮನ್ವಯವಿಲ್ಲ. ಮಾನದಂಡಗಳಿಗೆ ಅನುಗುಣವಾಗಿ ತಂತ್ರಜ್ಞಾನ ರೂಪಿಸುವುದು, ಯಾವುದೇ ಕಾರ್ಯದ ಪುನರಾವರ್ತನೆಯನ್ನು ಮಾಡದೇ ಇರುವುದು – ಇವು ಮುಖ್ಯವಾದ ಪಂಥಾಹ್ವಾನಗಳಾಗಿವೆ.
  2. ಏಕೀಕೃತ ಜಾಲತಾಣ: ಅವಶ್ಯಕತೆಗಳ ಪಟ್ಟಿಗೆ ಅನುಗುಣವಾಗಿರುವ. ಸೂಕ್ತವಾಗಿ ಪರಿಶೀಲನೆಗೆ ಒಳಪಟ್ಟಿರುವ, ಸಹಾಯದ ಮಾಹಿತಿ ಇರುವ ಕನ್ನಡ ಐಟಿ ಸಾಧನಗಳು ಮತ್ತು ತಂತ್ರಾಂಶಗಳ ಒಂದು ಏಕೀಕೃತ ಸಂಗ್ರಹತಾಣವನ್ನು ರೂಪಿಸುವುದು ದೊಡ್ಡ ಸವಾಲಾಗಿದೆ. ಏಕೆಂದರೆ ಈಗ ಲಭ್ಯವಿರುವ ಸಾಧನಗಳನ್ನು ವಿವಿಧ ಸಂಸ್ಥೆಗಳು ವಿವಿಧ ಹಣಕಾಸು ನೆರವಿನೊಂದಿಗೆ ರೂಪಿಸುತ್ತಿವೆ. ಆದಾಗ್ಯೂ ಇ – ಆಡಳಿತದಲ್ಲಿ ರೂಪುಗೊಂಡ ಕನ್ನಡ ಕಂಪ್ಯೂಟಿಂಗ್‌ ಯೋಜನೆಯು ಆದಷ್ಟೂ ಬೇಗನೆ ಇಂತಹ ಕ್ರೋಡೀಕೃತ ಜಾಲತಾಣ ಪುಟವನ್ನು ಅನಾವರಣಗೊಳಿಸಲು ಎಲ್ಲ ಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಬಯಸುತ್ತೇನೆ.
  3. ಖಚಿತ ಮತ್ತು ಕನ್ನಡ ಕೇಂದ್ರಿತ ಮಾನದಂಡಗಳ ಕೊರತೆ: ಮಾನದಂಡಗಳನ್ನು ಅನುಸರಿಸದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಈ ಕುರಿತು ಕಳೆದ ತಿಂಗಳಲ್ಲಿ ಇ ಕನ್ನಡ ಕಮ್ಮಟವನ್ನು ಸಂಘಟಿಸಿ ತಂತ್ರಜ್ಞರಿಂದ ಸ್ಥೂಲ ಮಾನದಂಡಗಳ ಪಟ್ಟಿ ಮಾಡಲಾಗಿದೆ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ. ಈ ಮಾನದಂಡಗಳನ್ನು ಆಧರಿಸಿ ಪ್ರತಿಯೊಂದೂ ತಂತ್ರಾಂಶಕ್ಕೆ ಬೇಕಾದ ಕನ್ನಡ ಭಾಷಾ ಕೇಂದ್ರಿತ ಮಾನದಂಡಗಳನ್ನು ರೂಪಿಸುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಇ – ಆಡಳಿತ ಇಲಾಖೆಗಳು ಕಾರ್ಯನಿರತವಾಗಿವೆ ಎಂಬುದನ್ನೂ ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ.
  4. ತಜ್ಞತೆಯ ಕಂದರ: ಭಾಷಾಶಾಸ್ತ್ರಜ್ಞರು ಮತ್ತು ಮಾಹಿತಿ ತಂತ್ರಜ್ಞಾನ ತಜ್ಞರ ನಡುವೆ ಸಂಪರ್ಕ ಕಲ್ಪಿಸುವುದು ಇನ್ನೊಂದು ದೊಡ್ಡ ಸವಾಲಾಗಿದೆ. ಪ್ರಸ್ತುತ ಬಹಳಷ್ಟು ಭಾಷಾಶಾಸ್ತ್ರಜ್ಞರು ಕಂಪ್ಯೂಟರ್‌ ಭಾಷೆಗಳು, ದತ್ತಸಂಚಯ ಇತ್ಯಾದಿಗಳ ಬಗ್ಗೆ ಹೆಚ್ಚು ಅರಿತವರಲ್ಲ. ಈ ಕಂದರವು ಭಾಷಾ ಸಂಪನ್ಮೂಲಗಳನ್ನು ಸ್ಥಾಪಿಸುವುದಕ್ಕೆ ತಡೆಯಾಗಿದೆ. ಹೀಗಿದ್ದೂ ಭಾಷಾಶಾಸ್ತ್ರಜ್ಞರೇ ಯಾವುದೇ ಐಟಿ ಸಾಧನದ ಯಶಸ್ಸಿಗೆ ಮೂಲಾಧಾರವಾಗಿದ್ದಾರೆ.
  5. ಅನ್ವಯಿಕ ತಂತ್ರಾಂಶಗಳಲ್ಲಿ ಸೂಕ್ತ ರೆಂಡರಿಂಗ್‌: ಅಕ್ಷರ ಜೋಡಣೆ ಅರ್ಥಾತ್‌ ಡಿಟಿಪಿ ರಂಗದಲ್ಲಿ ಈಗಲೂ ಪೇಜ್‌ಮೇಕರ್‌ನಂತಹ ಹಳೆಯ ತಂತ್ರಾಂಶಗಳನ್ನೇ ಬಳಸುತ್ತಿದ್ದಾರೆ. ಇದರಿಂದಾಗಿ ಇ-ಪುಸ್ತಕ ಚಳವಳಿಯನ್ನು ಆರಂಭಿಸಲು ಪ್ರಕಾಶನ ಸಂಸ್ಥೆಗಳಿಗೂ ಸಮಸ್ಯೆ ಆಗುತ್ತಿದೆ. ಅಲ್ಲದೆ ಡಿಟಿಪಿ ರಂಗದಲ್ಲಿ ಇನ್ನೂ ಯುನಿಕೋಡ್‌ ಅಲ್ಲದ ಫಾಂಟ್‌ಗಳನ್ನೇ ಬಳಸುವುದರಿಂದ ಫಾಂಟ್‌ ಪರಿವರ್ತನೆಯ ಲೋಪಗಳನ್ನೂ ಎದುರಿಸಬೇಕಾಗಿದೆ ಮತ್ತು ಇ – ಪುಸ್ತಕ ರಚನೆ ವಿಳಂಬವಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಕ್ತ ಪೇಜಿನೇಶನ್‌ ತಂತ್ರಾಂಶವಾದ ಸ್ಕ್ರೈಬಸ್‌ನ್ನು ಸಂಪೂರ್ಣವಾಗಿ ಕನ್ನಡೀಕರಿಸಿ (ಆದೇಶ ಪದಗಳು ಮತ್ತು ಹೈಫೆನೇಶನ್‌, ಪದ ಊಹಿಸುವ ತಂತ್ರಾಂಶ, ವ್ಯಾಕರಣ ಮತ್ತು ಕಾಗುಣಿತ, ಇ – ಪುಸ್ತಕ ರಚನೆ ಹೀಗೆ ಭಾಷಾ ಸಂಬಂಧಿತ ಎಲ್ಲ ಸಾಧನಗಳನ್ನೂ ಅಳವಡಿಸಿ) ಬಳಸಿದರೆ ಪ್ರಕಾಶನ ರಂಗದಲ್ಲಿ ಕ್ರಾಂತಿಯನ್ನೇ ಉಂಟು ಮಾಡಬಹುದು. ಇದನ್ನು ಪ್ರಕಾಶನ ರಂಗದ ಪ್ರಮುಖರು ಕೂಡಲೇ ಗಮನಿಸಿ ಕೊಂಚ ಹಣಕಾಸಿನ ನೆರವನ್ನೂ ಕೊಟ್ಟರೆ, ಈ ಬಗ್ಗೆ ದೊಡ್ಡ ಹೆಜ್ಜೆಗಳನ್ನು ಇಡಬಹುದು.
  6. ಕೀಲಿಮಣೆ ಸಂಗತಿಗಳು: ಕರ್ನಾಟಕ ರಾಜ್ಯ ಸರ್ಕಾರವು ನುಡಿ ತಂತ್ರಾಂಶವನ್ನು ಅಧಿಕೃತ ಡಿಟಿಪಿ ತಂತ್ರಾಂಶವೆಂದು ಮಾನ್ಯಮಾಡಿ ಕನ್ನಡಭಾಷೆಗೆ ಕಗಪ ಕೀಲಿಮಣೆಯನ್ನೇ ಅಧಿಕೃತ ಕೀಲಿಮಣೆ ಮಾನದಂಡ ಎಂದು ಪ್ರಕಟಿಸಿದೆ. ಈ ಕೀಲಿಮಣೆಯನ್ನು ಶ್ರೀಕೆ.ಪಿ.ರಾವ್‌ ರೂಪಿಸಿದ ಕೀಲಿಮಣೆಯನ್ನು ಆಧರಿಸಿ ರೂಪಿಸಲಾಗಿದೆ. ಸಿಡ್ಯಾಕ್‌ ಕೂಡ ಇನ್‌ಸ್ಕ್ರಿಪ್ಟ್‌ ಕೀಲಿಮಣೆಯನ್ನು ಕನ್ನಡಕ್ಕಾಗಿ ರೂಪಿಸಿದ್ದು ಇದರಲ್ಲಿ ಎಲ್ಲಾ ಭಾರತೀಯ ಲಿಪಿಗಳಿಗೆ ಸಮಾನವಾದ ವಿನ್ಯಾಸವಿದೆ. ಕನ್ನಡ ಕಂಪ್ಯೂಟಿಂಗ್‌ನಲ್ಲಿ ಲಿಪ್ಯಂತರಣ ಕೀಲಿಮಣೆಯೂ ತುಂಬಾ ಜನಪ್ರಿಯವಾಗಿದೆ. ವಿಂಡೋಸ್‌ ಮತ್ತು ಮ್ಯಾಕ್‌ ಓಎಸ್‌ ಸಾಧನಗಳು ತಮ್ಮ ತಂತ್ರಾಂಶಗಳಲ್ಲೇ ಇನ್‌ಸ್ಕ್ರಿಪ್ಟ್‌ ಕೀಲಿಮಣೆಯನ್ನು ಅಡಕಗೊಳಿಸಿವೆ. ಲಿನಕ್ಸ್‌ ತಂತ್ರಾಂಶವು ಎಲ್ಲಾ ಮೂರು ವಿನ್ಯಾಸಗಳನ್ನೂ ಹೊಂದಿದೆ. ಕೆಪಿರಾವ್‌ ಕೀಲಿಮಣೆಯನ್ನು ಬಳಸಲು ವಿಂಡೋಸ್‌ನಲ್ಲಿ ಕೀಲಿಮಣೆ ಡ್ರೈವರ್‌ ಬೇಕಾಗುತ್ತದೆ; ಮ್ಯಾಕ್‌ ಓಎಸ್‌ನಲ್ಲಿ ಮುಕ್ತ ಕೀಲಿಮಣೆ ವಿನ್ಯಾಸವು ಲಭ್ಯವಿದೆ. ಮೈಕ್ರೋಸಾಫ್ಟ್‌ ಸಂಸ್ಥೆಯ ಭಾಷಾ ಇಂಡಿಯಾ ರೂಪಿಸಿದ ಭಾರತೀಯ ಭಾಷೆಗಳ ಕೀಲಿಮಣೆಗಳಲ್ಲಿ ಕೆಲವು ಝೀರೋ ವಿಡ್ತ್‌ ನಾನ್‌ ಜಾಯ್‌ನರ್‌ಗಳಂತಹ ಕೆಲವು ತೊಡಕುಗಳಿವೆ. ಗೂಗಲ್‌ ಇಂಡಿಕ್‌ ಸಾಧನಗಳು ವಿಂಡೋಸ್‌ ಮತ್ತು ಎಲ್ಲಾ ಗೂಗಲ್‌ ಕ್ಲೌಡ್‌ ಆಧಾರಿತ ಸೇವೆಗಳಿಗಾಗಿ ಲಿಪ್ಯಂತರಣ ಕೀಲಿಮಣೆ ವಿನ್ಯಾಸ ಮತ್ತು ಇನ್‌ಸ್ಕ್ರಿಪ್ಟ್‌ ಕೀಲಿಮಣೆ ವಿನ್ಯಾಸಗಳನ್ನು ಹೊಂದಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಾಚರಣಾ ವ್ಯವಸ್ಥೆಯಲ್ಲಿ ಸಮನಾಗಿ ಕಾರ್ಯ ನಿರ್ವಹಿಸುವ ಮತ್ತು ಯುನಿಕೋಡ್‌ ಅಕ್ಷರಭಾಗಗಳನ್ನು ವೈಜ್ಞಾನಿಕವಾಗಿ ಅಳವಡಿಸಿಕೊಂಡಿರುವ ಕೆ ಪಿ ರಾವ್‌ ವಿನ್ಯಾಸ ಆಧಾರಿತ ಸಾರ್ವತ್ರಿಕ ಕೀಲಿಮಣೆಯನ್ನು ರೂಪಿಸುವುದು ಇಂದಿನ ಅಗತ್ಯವಾಗಿದೆ.
  7. ಫಾಂಟ್‌ ಸಂಗತಿಗಳು: ಈಗಲೂ ಕನ್ನಡಕ್ಕೆ ಯುನಿಕೋಡ್‌ ಪಠ್ಯಫಾಂಟ್‌ (ಬುಕ್‌ ಫಾಂಟ್‌) ಅಗತ್ಯವಿದೆ. ಈಗ ಕನ್ನಡದಲ್ಲಿ ಹಲವು ಯುನಿಕೋಡ್‌ ಫಾಂಟ್‌ಗಳು ಇದ್ದರೂ ಒಂದು ಸಾರ್ವತ್ರಿಕ ಬಳಕೆಯ ಬುಕ್‌ ಫಾಂಟ್‌ ಎಂಬುದು ಪೂರ್ಣವಾಗದ ಬೇಡಿಕೆಯಾಗಿದೆ. ಈಗಿರುವ ಯುನಿಕೋಡ್‌ ಫಾಂಟ್‌ಗಳಲ್ಲೂ ಹಲವು ಅಕ್ಷರಭಾಗಗಳ ಮತ್ತು ಎನ್‌ಕೋಡಿಂಗ್‌ ಲೋಪಗಳನ್ನು ಹೊಂದಿವೆ. ಇವುಗಳನ್ನೆಲ್ಲ ಸರಿಪಡಿಸಬೇಕಿದೆ. ಇಲ್ಲೂ ಶ್ರೀ ಕೆ ಪಿ ರಾವ್‌ ಅವರ ಅಪಾರ ಫಾಂಟನ್ನು ಮಾದರಿಯಾಗಿ ತೆಗೆದುಕೊಂಡು ಮುಂದಿನ ಹೆಜ್ಜೆಗಳನ್ನು ಇಡಬಹುದಾಗಿದೆ.
  8. ದೇಸೀಕರಣ: ಖಾಸಗಿ ಒಡೆತನದ ಅಥವಾ ಮುಕ್ತವಾದ ಅನ್ವಯಿಕ ತಂತ್ರಾಂಶಗಳ ದೇಸೀಕರಣ (ಲೋಕಲೈಸೇಶನ್‌) ಇನ್ನೊಂದು ಪ್ರಮುಖ ಸವಾಲಾಗಿದೆ. ಏಕೆಂದರೆ ಲೋಕಲೈಸೇಶನ್‌ ಕಾರ್ಯದಲ್ಲಿ ಹಲವು ಸಂಸ್ಥೆಗಳು ತೊಡಗಿವೆ. ಇತ್ತೀಚೆಗಷ್ಟೇ ದೇಸೀಕರಣ ಮತ್ತು ಪದಕಣಜ ರಚನೆಯ ಬಗ್ಗೆ ಇ – ಆಡಳಿತ ಇಲಾಖೆ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಹೆಜ್ಜೆ ಇಡಲಾಗಿದೆ. ಪದಕಣಜ ಮತ್ತು ಇ – ಆಡಳಿತದಲ್ಲಿ ಕನ್ನಡ ಅನುಷ್ಠಾನ ಕುರಿತ ಸಮಿತಿಗಳನ್ನು ಇನ್ನು ಕೆಲವೇ ದಿನಗಳಲ್ಲಿ ರಚಿಸಲಾಗುವುದು.
  9. ಯುನಿಕೋಡೇತರ ಫಾಂಟ್‌ಗಳಿಂದ ಯುನಿಕೋಡ್‌ಗೆ ಪರಿವರ್ತನೆ : ಕನ್ನಡದ ಬಹುತೇಕ ವಿಷಯವಸ್ತುಗಳು ಈಗಲೂ ಯುನಿಕೋಡೇತರ ಫಾಂಟ್‌ಗಳಲ್ಲೇ ಇವೆ. ಈಗಿರುವ ಹಲವು ಪರಿವರ್ತಕಗಳು *.txt. ಸ್ವರೂಪದಲ್ಲಿರುವ ಪಠ್ಯಗಳನ್ನು ಸುಲಭವಾಗಿ ಪರಿವರ್ತಿಸುತ್ತವೆ; ಆದರೆ ಇವುಗಳಲ್ಲಿ ಇಂಗ್ಲಿಶ್‌ ಫಾಂಟ್‌ಗಳನ್ನು ಬಳಸುವ ಹಾಗಿಲ್ಲ. ಇಂತಹ ಹಲವು ಪರಿವರ್ತಕಗಳು ಕಡತದಲ್ಲಿ ಇರುವ ಫಾಂಟ್‌ ಗಾತ್ರ, ವಿನ್ಯಾಸ, ಪ್ಯಾರಾಗಳು – ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ. ಆದ್ದರಿಂದ ಯುನಿಕೋಡ್‌ಗೆ ಬಹುದೊಡ್ಡ ಪ್ರಮಾಣದಲ್ಲಿ ಪಠ್ಯವನ್ನು ಆಯಾ ಕಡತದ ಅಥವಾ ದತ್ತಾಂಶದ ಸ್ವರೂಪದಲ್ಲಿಯೇ ಪರಿವರ್ತಿಸುವ ತಂತ್ರಾಂಶಗಳನ್ನು ರೂಪಿಸುವುದು ಅತ್ಯಂತ ಅವಶ್ಯಕವಾಗಿದೆ.
  10. ಪಠ್ಯ ಮತ್ತು ಧ್ವನಿಸಂಚಯ: ಭಾರತೀಯ ಭಾಷೆಗಳು ಸಂಪನ್ಮೂಲ ಕೊರತೆಯಿಂದ ಕೂಡಿವೆ. ಇಲ್ಲೀಗ ಕೆಲವೇ ಲಕ್ಷ ವಾಕ್ಯಗಳ ಸಮಾಂತರ ಪಠ್ಯ ಅಥವಾ ಧ್ವನಿಸಂಚಯದ ಆಕರವಿದೆ. ಕಳೆದ ಒಂದು ದಶಕದಲ್ಲಿ ಹಲವು ಸಂಸ್ಥೆಗಳು ವಿಶ್ಲೇಷಣೆ-ಉತ್ಪಾದನೆ-ಅನುವಾದ, ಉದಾಹರಣೆ ಆಧಾರಿತ ಯಂತ್ರಾನುವಾದ, ನಿಯಮ ಆಧಾರಿತ, ಸಂಖ್ಯಾಶಾಸ್ತ್ರ ಬಳಸಿಮಾಡುವ ವಿಧಾನ – ಹೀಗೆ ಹಲವು ಅನುವಾದ ವಿಧಾನಗಳನ್ನು ಯಂತ್ರಾನುವಾದಕ್ಕಾಗಿ ಬಳಸಿವೆ. ಹೀಗಿದ್ದೂ ಇವುಗಳಲ್ಲಿ ಸಂಖ್ಯಾಶಾಸ್ತ್ರೀಯ ಆಧಾರಿತ ಮತ್ತು ಹೈಬ್ರಿಡ್‌ ಯಂತ್ರಾನುವಾದವೇ ಹೆಚ್ಚು ಉತ್ತಮ ಫಲಿತಾಂಶಗಳನ್ನು ನೀಡುತ್ತಿದೆ. ಹೀಗಿದ್ದೂ ಸಂಖ್ಯಾಶಾಸ್ತ್ರೀಯ ವಿಧಾನಕ್ಕೆ ಭಾರೀಪ್ರಮಾಣದ ಸಮಾಂತರ ಸಂಚಯಗಳು ಬೇಕಾಗಿವೆ. ಆದ್ದರಿಂದ ಯಂತ್ರಾನುವಾದದ ಫಲಿತಾಂಶವನ್ನು ಉತ್ತಮಪಡಿಸಲು ಅತಿ ಕರಾರುವಾಕ್ಕಾದ ಧ್ವನಿ ಮತ್ತು ಚಂಕಡ್‌ ಸಮಾಂತರ ಸಂಚಯಗಳನ್ನು ರೂಪಿಸಬೇಕಾಗಿದೆ. ಅಲ್ಲದೆ ಪಠ್ಯದಿಂದ ಧ್ವನಿಪರಿವರ್ತನೆಗೆ ಮತ್ತು ಧ್ವನಿಯಿಂದ ಪಠ್ಯ ಅನುವಾದಕ್ಕೆ ಕನ್ನಡದಲ್ಲಿ ಟಿಪ್ಪಣಿಯುಕ್ತ (ಆನೋಟೇಟೆಡ್‌) ಧ್ವನಿಸಂಚಯಗಳನ್ನು ರೂಪಿಸಬೇಕಾಗಿದೆ. ತರಬೇತಾದ ತಜ್ಞರು, ಭಾಷಾಶಾಸ್ತ್ರಜ್ಞರು ಮತ್ತು ಐಟಿ ನಡುವೆ ಸಂಪರ್ಕ ಸಾಧಿಸುವುದು ಒಂದು ಸವಾಲಾಗಿದೆ. ಮೈಸೂರಿನ ಭಾರತೀಯ ಭಾಷಾ ಸಂಸ್ಥಾನವು ಇತ್ತೀಚೆಗೆ ತನ್ನೆಲ್ಲ ಪಠ್ಯ ಮತ್ತು ಧ್ವನಿ ಸಂಚಯವನ್ನು ಮುಕ್ತ ಬಳಕೆಗೆ ನೀಡಿದ್ದು ಈ ನಿಟ್ಟಿನ ಒಂದು ಮಹತ್ವದ ಬೆಳವಣಿಗೆಯಾಗಿದೆ. ಆದರೆ ಕನ್ನಡ ಭಾಷೆಯ ವೈವಿಧ್ಯವನ್ನು ಕೂಡಾ ಸಂರಕ್ಷಿಸುವುದು ತಂತ್ರಜ್ಞಾನದ ಹೊಣೆಗಾರಿಕೆ. ಇಲ್ಲವಾದರೆ ಗ್ರಾಂಥಿಕ ಭಾಷೆಯೊಂದನ್ನೇ ಡಿಜಿಟಲ್‌ ರಂಗದಲ್ಲಿ ಕಾಣಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಇದು ಸ್ಥಳೀಯತೆಗೆ ಧಕ್ಕೆ ತರುತ್ತದೆ.
  11. ಸಂಪನ್ಮೂಲ ಹಂಚಿಕೆ ವ್ಯವಸ್ಥೆ ಮತ್ತು ಲಭ್ಯತೆ:ಐಟಿ ಸಾಧನಗಳನ್ನು ರೂಪಿಸಲು ಮತ್ತು ಪರಿಹಾರಗಳನ್ನು ಹುಡುಕಲು ಬೇಕಾದ ಬಹಳಷ್ಟು ಕನ್ನಡ ಭಾಷಾ ಸಂಪನ್ಮೂಲಗಳು ಮತ್ತು ಉಪವ್ಯವಸ್ಥೆಗಳು ನೀತಿ ನಿಯಮ ಸಂಗತಿಗಳಿಂದಾಗಿ ತಂತ್ರಾಂಶ ಅಭಿವೃದ್ಧಿಕಾರರಿಗೆ ಲಭ್ಯವಾಗುತ್ತಿಲ್ಲ. ಯಂತ್ರಾನುವಾದ, ಪಠ್ಯದಿಂದ ಧ್ವನಿಗೆ ಪರಿವರ್ತನೆ, ಧ್ವನಿಯಿಂದ ಪಠ್ಯಕ್ಕೆ ಪರಿವರ್ತನೆ, ಕಾಗುಣಿತ ಸರಿಪಡಿಸುವಿಕೆ, ದ್ವಿಭಾಷಾ ನಿಘಂಟುಗಳು, ಮಾರ್ಫಾಲಾಜಿಕಲ್‌ ಅನಲೈಸರ್‌ಗಳು, ಸ್ಟೆಮ್ಮರ್‌ಗಳು, ಲೆಮ್ಮಟೈಸರ್‌ಗಳು, ವರ್ಗಾವಣೆ ವ್ಯಾಕರಣಗಳು, ಮುಂತಾದ ಭಾಷಾ ಆಧಾರಿತ ತಂತ್ರಾಂಶಗಳನ್ನು ರೂಪಿಸಲು ಇವು ಅತ್ಯವಶ್ಯವಾಗಿವೆ. ಇವುಗಳನ್ನು ಹಲವು ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಯಂತ್ರಾನುವಾದ ವ್ಯವಸ್ಥೆಗಳು ರೂಪಿಸಿದ್ದರೂ ಅವುಗಳು ವೆಬ್‌ಸರ್ವಿಸ್‌ ಆಗಿಯಾಗಲೀ, ಎಪಿಐ (ಅಪ್ಲಿಕೇಶನ್‌ ಡೆವಲಪ್‌ಮೆಂಟ್‌ ಇಂಟರ್‌ಫೇಸ್‌) ಆಗಿಯಾಗಲೀ ಲಭ್ಯವಿಲ್ಲ. ಇಂಥ ಉಪವ್ಯವಸ್ಥೆಗಳು ಮತ್ತು ಎಪಿಐಗಳು ತಂತ್ರಾಂಶ ಅಭಿವೃದ್ಧಿಯಲ್ಲಿ ಸಹಾಯಕವಾಗುತ್ತವೆ.
  12. ಮುಕ್ತ ತಂತ್ರಜ್ಞಾನ ನೀತಿ ಮತ್ತು ಸಾರ್ವಜನಿಕ ಹಣ ಆಧಾರಿತ ಯೋಜನೆಗಳು:ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಗಳು ಭಾರತೀಯ ಭಾಷೆಗಳ/ಕನ್ನಡದ ಐಟಿ ಸಾಧನಗಳನ್ನು, ತಂತ್ರಾಂಶಗಳನ್ನು ರೂಪಿಸಲು ಧನಸಹಾಯ ನೀಡುತ್ತವೆ. ಇವುಗಳನ್ನು ಮುಕ್ತ ತಂತ್ರಾಂಶ ವ್ಯವಸ್ಥೆಯಲ್ಲಿ ರೂಪಿಸುವುದು ಮತ್ತು ಯಾವುದೇ ವೇದಿಕೆಯಲ್ಲಿ ಕೆಲಸ ಮಾಡುವ ಹಾಗೆ ರೂಪಿಸುವುದು ಒಂದು ಸವಾಲಾಗಿದೆ. ಅಲ್ಲದೆ ಅತ್ಯುತ್ತಮ ಭಾಷಾ ಐಟಿ ಸಾಧನಗಳನ್ನು ರೂಪಿಸಲು ಸಂಶೋಧಕರಿಗೆ, ತಜ್ಞರಿಗೆ ಮತ್ತು ಅಪ್ಲಿಕೇಶನ್‌ ತಯಾರಕರಿಗೆ ನಿಧಿಸಹಾಯ ಒದಗಿಸಬೇಕಾಗುತ್ತದೆ. ಅದಿಲ್ಲವಾದರೆ ಖಾಸಗಿ ತಂತ್ರಾಂಶಗಳೇ ಮೇಲುಗೈ ಸಾಧಿಸಿ ಸರ್ಕಾರಗಳು ಕೈಚೆಲ್ಲಿ ಕೂರಬೇಕಾಗುತ್ತದೆ. ಸರ್ಕಾರವು ಸ್ಟಾರ್ಟ್‌ಅಪ್‌ ಸಂಸ್ಥೆಗಳಿಗೆ ನಿಧಿ ನೀಡುವಾಗ ಸಾರ್ವಜನಿಕ ಹಿತಾಸಕ್ತಿ ಮತ್ತು ಮುಕ್ತ ಲಭ್ಯತೆಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂಬುದು ನನ್ನ ಆಗ್ರಹವಾಗಿದೆ. ಕರ್ನಾಟಕ ಸರ್ಕಾರವು ಮುಕ್ತ ತಂತ್ರಾಂಶ ನೀತಿಯನ್ನು ಅನುಮೋದಿಸಿ ಪ್ರಕಟಿಸಬೇಕು ಎಂಬುದು ನನ್ನ ವೈಯಕ್ತಿಕ ಆಗ್ರಹವಾಗಿದೆ.
  13. ಮುಕ್ತಜ್ಞಾನದ ಅಭಿಯಾನದಲ್ಲಿ ತೊಡಕುಗಳು: ಕರ್ನಾಟಕ ಸರ್ಕಾರವು ನಿರ್ವಹಿಸುತ್ತಿರುವ ಕಣಜ ಜಾಲತಾಣವು ಈಗ ಹೆಚ್ಚಿನ ಬೆಳವಣಿಗೆ ಕಾಣುತ್ತಿಲ್ಲ. ಈಗ ಕಣಜ ಜಾಲತಾಣವನ್ನು ಭಾರತದ ಅತ್ಯುತ್ತಮ ಜ್ಞಾನಕೋಶವಾಗಿ ರೂಪಿಸಲು ಹೊಸ ಹಾದಿಗಳನ್ನು ಹುಡುಕಬೇಕಾಗಿದೆ. ಸರ್ಕಾರದ ಮತ್ತು ಸಮುದಾಯದ ಎಲ್ಲ ಮುಕ್ತ ಜ್ಞಾನಗಳನ್ನೂ ಕಣಜ ಜಾಲತಾಣದಲ್ಲಿ ಪ್ರಕಟಿಸುವ ಬಗ್ಗೆ ಬೃಹತ್‌ ಆಂದೋಲನ ಆಗಬೇಕಿದೆ. ಪದೇ ಪದೇ ಆದ್ಯತೆಗಳು ಬದಲಾಗುವ ಸಮಸ್ಯೆಯನ್ನು ಕಣಜ ಜಾಲತಾಣವು ಎದುರಿಸುತ್ತಿದೆ. ಕಣಜ ಬೆಳೆಸುವಲ್ಲಿ ಸಮುದಾಯವನ್ನೂ ಹೆಚ್ಚಿನ ಪ್ರಮಾಣದಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಜ್ಞಾನ ಸಂಗ್ರಹವನ್ನು ವಿಸ್ತರಿಸಬೇಕಿದೆ. ಕಣಜ ಜಾಲತಾಣಕ್ಕೆ ಈಗಾಗಲೇ ಹತ್ತು ವರ್ಷಗಳು ಆಗುತ್ತಿರುವುದರಿಂದ ರಾಜ್ಯ ಸರ್ಕಾರವು ಮುಕ್ತಜ್ಞಾನ ನೀತಿಯನ್ನು ಪ್ರಕಟಿಸಿ ದೇಶಕ್ಕೇ ಮಾದರಿ ಆಗಬೇಕು ಎಂಬುದು ನನ್ನ ವೈಯಕ್ತಿಕ ಆಗ್ರಹವಾಗಿದೆ.
  14. ಸರ್ವಬಳಕೆಯ ಸೂತ್ರಗಳ ಅಳವಡಿಕೆ: ಕನ್ನಡ ತಂತ್ರಾಂಶಗಳನ್ನು ರೂಪಿಸುವಾಗ ವಿಶ್ವಮಾನ್ಯ ಸರ್ವಬಳಕೆಯ (ಆಕ್ಸೆಸಿಬಿಲಿಟಿ) ಸೂತ್ರಗಳನ್ನು ಕಡ್ಡಾಯವಾಗಿ ಅಳವಡಿಸಬೇಕಿದೆ. ಭಾರತದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಆಕ್ಸೆಸಿಬಿಲಿಟಿ ಅಗತ್ಯವಿರುವ ಅರ್ಹ ಉದ್ಯೋಗಿಗಳು, ಭವಿಷ್ಯದ ಉದ್ಯೋಗಿಗಳು ಇದ್ದಾರೆ. ಆದ್ದರಿಂದ ಸಮಾನ ಅವಕಾಶಗಳನ್ನು ರೂಪಿಸಲು ತಂತ್ರಾಂಶ ನೀತಿಯಲ್ಲಿ ಸರ್ವಬಳಕೆಯ ಸೂತ್ರಗಳನ್ನು ಕಡ್ಡಾಯವಾಗಿ ಅಳವಡಿಸುವುದು ಬಹುದೊಡ್ಡ ಸವಾಲಾಗಿದೆ.
Share. Facebook Twitter Pinterest LinkedIn Tumblr Email
Previous Articleದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
Next Article ರಾಮನಗರದ ಹೃದಯ
ಬೇಳೂರು ಸುದರ್ಶನ
  • Website

Related Posts

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ

October 27, 2020

www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ

July 17, 2020

Comments are closed.

ಲೇಖನಗಳು
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.