Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
ಲೇಖನಗಳು

ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ

ಬೇಳೂರು ಸುದರ್ಶನBy ಬೇಳೂರು ಸುದರ್ಶನOctober 23, 2018Updated:May 19, 2025No Comments9 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

23  ಅಕ್ಟೋಬರ್‌ 2018

ಇವರಿಗೆ

ಮಾನ್ಯ ಮುಖ್ಯಮಂತ್ರಿಯವರು ಮತ್ತು ಸಂಪುಟದ ಎಲ್ಲ ಸಚಿವರು  

ಕರ್ನಾಟಕ ಸರ್ಕಾರ

ಬೆಂಗಳೂರು

ಮಾನ್ಯರೇ

ವಿಷಯ: ಕೊಡಗು ಮತ್ತು ಮಲೆನಾಡಿನ ಪ್ರದೇಶಗಳ ನೆರೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ದೂರಗಾಮಿ, ಸುಸ್ಥಿರ ಕ್ರಿಯಾಯೋಜನೆ ರೂಪಿಸಲು ನಾಡಿನ ನಾಗರಿಕರ ಮನವಿ.

2018 ರ ಆಗಸ್ಟ್‌ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ (ಮತ್ತು ನೆರೆಯ ಕೇರಳದಲ್ಲಿ) ಉಂಟಾದ ಪ್ರಕೃತಿ ವಿಕೋಪವು ಸಾವಿರಾರು ಕೋಟಿ ರೂ.ಗಳ ಮೌಲ್ಯದ ಆಸ್ತಿ ಹಾನಿಯನ್ನು ಉಂಟುಮಾಡಿದೆ. ಜನವಸತಿ, ರಸ್ತೆ, ಮುಂತಾದ ಮೂಲಸೌಕರ್ಯಗಳಲ್ಲಿ ಆದ ನಷ್ಟವನ್ನು ರೂಪಾಯಿ ಲೆಕ್ಕದಲ್ಲಿ ಅಂದಾಜು ಮಾಡಬಹುದಾದರೂ, ಸಾವಿರಾರು ವರ್ಷಗಳಿಂದ ಕೊಡಗಿನ, ಕರ್ನಾಟಕದ ಜೀವಸೆಲೆಯಾಗಿದ್ದ ದಟ್ಟ ಅರಣ್ಯ ಪ್ರದೇಶದ ನಷ್ಟವನ್ನು ಅಳೆಯಲೂ ಸಾಧ್ಯವಿಲ್ಲ. ಜೀವವೈವಿಧ್ಯದಿಂಧ ತುಂಬಿದ್ದ, ದಕ್ಷಿಣ ಕರ್ನಾಟಕ, ತಮಿಳುನಾಡಿಗೇ ನೀರುಣಿಸುತ್ತಿರುವ ಕಾವೇರಿ ನದಿಯ ಉಗಮಸ್ಥಾನವಾದ ಕೊಡಗು ಈಗ ಭಾರೀ ಪ್ರಮಾಣದ  ಪರಿಸರ ನಾಶಕ್ಕೆ ತುತ್ತಾಗಿದೆ. ಸುಮಾರು 1500 ಫುಟ್‌ಬಾಲ್‌ ಕ್ರೀಡಾಂಗಣದಷ್ಟು (1060 ಹೆಕ್ಟೇರ್‌ಗಳಷ್ಟು) ಪ್ರದೇಶವು ಭೂಕುಸಿತಕ್ಕೆ ತುತ್ತಾಗಿದೆ ಎಂದು ಉಪಗ್ರಹ ವರದಿಗಳು ತಿಳಿಸಿವೆ.  ಈ ಐತಿಹಾಸಿಕ ಪರಿಸರ ದುರಂತಕ್ಕೆ ಮಾನವ ನಿರ್ಮಿತ ಕಾರಣಗಳೂ ಮುಖ್ಯ ಕಾರಣವಾಗಿವೆ.

“ಕೊಡಗಿನಲ್ಲಿ  ನಾಲ್ಕು  ದಶಕಗಳ ಹಿಂದೆ ಒಟ್ಟು ಭೂಪ್ರದೇಶದ ಶೇಕಡಾ 50 ರಷ್ಟು ದಟ್ಟ ಹಸಿರು ಕಾಡಿತ್ತು. ಆದರೆ ಅದು ಈಗ ಶೇಕಡಾ 17-18ರ ಪ್ರಮಾಣಕ್ಕೆ ಕುಸಿದಿದೆ. ರೈಲ್ವೆ, ರಸ್ತೆಗಳು, ವಿದ್ಯುಚ್ಚಕ್ತಿ ಕಂಬಗಳು, – ಹೀಗೆ ಹಲವು ಕಾರಣಗಳಿಗಾಗಿ ಹಸಿರು ಕಡಿಮಯಾಗುತ್ತ ಬಂತು. ನಾಲ್ಕು ದಶಕಗಳಿಂದ ನಡೆಯುತ್ತಿದ್ದ ಧಕ್ಕೆಯು ಈಗ ಪರಿಣಾಮ ತೋರುತ್ತಿದೆ” ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಪ್ರೊ. ಟಿ ವಿ ರಾಮಚಂದ್ರ ಹೇಳುತ್ತಾರೆ. ಗುಡ್ಡ ಪ್ರದೇಶಗಳಲ್ಲಿ ಕಾಡಿನ ಪ್ರಮಾಣವು ಶೇಕಡಾ 66 ರಷ್ಟಿರಬೇಕು; ಇತರೆ ಪ್ರದೇಶಗಳಲ್ಲಿ ಇರು ಶೇಕಡಾ 33 ರಷ್ಟಾದರೂ ಇರಬೇಕಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿನ ಇತ್ತೀಚೆಗಿನ ಮತ್ತು ಪ್ರಸ್ತಾವಿತ ಯೋಜನೆಗಳು ಮತ್ತು ಅವುಗಳ ಪರಿಣಾಮವಾಗಿ ಕಡಿಯಲಿರುವ ಮರಗಳ ಸಂಖ್ಯೆ ಕುರಿತ ಒಂದು ಅಂದಾಜು ಕೋಷ್ಟಕ  (ಮೂಲ: ವಿವಿಧ ಮಾಧ್ಯಮ ವರದಿಗಳು) 

ಇತ್ತೀಚೆಗೆ ಸಂಪೂರ್ಣವಾದ ಯೋಜನೆಗಳು ಕಡಿದ / ಕಡಿಯಲಿರುವ ಮರಗಳ ಸಂಖ್ಯೆ
1.       2015 ರಲ್ಲಿ ಸಂಪೂರ್ಣವಾದ ಮೈಸೂರು – ಕೋಯಿಕ್ಕೋಡ್‌ 400 ಕೆವಿ ಹೈ ಟೆನ್‌ಶನ್‌ ಪವರ್‌ಲೈನ್‌ https://bangaloremirror.indiatimes.com/bangalore/cover-story/Power-Grid-Corporation-of-India-nought-axe-green-activists-Central-Power-Research-Institute-Indian-Institute-of-Science-Dasara-elephant/heroesshow/43742645.cms  54,000
ಈಗ ನಡೆಯುತ್ತಿರುವ ಯೋಜನೆಗಳು
2.       ಹಾಸನ – ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೆಂಗಳೂರು – ಮಂಗಳೂರು ಔದ್ಯಮಿಕ ಕಾರಿಡಾರ್‌ ನಿರ್ಮಾಣ ( https://www.thehindu.com/news/national/karnataka/over-3000-trees-being-felled-to-widen-nh-75/article17620764.ece ) 13,500
3.       ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನೇತ್ರಾವತಿ ನದಿತಿರುವು ಯೋಜನೆ(https://thewire.in/environment/yettinahole-karnataka-bengaluru-chikkaballapur) 20,000
4.       ರಾ.ಹೆ. 169 ರಲ್ಲಿ (ಈ ಹಿಂದೆ ರಾ.ಹೆ. 13 ಆಗಿತ್ತು) ಶಿವಮೊಗ್ಗದಿಂದ ಮಂಗಳೂರು ರಸ್ತೆ ಅಗಲೀಕರಣ ( https://bangaloremirror.indiatimes.com/news/state/cut-it-out-say-villagers-to-koppa-tree-chopping/articleshow/58580252.cms) 500
5.       ತುಂಗಾ ಏತ ನೀರಾವರಿ ಯೋಜನೆ (ಚಿಕ್ಕಮಗಳೂರು ಜಿಲ್ಲೆ) (https://www.thehindu.com/todays-paper/tp-national/tp-karnataka/Villagers-up-in-arms-over-tree-cutting/article17119587.ece) 24,000
6.       ರಾಷ್ಟ್ರೀಯ ಹೆದ್ದಾರಿ 4 ಎ ಅಗಲೀಕರಣ (ಬೆಳಗಾವಿಯಿಂದ ಪಂಜಿಮ್‌ ವರೆಗೆ) (https://www.thehindu.com/news/national/karnataka/38000-trees-to-be-axed-for-a-smooth-ride-between-Belagavi-and-Panaji/article14024504.ece) 38,000
ಪ್ರಸ್ತಾವಿತ ಯೋಜನೆಗಳು 
7.       ತಿನಾಯ್ ಘಾಟಿಯಿಂದ  ಕಾಸಲ್ ರಾಕ್ ವರೆಗೆ   ಜೋಡಿ ರೈಲು ಮಾರ್ಗಕ್ಕೆ ೧.೧೭ ಹೆಕ್ಟೇರು ಅರಣ್ಯ ನಾಶ(http://www.newindianexpress.com/states/karnataka/2016/aug/09/Dandeli-wildlife-in-danger-as-SWR-proposes-construction-of-double-line-1507278.html) 532
8.       ಕೈಗಾ ಪರಮಾಣು ವಿದ್ಯುತ್‌ ಸ್ಥಾವರದ ಸಾಮರ್ಥ್ಯವೃದ್ಧಿ ಹಿನ್ನೆಲೆಯಲ್ಲಿ ಅಳವಡಿಸುವ ವಿದ್ಯುತ್‌ ಸಾಗಾಣಿಕೆ  ತಂತಿಸಾಲುಗಳು (https://bangaloremirror.indiatimes.com/news/state/karnataka-is-kaiga-going-the-koodankulam-way/articleshow/59075366.cms) 1,00,000
9.       ಉತ್ತರ ಕನ್ನಡ ಜಿಲ್ಲೆಯಲ್ಲಿ ಹುಬ್ಬಳ್ಳಿ – ಅಂಕೋಲಾ ರೈಲ್ವೆ ಮಾರ್ಗ (https://www.thehindu.com/news/national/karnataka/hubballiankola-railway-project-clears-first-environmental-hurdle/article19259475.ece) 2,00,000
10.   ಶಿರಸಿ- ಕುಮಟಾ ರಸ್ತೆ ಅಗಲೀಕರಣ(https://kannada.asianetnews.com/news/sirsi-kumta-state-highway-will-close-for-developing-work-18-months-pezx6h) 60,000
11.   ಶರಾವತಿ ವನ್ಯಜೀವಿ  ಅಭಯಾರಣ್ಯದಲ್ಲಿ 2000 ಮೆ.ವಾ. ಪಂಪಡ್‌ ಸ್ಟೋರೇಜ್‌ ಹೈಡ್ರೋ ಪವರ್ ಪ್ಲಾಂಟ್‌   (http://www.newindianexpress.com/states/karnataka/2017/nov/30/activists-up-in-arms-as-sharavathi-power-project-gets-green-clearance-1714473.html) 150 ಹೆಕ್ಟೇರು  ದಟ್ಟ ಕಾಡು
12.   ಜೋಗ ಜಲಪಾತದಲ್ಲಿ ಸರ್ವಋತು ವೀಕ್ಷಣೆ(https://timesofindia.indiatimes.com/city/bengaluru/govt-seeks-moef-nod-to-make-jog-falls-all-season-spectacle/articleshow/58740928.cms) 5000 + ಕುಟುಂಬಗಳ ಒಕ್ಕಲೆಬ್ಬಿಸುವಿಕೆ
13.   ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರೆತ್ತುವ ಯೋಜನೆ (http://www.newindianexpress.com/states/karnataka/2018/jul/06/sharavathi-waters-protests-begins-in-bangalore-environmentalists-join-1839088.html) 1,00,000
14.   ತಾಳಗುಪ್ಪ – ಹೊನ್ನಾವರ ರೈಲ್ವೆ ಮಾರ್ಗ(https://www.thehindu.com/todays-paper/tp-national/tp-karnataka/talaguppahonnavar-rail-link-demanded/article4934535.ece) 2,00,000
15.   ಶರಾವತಿ ಮತ್ತು ಕೊಲ್ಲೂರು ವನ್ಯಜೀವಿ ಅಭಯಾರಣ್ಯ ಹಾದುಹೋಗುವ ಸಾಗರ – ಸಿಗಂದೂರು-ನಿಟ್ಟೂರು-ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ  1,00,000
16.   ಶಿವಮೊಗ್ಗ – ಹೊನ್ನಾವರ ರಸ್ತೆಯನ್ನು 4 ಪಥಗಳ ಮಾರ್ಗವಾಗಿ ಪರಿವರ್ತಿಸುವುದು  2,00,000
17.   ಶಿಕಾರಿಪುರ – ಹೊಸನಗರ-ನಗರ-ನಿಟ್ಟೂರು – ಬೈಂದೂರು ಮಾರ್ಗವಾಗಿ ಸಾಗುವ ರಾ.ಹೆ. 766 ಸಿ 2 ಇದರ 2/4 ಪಥದ ರಸ್ತೆ (http://forestsclearance.nic.in/viewreport.aspx?pid=FP/KA/ROAD/22256/2016) 2,00,000
18.   ಆಗುಂಬೆ ಮತ್ತು ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಹಾದುಹೋಗುವ ತೀರ್ಥಹಳ್ಳಿ – ಮಲ್ಪೆ 4 ಪಥಗಳ ರಾಷ್ಟ್ರೀಯ ಹೆದ್ದಾರಿ. (http://www.mangalorean.com/udupi-malpe-manipal-thirthahalli-national-highway-dpr-yet-to-be-approved/) 1,00,000
19.   ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಿಶಿಲ – ಬೈರಾಪುರ ನಡುವಣ ಹೊಸ 4 ಪಥದ ಮಾರ್ಗ (https://www.deccanchronicle.com/nation/current-affairs/271216/forest-departments-no-to-shishila-byrapura-road.html)(http://forestsclearance.nic.in/viewreport.aspx?pid=FP/KA/ROAD/32747/2018) 35,000
20.   ಸೋಮವಾರಪೇಟೆಯಿಂದ – ಮಾನಂತವಾಡಿ ರಾಷ್ಟ್ರೀಯ ಹೆದ್ದಾರಿ ಮತ್ತು ಮೈಸೂರಿನಿಂದ ತಲಚೇರಿ ಕೇರಳ ರೈಲುಮಾರ್ಗ (https://www.thenewsminute.com/article/development-or-destruction-kodagu-groups-protest-infrastructure-projects-district-63047) 3,00,000
21.   ಮೈಸೂರು – ವಿರಾಜಪೇಟೆ – ಕಣ್ಣೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ  ಸೇರುವವರೆಗೆ ಅಗಲೀಕರಣ(https://www.thehindu.com/todays-paper/tp-national/tp-kerala/kannur-mysuru-corridor-to-be-made-nh/article19368042.ece) 30,000
22.   ಮೈಸೂರು – ಕುಶಾಲನಗರ – ಮಡಿಕೇರಿ – ಮಂಗಳೂರು ರೈಲು ಮಾರ್ಗ 45,000
23.   ಮಡಿಕೇರಿ – ಕಡಮಕಲ್ಲು – ಸುಬ್ರಹ್ಮಣ್ಯ ರಸ್ತೆhttps://starofmysore.com/despite-objections-state-govt-pushing-for-madikeri-kadamakallu-subramanya-road-works/ 28,000
ಒಟ್ಟು ಕಡಿದ ಮತ್ತು ಕಡಿಯಲಾಗುವ ಮರಗಳ ಸಂಖ್ಯೆ 21,69, 500 ಕ್ಕೂ ಹೆಚ್ಚು

ಮೇಲೆ ಹೇಳಿದ ಕೋಷ್ಟಕದ ಪ್ರಕಾರ ಇನ್ನು ಐದು ಅಥವಾ ಹತ್ತು ವರ್ಷಗಳ ಅವಧಿಯಲ್ಲಿ ಇಷ್ಟೊಂದು ಬಲಿತ ಮರಗಳು ಪಶ್ಚಿಮಘಟ್ಟದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಿಗೆ ಬಲಿಯಾಗುತ್ತವೆ ಎಂದರೆ, ಈ ಕೃತ್ಯವು ಮಾನವೀಯತೆಗೆ ಬಗೆಯುವ ಅಪಚಾರವೆಂದು ಭಾವಿಸಬೇಕಾಗುತ್ತದೆ. ಇವುಗಳು ನೀಡುವ ನೈಸರ್ಗಿಕ ಸೇವೆಯನ್ನು ಹಣದ ರೂಪದಲ್ಲಿ ಲೆಕ್ಕಾಚಾರ ಹಾಕಿದರೂ ಅಭಿವೃದ್ಧಿಯ ಯೋಜನೆಗಳಿಂದ ಆಗುವ ಲಾಭಕ್ಕಿಂತಲೂ ಎಷ್ಟೋ ಪಟ್ಟು ಹೆಚ್ಚು ಇರುತ್ತದೆ. ಆದ್ದರಿಂದ ಮೇಲೆ ಕಾಣಿಸಿದ ಯಾವ ಯೋಜನೆಗಳನ್ನು ಜಾರಿಯಾಗದಂತೆ ನೋಡಿಕೊಳ್ಳುವುದು ಪ್ರಸಕ್ತ ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಇಲ್ಲೊಂದು ಉದಾಹರಣೆಯನ್ನು ನೋಡೋಣ. ತಮಿಳುನಾಡು ರಾಜ್ಯ ಹವಾಗುಣ ಬದಲಾವಣೆ ನಿರ್ವಹಣೆ ಸಮಿತಿಯ ಅಧಿಕೃತ ಸಮೀಕ್ಷೆಯ ಪ್ರಕಾರ, ಬೇರಾವುದೇ ಕ್ಷೇತ್ರದ ಪ್ರಗತಿಗೆ ಹೋಲಿಸಿದರೆ ಕೃಷಿ ಕ್ಷೇತ್ರದ ಪ್ರಗತಿಯ ಮೂಲಕ ಆಗುವ ಪ್ರತ್ಯಕ್ಷ ಅನುಕೂಲ ಈ ರೀತಿ ಇದೆ. ಕೃಷಿ ಕ್ಷೇತ್ರದಲ್ಲಿನ ಶೆ.೧ರಷ್ಟು ಅಭಿವೃದ್ದಿಯಿಂದಾಗುವ ಬಡತನ ನಿರ್ಮೂಲನೆ ಪ್ರಮಾಣ ಮೂರು ಪಟ್ಟು ಹೆಚ್ಚು ಇರುತ್ತದೆ. ನಿರಂತರವಾಗಿ ಕೃಷಿ ಕ್ಷೇತ್ರವನ್ನು ಸುಸ್ಥಿರವಾಗಿ ಅಭಿವೃದ್ದಿ ಮಾಡುವುದು ಯಾವುದೇ ರಾಜ್ಯದ ದೀರ್ಘಕಾಲಿನ ಕಾರ್ಯಸೂಚಿಯಾದರೆ, ಬಡತನವನ್ನೇ ಮೂಲೋತ್ಪಾಟನೆ ಮಾಡಲು ಸಾಧ್ಯವಿದೆ.

ಮಾನವ ನಿರ್ಮಿತ ಚಟುವಟಿಕೆಗಳಿಂದಾಗಿ ಜಗತ್ತಿನಲ್ಲಿ ಹವಾಗುಣ ಬದಲಾವಣೆಯಾಗುತ್ತಿದೆ. ಇದರಿಂದ ಜಾಗತಿಕ ತಾಪಮಾನ ಏರುತ್ತಿದೆ. ಇದರಿಂದಾಗಿ ಕರ್ನಾಟಕ ರಾಜ್ಯವೂ ಗಂಭೀರ ಸನ್ನಿವೇಶವನ್ನು ಎದುರಿಸುತ್ತಿದೆ. ರಾಜ್ಯದ ಶೇ.೭೭ರಷ್ಟು ಪ್ರದೇಶವು ಒಣ ಅಥವಾ ಅರೆ ಒಣ ಪ್ರದೇಶವಾಗಿದೆ. ಶೇ.೫೪ರಷ್ಟು ಪ್ರದೇಶವು ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಬರಪೀಡಿತ ರಾಜ್ಯಗಳಲ್ಲಿ ದೇಶದ ಎರಡನೇ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿರುವುದು ಆತಂಕದ ಸಂಗತಿಯಾಗಿದೆ. ರಾಜ್ಯದ ಅರಣ್ಯ ಪ್ರದೇಶವು ಶೇ.೨೦ಕ್ಕಿಂತ ಕಡಿಮೆ ಇರುವುದು ಬರಗಾಲಕ್ಕೆ ಮೂಲ ಕಾರಣವಾಗಿದೆ. ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ನಮ್ಮ ರಾಜ್ಯವು ಶೇ.೩೩ರಷ್ಟು ಪ್ರದೇಶದಲ್ಲಿ ಕಾಡನ್ನು ಹೊಂದಿರಬೇಕಾಗಿತ್ತು. ಕರ್ನಾಟಕವು ನಗರೀಕರಣಗೊಂಡ ರಾಜ್ಯದ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಕೊಡಗು ಜಿಲ್ಲೆಯಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಿಸಿರುವ  ಸೇರಿದಂತೆ ಪಶ್ಚಿಮ ಘಟ್ಟಗಳು ವಿಶ್ವದ ಅತಿಮುಖ್ಯ ಜೈವಿಕ ತಾಣಗಳಾಗಿವೆ. ಹಲವು ಜಲಮೂಲಗಳಿಗೆ, ಭಾರತದ ಬಹುಭಾಗಕ್ಕೆ ಮಳೆಯಾಗಲು ಈ ಪಶ್ಚಿಮ ಘಟ್ಟಗಳೇ ಕಾರಣ. ಇಂಥ ಅತಿಸೂಕ್ಷ್ಮ ಜೀವವೈವಿಧ್ಯ ತಾಣವನ್ನು ಉಳಿಸಿಕೊಳ್ಳುವುದರ ಜೊತೆಗೇ ಈ ಪ್ರದೇಶದಲ್ಲಿ ವಾಸಿಸುವ ಜನತೆಯ ಆಶೋತ್ತರಗಳನ್ನೂ ವಾಸ್ತವದ ನೆಲೆಯಲ್ಲಿ ಪೂರೈಸಬೇಕಿದೆ. ಈ ಹಿನ್ನೆಲೆಯಲ್ಲಿ ಈ ಕೆಳಗಿನ ಅಂಶಗಳನ್ನು ಗಮನಿಸಿ ಒಂದು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಬೇಕೆಂದು ತಮ್ಮನ್ನು ಆಗ್ರಹಿಸುತ್ತಿದ್ದೇವೆ.

ಪರಿಹಾರ ಮತ್ತು ಪುನರ್ವಸತಿ

  • ಕೊಡಗಿನಲ್ಲಿ ನೆರೆ, ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಮುಖ್ಯವಾಗಿ ಹಣಕಾಸಿನ ನೆರವು ಬೇಕಾಗಿದೆ. ಇದಲ್ಲದೆ ಅವರ ದಿನನಿತ್ಯದ ಕೆಲಸಗಳಿಗೆ ವಸ್ತುಗಳು (ಪಾತ್ರೆಗಳು ಇತ್ಯಾದಿ) ಬೇಕಾಗಿವೆ. ಅವುಗಳನ್ನು ಕೂಡಲೇ ಎಲ್ಲರಿಗೂ ವಿತರಿಸಬೇಕು.
  • ಹೀಗೆ ಸಂತ್ರಸ್ತರಾದ ಕುಟುಂಬಗಳು ತಮ್ಮ ಆಸ್ತಿಗಳನ್ನು (ಕಾನೂನಿನ ಅಡಿಯಲ್ಲಿ) ಉಳಿಸಿಕೊಳ್ಳುವಂತೆ ವ್ಯವಸ್ಥೆ ಮಾಡಬೇಕು. ಯಾವುದೇ ಸಂದರ್ಭದಲ್ಲೂ ಬೇರೆ ಖಾಸಗಿ ವ್ಯಕ್ತಿ / ಕಂಪನಿಗಳಿಗೆ ಈ ಆಸ್ತಿಗಳನ್ನು ಮಾರದಂತೆ ನೋಡಿಕೊಳ್ಳಬೇಕು. ಭೂಕುಸಿತಕ್ಕೆ ಒಳಗಾದ ಪ್ರದೇಶಗಳಲ್ಲಿ ಮತ್ತೆ ವಾಸ ಮಾಡಬಯಸದ ನಿವಾಸಿಗಳಿಗೆ, ಸರ್ಕಾರವು ಆ ಪ್ರದೇಶಕ್ಕೆ ಹತ್ತಿರದಲ್ಲೇ ಬೇರೆ ಖಾಸಗಿ ಜಮೀನುಗಳನ್ನು ಖರೀದಿಸಿ ಕಡಿಮೆ ಖರ್ಚಿನ ಮನೆಗಳನ್ನು ಕಟ್ಟಿಸಿಕೊಡಬೇಕು. ಮಾನವೀಯ ನೆಲೆಯ ಅಂಶಗಳನ್ನು ಭವಿಷ್ಯತ್ತಿನ ಭೂಮಿಯ ರಕ್ಷಣೆಯ ಹಿನ್ನೆಲೆಯಲ್ಲಿ ಸೂಕ್ತವಾಗಿ ಕೈಗೊಳ್ಳಬೇಕು.
  • ಕೊಡಗಿನಲ್ಲಿ ಅತಿವೃಷ್ಟಿಯಿಂದ ದುರ್ಬಲವಾದ ಭೂಪ್ರದೇಶವನ್ನು ಮತ್ತೆ ಕೃಷಿಗೆ ತಯಾರು ಮಾಡಲು ದೀರ್ಘಕಾಲೀನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಸೇನೆಯನ್ನು ಕೋರಿ, ಜೆಸಿಬಿಗಳನ್ನು ತರಿಸಿ, ಭೂಕುಸಿತ, ಸವಕಳಿಗೆ ಒಳಗಾದ ಪ್ರದೇಶವನ್ನು ಕೃಷಿಬಳಕೆಗೆ ಯೋಗ್ಯವಾಗುವಂತೆ ಮಾಡಬೇಕು.     
  • ಸಂತ್ರಸ್ತ ಕುಟುಂಬಗಳಿಗೆ ತಾತ್ಕಾಲಿಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಸರ್ಕಾರ ಮತ್ತು ಕಾರ್ಪೋರೇಟ್‌ ಸಂಸ್ಥೆಗಳು ಕೊಡಗಿನಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಬೇಕು.

ಕೊಡಗು (ಮುಖ್ಯವಾಗಿ ಮಡಿಕೇರಿ) ಮತ್ತು ಮಲೆನಾಡಿನ ಪ್ರಮುಖ ನಗರಗಳ ವಿಸ್ತರಣೆಗೆ ನಿರ್ಬಂಧ

  • ಖಾಸಗಿ ಮನೆ, ಕಾರ್ಮಿಕ ವಸತಿ ಮುಂತಾದ ಅಗತ್ಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ಬಗೆಯ ವಾಣಿಜ್ಯ ಭೂ ಪರಿವರ್ತನೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಮಡಿಕೇರಿ ನಗರವನ್ನು 2030 ರ ಹೊತ್ತಿಗೆ ಮೂರು ಪಟ್ಟು ವಿಸ್ತರಿಸುವ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಕೈಬಿಡಬೇಕು. ಈಗ ಸರ್ಕಾರವು ಎಲ್ಲಾ ಬಗೆಯ ಭೂ ಪರಿವರ್ತನೆಯನ್ನು ನಿಷೇಧಿಸಿರುವುದು ಒಳ್ಳೆಯ ಕ್ರಮವಾಗಿದೆ. ಮಲೆನಾಡಿನ ಜಿಲ್ಲೆಗಳ ಕಟ್ಟಡ ನಿರ್ಮಾಣ ನೀತಿಯನ್ನು ತಮಿಳುನಾಡು ಜಿಲ್ಲಾ ಮುನಿಸಿಪಾಲಿಟೀಸ್‌ (ಹಿಲ್‌ ಸ್ಟೇಶನ್ಸ್‌) ನಿರ್ಮಾಣ ನಿಯಮಗಳು 1993  ಇದರಂತೆ ರೂಪಿಸಬೇಕು.

ಅಕ್ರಮ ಮರಳು ಗಣಿಗೆ ತಡೆ

  • ಕೊಡಗಿನ ಕೆಲವೆಡೆ ನದಿಗಳ ಪಾತ್ರದಲ್ಲಿ ಭಾರೀ ಕುಸಿತವಾಗಿದೆ. ಇದಕ್ಕೆ ಆಳವಾದ ಮರಳು ಗಣಿಗಾರಿಕೆಯೇ ಕಾರಣ. ಕೊಡಗಿನಲ್ಲಿ ಮತ್ತು ಮಲೆನಾಡಿನ ಇತರೆ ಜಿಲ್ಲೆಗಳ ನದೀತಟದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಕಟ್ಟುನಿಟ್ಟಿನ ಕ್ರಮಗಳಿಂದ ಸಂಪೂರ್ಣವಾಗಿ ನಿಲ್ಲಿಸಬೇಕು.

ಕಾಡುಕೊಯ್ತದ ಯೋಜನೆಗಳಿಗೆ ನಿರ್ಬಂಧ

  • ಕೊಡಗಿನ ಮೂಲಕ ಹಾದು ಹೋಗುವ ಎರಡು ರೈಲು ಯೋಜನೆಗಳು ಮತ್ತು ನಾಲ್ಕು ಬಹು ಪಥಗಳ ರಾಷ್ಟ್ರೀಯ ಹೆದ್ದಾರಿಗಳನ್ನು ಯೋಜಿಸಲಾಗಿದೆ. ಇವೆಲ್ಲವೂ ಕಾಡನ್ನು ಮತ್ತು ಗುಡ್ಡಗಳನ್ನು ಕೊಯ್ದು ಮಾಡುವ ಯೋಜನೆಗಳು. ಇವನ್ನು ಕೊಡಗಿನ ಜನರ ಹಿತದ ದೃಷ್ಟಿಯಿಂದ ರದ್ದುಗೊಳಿಸಬೇಕು.

ಪ್ರವಾಸೋದ್ಯಮಕ್ಕೆ ಕಡಿವಾಣ

  • ಕೊಡಗು ಮತ್ತು ಮಲೆನಾಡಿನ ಜಿಲ್ಲೆಗಳು ಕ್ರಮೇಣವಾಗಿ ಪ್ರವಾಸೋದ್ಯಮ ಆಧಾರಿತ ಅಭಿವೃದ್ಧಿ ಸಾಧಿಸಲು ಯತ್ನಿಸುತ್ತಿವೆ. ಆದರೆ ಅನಿರ್ಬಂಧಿತ ಪ್ರವಾಸೋದ್ಯಮದಿಂದ ಪ್ರಕೃತಿಗೆ ಅಪಾಯ ಕಾದಿದೆ. ಈ ಹಿನ್ನೆಲೆಯಲ್ಲಿ ಗಿರ್‌ ಅಭಯಾರಣ್ಯ ಮತ್ತು ಗಂಗೋತ್ರಿ ಗ್ಲೇಸಿಯರ್‌ನಲ್ಲಿ ಮಾಡಿದಂತೆ ನಿಗದಿತ ದಿನವಹಿ ಸಂಖ್ಯೆಯ, ಶುಲ್ಕ ಸಹಿತದ ಪ್ರವಾಸಿ ಪಾಸ್‌ ರೂಪಿಸಬೇಕು.

ಪಾರಿಸರಿಕ ಸೇವೆಗಳಿಗೆ ಪಾವತಿ ವ್ಯವಸ್ಥೆ (ಪಿಇಎಸ್‌)

  • ಜಲಮೂಲಗಳನ್ನು ಸಂರಕ್ಷಿಸುವ ಮಲೆನಾಡು ಪ್ರದೇಶಗಳ ಮೇಲ್‌ಭಾಗದ ಜನರಿಗೆ ಕೆಳಭಾಗದಲ್ಲಿರುವ ಉದ್ಯಮಗಳು, ಸರ್ಕಾರ – ಎಲ್ಲ್ರೂ ಉತ್ತೇಜಕಗಳನ್ನು ನೀಡುವ  ಪಾರಿಸರಿಕ ಸೇವೆಗಳಿಗೆ ಪಾವತಿ ವ್ಯವಸ್ಥೆ (ಪಿಇಎಸ್‌)ಯನ್ನು ಜಾರಿಗೊಳಿಸಬೇಕು. ಇದರಿಂದ ಮೂಲನಿವಾಸಿಗರು ತಮ್ಮ ಭೂಮಿಯನ್ನು ತಾವೇ ಇಟ್ಟುಕೊಳ್ಳುವಂತಾಗುತ್ತದೆ. ಇಂಥದ್ದೊಂದು ವ್ಯವಸ್ಥೆಯನ್ನು ಪೊನ್ನಂಪೇಟೆಯ ಅರಣ್ಯ ಕಾಲೇಜು ಸಿದ್ಧಪಡಿಸಿದ್ದು ಅದನ್ನು ಆಧಾರವಾಗಿ ಇಟ್ಟುಕೊಳ್ಳಬಹುದಾಗಿದೆ.

ಅಣೆಕಟ್ಟುಗಳಿಗೆ ಸಂಪೂರ್ಣ ನಿಷೇಧ

  • ಒಂದುವೇಳೆ ಬರಪೊಳೆ ಅಣೆಕಟ್ಟು ಕಟ್ಟಿದ್ದರೆ ದಕ್ಷಿಣ ಕೊಡಗಿನಲ್ಲಿ ಭಾರೀ ಅನಾಹುತ ಉಂಟಾಗುತ್ತಿತ್ತು. ಕೊಡಗು ಮತ್ತು ಮಲೆನಾಡಿನ ಇತರೆ ಜಿಲ್ಲೆಗಳಲ್ಲಿ ಇನ್ನು ಬೇರಾವ ಅಣೆಕಟ್ಟುಗಳನ್ನೂ ನಿರ್ಮಿಸದಂತೆ ನಿರ್ಧಾರ ಕೈಗೊಳ್ಳಬೇಕು.

ಅರಣ್ಯ ರಕ್ಷಣೆ ಬಲವರ್ಧನೆ

  • ಶಿಥಿಲಗೊಂಡ ಕಾಡನ್ನು ಉತ್ತಮಗೊಳಿಸಲು ಈಗಿರುವ ವ್ಯವಸ್ಥೆಯಲ್ಲೇ ನಿವೃತ್ತ ಮತ್ತು ಸದೃಢವಾಗಿರುವ ಸೈನಿಕರು ಮತ್ತು ಅಧಿಕಾರಿಗಳನ್ನು ಸೇರಿಸಿ ಅರಣ್ಯ ರಕ್ಷಣೆಯ ವ್ಯವಸ್ಥೆಯನ್ನು ಬಲಪಡಿಸಬೇಕು.   .  ಅದಲ್ಲದೆ, ಪರಿಹಾರ ಕಾರ್ಯಗಳಿಗೆ ಈ ಸಮಿತಿಯ ಸದಸ್ಯರು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸೂಕ್ತ ಸಲಕರಣೆಗಳನ್ನು ( ದೋಣಿಗಳು, ತರಬೇತಾದ ನಾಯಿಗಳು, ಟೆಂಟುಗಳು ಇತ್ಯಾದಿ) ಒದಗಿಸಬೇಕು. ರೈಲುಮಾರ್ಗ, ರಸ್ತೆಗಳನ್ನು ನಿರ್ಮಿಸಲು 10 ಸಾವಿರ ಕೋಟಿಗಳನ್ನು ಕೂಡಲೇ ಬಿಡುಗಡೆ ಮಾಡಲು ಸಿದ್ಧವಿರುವ ಸರ್ಕಾರಗಳು ಈ ಸಮಿತಿಗೆ ಬೇಕಾದ 48 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಅಸಾಧ್ಯವೇನಲ್ಲ.

ಇಡೀ ರಾಜ್ಯಕ್ಕಾಗಿ ಕ್ರಿಯಾ ಯೋಜನೆ

ಮಾನವರೂಪಿತ ಕೃತ್ಯಗಳಿಂದ ಜಗತ್ತಿನಲ್ಲಿ  ಹವಾಗುಣ ವೈಪರೀತ್ಯವಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಗಂಭೀರ ಸನ್ನಿವೇಶವನ್ನು ಗಮನಿಸಬೇಕಿದೆ. ರಾಜ್ಯದ ಶೇಕಡಾ 77 ರಷ್ಟು ಪ್ರದೇಶವು ಒಣ ಅಥವಾ ಅರೆ ಒಣ ಪ್ರದೇಶವಾಗಿದೆ. ಶೇಕಡಾ 54ರಷ್ಟು  ಪ್ರದೇಶವು ಸದಾ ಬರಗಾಲಕ್ಕೆ ತುತ್ತಾಗುತ್ತಿದೆ. ಬರಗಾಲ ಸಾಧ್ಯತೆಯಲ್ಲಿ  ಕರ್ನಾಟಕವು ದೇಶದಲ್ಲೇ ಎರಡನೆಯ ದೊಡ್ಡ ರಾಜ್ಯವಾಗಿದೆ (ಮೊದಲನೆಯದು ರಾಜಸ್ಥಾನ).  ರಾಜ್ಯದ ಕಾಡು ಪ್ರದೇಶದ ಪ್ರಮಾಣವು ಒಟ್ಟು ಪ್ರದೇಶಕ್ಕಿಂತ ಶೇಕಡಾ 20ಕ್ಕಿಂತ ಕಡಿಮೆ ಇರುವುದು ಅತ್ಯಂತ  ಆತಂಕಕಾರಿ ಸ್ಥಿತಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ನಮ್ಮ ರಾಜ್ಯವು ಶೇಕಡಾ 33 ರಷ್ಟು ಪ್ರದೇಶದಲ್ಲಿ ಕಾಡನ್ನು ಹೊಂದಿರಬೇಕಿದೆ.  ಕರ್ನಾಟಕವು ನಗರೀಕರಣಗೊಂಡ ರಾಜ್ಯಗಳಲ್ಲಿ ದೇಶದಲ್ಲೇ ಐದನೆಯ ಸ್ಥಾನವನ್ನು ಪಡೆದಿದೆ.  

ನಗರವಲ್ಲ, ನಾಡು ಕೇಂದ್ರಿತ ಚಿಂತನೆಯ ಕ್ರಮಗಳು

ಈಗಂತೂ ಕೇವಲ ಬೆಂಗಳೂರು ಮಹಾನಗರಕ್ಕಾಗಿಯೇ ಇಡೀ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳಿವೆ ಎಂದು ಸರ್ಕಾರಗಳು ಭಾವಿದಂತಿದೆ. ಅಭ್ಯುದಯವೆಂದರೆ ಕೇವಲ ಜಿಡಿಪಿ ಆಧಾರಿತ ನಗರೀಕರಣವಲ್ಲ; ನಾಡಿನ ಸಂಪನ್ಮೂಲಗಳು ನಾಡಿನ ಎಲ್ಲ ಜನತೆಗೆ ಸೇರಿವೆ; ಆದ್ದರಿಂದ ಬೆಂಗಳೂರು ಕೇಂದ್ರಿತ ಚಿಂತನೆಯಿಂದ ಹೊರಬಂದು ಇಡೀ ನಾಡಿಗೆ ಒಳಿತಾಗುವ ಪರಿಸರ ಸ್ನೇಹಿ, ಸಮಷ್ಟಿಹಿತದ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಬೆಂಗಳೂರಿಗೆಂದೇ ಯೋಜಿತವಾದ ಬೃಹತ್‌ ಯೋಜನೆಗಳನ್ನು ಕೈಬಿಡಬೇಕು.  

ಈ ಸನ್ನಿವೇಶದಲ್ಲಿ ರಾಜ್ಯಸರ್ಕಾರವು ಈ ಅಂಶಗಳತ್ತ ಹೆಚ್ಚು ಗಮನ ನೀಡಬೇಕಿದೆ:

  • ರಾಜ್ಯದ ಕಾಡಿನ ಒಟ್ಟಾರೆ ಪ್ರಮಾಣವನ್ನು ಶೇಕಡಾ 33ಕ್ಕೆ ಮತ್ತು ಗುಡ್ಡಗಾಡು ಪ್ರದೇಶಗಳ ಕಾಡಿನ ಪ್ರಮಾಣವನ್ನು ಶೇಕಡಾ 66ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಕಾಡನ್ನು ಇತರೆ ಉದ್ದೇಶಗಳಿಗೆ ಬಳಸುವುದಕ್ಕಾಗಿ ಪರಿವರ್ತನೆ ಮಾಡುವುದಕ್ಕೆ ಸಂಪೂರ್ಣ ನಿಷೇಧ ಹಾಕಬೇಕು. ಇದಕ್ಕಾಗಿ ಎಲ್ಲ ಸರ್ಕಾರಿ ಇಲಾಖೆಗಳು, ವಿಶೇಷವಾಗಿ ಅರಣ್ಯ ಇಲಾಖೆಯು ಶ್ರಮಿಸಬೇಕು. ಕಾಡು ಬೆಳೆಸಲು ಸ್ಥಳೀಯ ತಳಿಗಳನ್ನೇ ಬಳಸಬೇಕು; ಅದರಲ್ಲೂ ಶೇಕಡಾ 50 ರಷ್ಟು ಮರಗಳು ಹಣ್ಣು, ಹೂವಿನ ವೈವಿಧ್ಯಮಯ ಮರಗಳಾಗಿರಬೇಕು. ಪ್ರತಿವರ್ಷ ಶೇಕಡಾ 5 ರಷ್ಟು ಕಾಡನ್ನು ಹೆಚ್ಚಿಸುವ ಗುರಿ ಹೊಂದಬೇಕು. 
  • ಮರಗಳನ್ನು ಬೆಳೆಯಲು ಜನರಿಗೆ ಉತ್ತೇಜಕಗಳನ್ನು ನೀಡಬೇಕು. ಬಂಜರು, ರೆವೆನ್ಯೂ ಪ್ರದೇಶ, ಸರ್ಕಾರಿ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಬೇಕು.
  • ಪರಿಸರ ರಕ್ಷಣೆಗಾಗಿ ನದೀ ಅಚ್ಚುಕಟ್ಟು ವಲಯ, ಕೃಷಿ ವಲಯ ಮತ್ತು ನಗರ ವಲಯ ಎಂಬ ಮೂರು ವಲಯಗಳನ್ನು ಗುರುತಿಸಬೇಕು; ನದಿ ಅಚ್ಚುಕಟ್ಟು ವಲಯದಲ್ಲಿ ಯಾವುದೇ ಸಾಲು ಕೊಯ್ತದ (ರಸ್ತೆ, ರೈಲು, ವಿದ್ಯುತ್ ಜಾಲ ಇತ್ಯಾದಿ) ಯೋಜನೆಗಳನ್ನು ಹೊಸದಾಗಿ ರೂಪಿಸಬಾರದು. ಕೃಷಿ ವಲಯದಲ್ಲಿ ಸ್ಥಳೀಯರ ಮತ್ತು ಗೃಹ ಮಟ್ಟದ ವ್ಯವಹಾರಗಳಿಗೆ ಹೊರತಾಗಿ ಬೇರೆ ಭೂ ಪ್ರಿವರ್ತನೆಗೆ ಅವಕಾಶ ನೀಡಬಾರದು; ಇಲ್ಲಿ ತೇವಾಂಶದ ಪ್ರದೇಶಗಳನ್ನು ವಿಶೇಷ ಒತ್ತುಕೊಟ್ಟು ಸಂರಕ್ಷಿಸಬೇಕು. ಅಂತರ್ಜಲವನ್ನು ಭಾರೀ ಪ್ರಮಾಣದಲ್ಲಿ ಬಳಸುವ ವಸತಿ ಸಮುಚ್ಚಯ, ರೆಸಾರ್ಟ್‌ಗಳನ್ನು ಇಲ್ಲಿ ಸ್ಥಾಪಿಸಬಾರದು. ನಗರ ವಲಯದಲ್ಲಿ ಸ್ಥಳೀಯ ಜನತೆಯ ಅಗತ್ಯಕ್ಕೆ ತಕ್ಕಂತೆ ಮಾತ್ರವೇ ಅಭಿವೃದ್ಧಿ ಮಾಡಬೇಕು; ಬಾಹ್ಯ ಪ್ರದೇಶಗಳಿಂದ ಭಾರೀ ಸಂಖ್ಯೆಯ ವಲಸಿಗರಿಗೆ ಮನೆ ಕಟ್ಟುವುದನ್ನು ತಡೆಯಬೇಕು.
  • ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ಕಾರಣವಾಗುವ, ಜನರ ವಲಸೆಗೆ ಕಾರಣವಾಗುವ ಯಾವುದೇ ಬೃಹತ್‌ ಉದ್ಯಮಗಳನ್ನು ಬಿಡಬಾರದು. ಬದಲಿಗೆ, ಸ್ಥಳೀಯ ಜನತೆಗೆ ತೃಪ್ತಿದಾಯಕ ವರಮಾನ ನೀಡುವ, ಪರಿಸರ ಸ್ನೇಹಿ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಬೇಕು.    
  • ಪರಿಸರ ಸಂಬಂಧಿತ ಯಾವುದೇ ಯೋಜನೆ, ಉಪಕ್ರಮಗಳನ್ನು ಜಾರಿ ಮಾಡುವ ಮುನ್ನ ಆಯಾ ಗ್ರಾಮ ಪಂಚಾಯತ್‌ಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿ, ಕಾಡಿನ ಹಕ್ಕುಗಳನ್ನು ಮಾನ್ಯ ಮಾಡಿ, ಈಗಿರುವ ಪಾರಿಸರಿಕ ಸನ್ನಿವೇಶಗಳನ್ನು ಗಮನಿಸಿಯೇ ತೀರ್ಮಾನ ಕೈಗೊಳ್ಳಬೇಕು.  
  • ರಾಜ್ಯದೆಲ್ಲೆಡೆ ಮರಗಳನ್ನು ಕಡಿಯುವ ಯೋಜನೆಗಳನ್ನು ಕೈಬಿಟ್ಟು ಕಡಿಮೆ ಹಾನಿ ಮಾಡುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು.
  • ಈಗಿರುವ ದೇವರ ಕಾಡುಗಳನ್ನು, ಪವಿತ್ರ ವನಗಳನ್ನು ಸಂರಕ್ಷಿಸುವ ಕ್ರಮಗಳನ್ನು ಕೈಗೊಳ್ಳಬೇಕು.
  • ರಾಜ್ಯದ ಎಲ್ಲ ಜಲಮೂಲಗಳನ್ನು ರಕ್ಷಿಸಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಕಚೇರಿಗಳಲ್ಲಿ, ಉದ್ಯಮ ಆವರಣಗಳಲ್ಲಿ ಮಳೆನೀರು ಸಂಗ್ರಹ ಮತ್ತು ಅಂತರ್ಜಲ ಮರುಪೂರಣವನ್ನು ಕಡ್ಡಾಯ ಮಾಡಬೇಕು. ರೆಸಾರ್ಟ್‌, ಹೋಟೆಲ್‌, ಬೃಹತ್‌ ಉದ್ಯಮಗಳ ತ್ಯಾಜ್ಯ ನೀರನ್ನು ಮರುಬಳಕೆ ಮಾಡುವುದನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು;
  • ಉದ್ಯಮಗಳ ವಿಷಪೂರಿತ ರಾಸಾಯನಿಕಗಳು ನದಿಗಳಿಗೆ ಸೇರುವುದನ್ನು ತಪ್ಪಿಸಬೇಕು. ಅಣೆಕಟ್ಟು, ಕೆರೆಗಳಲ್ಲಿ ಸೇರಿಕೊಂಡ ಹೂಳನ್ನು ತೆಗೆಯಲು ಸಮಗ್ರ ಕಾರ್ಯಕ್ರಮ ರೂಪಿಸಬೇಕು. ತೆರೆದ ಬಾವಿಗಳನ್ನು ಪುನಶ್ಚೇತನಗೊಳಿಸಬೇಕು.
  • ನದೀತಟಗಳನ್ನು, ಅಚ್ಚುಕಟ್ಟು ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಗಳಿಗೆ ಬಳಕೆ ಮಾಡಬಾರದು. ವಸತಿ ಮತ್ತು ಉದ್ಯಮ ಪ್ರದೇಶಗಳನ್ನು ನಿರ್ದಿಷ್ಟವಾಗಿ ಗುರುತಿಸಿ ಔದ್ಯಮಿಕ ತ್ಯಾಜ್ಯಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಈಗಿರುವ ವ್ಯವಸ್ಥೆಯನ್ನು ಬಲಪಡಿಸಬೇಕು.
  • ನಗರೀಕರಣವನ್ನು ತಡೆಗಟ್ಟಿ ಒಟ್ಟಾರೆ ನಗರ ಜನಸಂಖ್ಯಾ ಪ್ರಮಾಣವನ್ನು ಶೇಕಡಾ 30ಕ್ಕಿಂತ ಹೆಚ್ಚಾಗದಂತೆ ನೋಡಿಕೊಳ್ಳಬೇಕು.
  • ಇಂಗಾಲಾಮ್ಲವನ್ನು ಹೆಚ್ಚು ಕಕ್ಕುವ ಶ್ರೀಮಂತ ದೇಶಗಳು ಹಿಂದುಳಿದ ಹಾಗೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಅರಣ್ಯವನ್ನು ಬೆಳೆಸಲು ಆರ್ಥಿಕ ಸಹಾಯವನ್ನು ಮಾಡಬೇಕು ಎನ್ನುವುದು ಮುಖ್ಯ ತೀರ್ಮಾನವಾಗಿದ್ದು, ಇದಕ್ಕಾಗಿ ರೆಡ್+ : ಅರಣ್ಯ ನಾಶ ಹಾಗೂ ಅವನತಿಯಿಂದಾಗುವ ಮಾಲಿನ್ಯವನ್ನು ಇಳಿಸುವ ಅಥವಾ ಕಡಿಮೆ ಮಾಡುವ ಯೋಜನೆ, [Reducing Emissions from Deforestation and Forest Degradation (REDD)] ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯನ್ನು ಖುಷ್ಕಿ ಜಮೀನಿನಲ್ಲಿ ಕಾಡು ಬೆಳೆಸುವ ರೈತರಿಗೆ ಅನುಕೂಲವಾಗುವಂತೆ ಅನುಷ್ಠಾನಗೊಳಿಸಬೇಕು.

ಈ ಎಲ್ಲ ಸಲಹೆಗಳನ್ನು ಕ್ರಿಯಾಯೋಜನೆ ಮೂಲಕ ಜಾರಿಗೊಳಿಸಲು ಸರ್ಕಾರವು ಒಂದು ಸಮುದಾಯ ಭಾಗಿತ್ವದ, ತಜ್ಞರನ್ನು ಒಳಗೊಂಡ ಕಾರ್ಯಪಡೆಯನ್ನು ಸ್ಥಾಪಿಸಿ, ಕಾಲಮಿತಿಯ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕಿದೆ. ಇದಕ್ಕಾಗಿ2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಹವಾಗುಣ ವೈಪರೀತ್ಯ ನಿರ್ವಹಣೆ ಕುರಿತ ರಾಜ್ಯ ಕ್ರಿಯಾ ಯೋಜನೆಯ ಜನ ಸಂಪರ್ಕ ಆಧಾರಿತ ವರದಿಯನ್ನು ಪರಿಗಣಿಸಲು ಮತ್ತು ಆಂಗೀಕೃತ ಶಿಫಾರಸುಗಳನ್ನು ಕೂಡಲೇ ಜಾರಿ ಮಾಡಲು ಕೋರುತ್ತೇವೆ.

ಕೊಡಗಿನಲ್ಲಿ ನಡೆದ ದುರಂತವನ್ನು ಒಂದು ಪ್ರತ್ಯೇಕ ವಿದ್ಯಮಾನ ಎಂದು ಪರಿಗಣಿಸದೆ, ಜಾಗತಿಕವಾಗಿ ನಡೆಯುತ್ತಿರುವ ಮರಗಳ ನಾಶದ, ಪರಿಸರ ಶಿಥಿಲತೆಯ ಸಂಕೇತ ಎಂದು ಗಂಭೀರವಾಗಿ ತಿಳಿಯಬೇಕಿದೆ. ಕೊಡಗಿನ ದುರಂತವು ಇಡೀ ದೇಶಕ್ಕೇ ಅಪಾಯದ ಕರೆಗಂಟೆ ಎಂದೇ ನಾವು ತಿಳಿದಿದ್ದೇವೆ. ಇನ್ನಾದರೂ ಕ್ಷಿಪ್ರ ಮತ್ತು ಸುಸ್ಥಿರ ಕ್ರಮಗಳನ್ನು ಕೈಗೊಂಡು ಮುಂದಿನ ತೀವ್ರ ಸ್ತರದ ದುರಂತಗಳನ್ನು ತಪ್ಪಿಸಬೇಕು; ಕರ್ನಾಟಕವು ಇಡೀ ದೇಶಕ್ಕೇ ಪರಿಸರ ಸಂರಕ್ಷಣೆ, ಹವಾಗುಣ ವೈಪರೀತ್ಯ ನಿರ್ವಹಣೆಯಲ್ಲಿ ಮಾದರಿಯಾಗುವಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾವು ನಿಮ್ಮಲ್ಲಿ ವಿನಂತಿಸುತ್ತೇವೆ.

ತಮ್ಮ ವಿಶ್ವಾಸಿಗಳು

ಬೇಳೂರು ಸುದರ್ಶನ, ರಾಮನಾಥ ಮಯ್ಯ

(ಟ್ರಸ್ಟೀಗಳು, ಮಿತ್ರಮಾಧ್ಯಮ ಟ್ರಸ್ಟ್‌ )

Share. Facebook Twitter Pinterest LinkedIn Tumblr Email
Previous Articleಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
Next Article Sardar Patel Memorial Speech by Beluru Sudarshana
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!

June 5, 2024

Comments are closed.

ಲೇಖನಗಳು, ಸುದ್ದಿ
  • ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!
  • ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • Sardar Patel Memorial Speech by Beluru Sudarshana
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • New study from CSE exposes massive environmental dumping of old and used vehicles in Africa and South Asia
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • Requiem for the desktop PC? Not yet!
  • The heaven created by trinity of Hindustani music turns 50!
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • Climate Change Report Warns of Dramatically Warmer World This Century
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • SC upholds constitutional validity of Right to Education Act : Judgement FULL TEXT
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • Future Electricity Supply Options for India
  • How essential is the nuclear power option for India?
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • January 23: Participate in the Public Consultation (Bangalore) on Bt Brinjal
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • Bhairappa’s interview 2002
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.