Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಸುದ್ದಿ»ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
ಸುದ್ದಿ

ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ

ಬೇಳೂರು ಸುದರ್ಶನBy ಬೇಳೂರು ಸುದರ್ಶನAugust 12, 2014Updated:May 19, 2025No Comments5 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಸರಕಾರಿ ಸ್ವಾಮ್ಯದ ಗೇರು ಅಭಿವೃದ್ಧಿ ನಿಗಮ ಸಾವಿರಾರು ಹೆಕ್ಟೇರು ಭೂಮಿಯಲ್ಲಿ ಇಪ್ಪತ್ತಕ್ಕೂ ಹೆಚ್ಚು ವರ್ಷಗಳ ಕಾಲ ಎಂಡೋಸಲ್ಫಾನ್‌ ಸುರಿದ ೧೦ ಸಾವಿರಕ್ಕೂ ಅಧಿಕ ಮಕ್ಕಳು ರೋಗಗ್ರಸ್ತರಾಗಿದ್ದಾರೆ. ಆದುದರಿಂದ ಸರಕಾರದಿಂದ ಸೂಕ್ತ ಪರಿಹಾರ ಪಡೆಯುವುದು ಅವರ ಹಕ್ಕು, ಅದು ಭಿಕ್ಷೆಯಲ್ಲವೆಂದು ಸರಕಾರಿ ಅಧಿಕಾರಿಗಳು ತಿಳಿದುಕೊಳ್ಳಬೇಕಾಗಿದೆ.2014 August 12 ppt endo 2

ಉಡುಪಿಯ ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಏರ್ಪಡಿಸಿದ ಕುಂದಾಪುರದ ಹಳ್ಳಿಗಳು ಕಂಡ “ಎಂಡೋ ದುರಂತ” ವಿಚಾರ ಸಂಕೀರ್ಣದಲ್ಲಿ ಅಧಿಕಾರಿಗಳ ನಡೆ ಹಾಗೂ ನಿಲುವುಗಳನ್ನು ಪ್ರಶ್ನಿಸಲಾಯಿತು. ಎಂಡೋಪೀಡಿತರಾಗಿ ಮರಣ ಹೊಂದಿದವರ ಮಕ್ಕಳ ಹೆತ್ತವರಿಗೆ ಪರಿಹಾರ ನೀಡುವ ಕುರಿತು ಆರೋಗ್ಯ ಇಲಾಖೆಯ ಕಾರ್ಯದರ್ಶಿ ಶಿವಶೈಲಂ ಅವರು ತಳೆದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಲಾಯಿತು.

ಉಚ್ಚ ನ್ಯಾಯಾಲಯ ಘೋಷಿಸಿರುವ ಮಾಸಾಶನ, ಉಚಿತ ಚಿಕಿತ್ಸೆಯ ಕಾರ್ಡು ಇತ್ಯಾದಿಗಳು ತಮಗೆ ತಲುಪಿಲ್ಲವೆಂದು ೨೦೦ಕ್ಕೂ ಅಧಿಕ ಎಂಡೋ ಸಂತ್ರಸ್ತರು ಹೈಕೋರ್ಟು ಪ್ರತಿನಿಧಿ ವೈಶಾಲಿ ಹೆಗ್ಡೆಯವರಿಗೆ ನೀಡಿದ್ದ ದೂರುಗಳ ಸತ್ಯಾಸತ್ಯತೆಯನ್ನು ತಿಳಿಯಲು ಕುಂದಾಪುರ ತಾಲೂಕಿನ ೨೭ ಹಳ್ಳಿಗಳಿಗೆ ಎಂಡೋ ಕಾರ್ಯಕರ್ತರು ನೀಡಿದ್ದ ಭೇಟಿಯ ಹಿನ್ನೆಲೆಯಲ್ಲಿ ಈ ವಿಚಾರ ಸಂಕೀರಣವನ್ನು ಏರ್ಪಡಿಸಲಾಗಿತ್ತು.

ಇನ್ನೂ ತಲುಪದ ಮಾಶಾಸನ, ಸ್ಮಾರ್ಟ್ ಕಾರ್ಡ್

ಹತ್ತು ದಿನಗಳ ಹಿಂದೆ ವೈಶಾಲಿ ಹೆಗ್ಡೆಯವರು ಕುಂದಾಪುರಕ್ಕೆ ಭೇಟಿ ನೀಡಿದಾಗ ಆಗಸ್ಟ್ ೪ರೊಳಗೆ ಎಲ್ಲಾ ಸಂತ್ರಸ್ತರ ಖಾತೆಗಳಿಗೆ ಹಿಂದಿನ ಬಾಕಿ ಸಹಿತ ೬ ತಿಂಗಳು ಮಾಶಾಸನವನ್ನು ಜಮಾ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ನೀಡಿದ್ದು ಇನ್ನೂ ಕಾರ್ಯಗತವಾಗಿಲ್ಲ. ಪ್ರತಿ ತಿಂಗಳ ೧೦ರೊಳಗೆ ಮಾಶಾಸನ ನೀಡಲಾಗುವುದು ಎಂದು ಆರೋಗ್ಯ ಅಧಿಕಾರಿಗಳು ಜೂನ್ ತಿಂಗಳಲ್ಲಿ ಹೈಕೋರ್ಟಿಗೆ ಲಿಖಿತದಲ್ಲೂ ನೀಡಿದ್ದರು. ಎಂಡೋ ಕಾರ್ಯಕರ್ತರು ವಿಚಾರಿಸಿದ ೩೦೦ಕ್ಕೂ ಅಧಿಕ ಸಂತ್ರಸ್ತರಲ್ಲಿ ಹೆಚ್ಚಿನವರಿಗೆ -ಬ್ರವರಿ ತಿಂಗಳ ಮಾಶಾಸನ ಬಂದಿದ್ದರೆ ಕೆಲವರಿಗೆ ೨ ತಿಂಗಳ ಮಾಶಾಸನ ಸಿಕ್ಕಿದೆ. -ಬ್ರವರಿ ತಿಂಗಳಿಂದ ಜುಲೈ ತಿಂಗಳವರೆಗಿನ ಮಾಶಾಸನ ಪಡೆದವರಾರೂ ಕಾರ್ಯಕರ್ತರಿಗೆ ಸಿಗಲಿಲ್ಲ!
ಎಂಡೋ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡುವುದಕ್ಕಾಗಿ ಆರೋಗ್ಯ ಇಲಾಖೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ಅದಕ್ಕಾಗಿ ರೂಪಿಸಿರುವ ಸ್ಮಾರ್ಟ್‌ಕಾರ್ಡ್ ತಮಗೆ ಇನ್ನೂ ಸಿಕ್ಕಿಲ್ಲವೆಂದು ಹಲವಾರು ಸಂತ್ರಸ್ತರು ದೂರಿದ್ದಾರೆ.

ಅಂಗವಿಕಲತೆ ಪ್ರಮಾಣ

ಉಚ್ಚನ್ಯಾಯಾಲಯದ ಆದೇಶದ ಪ್ರಕಾರ ೨೫ ಶೇಕಾಡಾಕ್ಕಿಂತ ಕೆಳಗಿನ ಅಂಗವಿಕಲತೆಯುಳ್ಳವರಿಗೆ ಮಾಶಾಸನವಿಲ್ಲ. ೨೫ರಿಂದ ೬೦ ಶೇಕಡಾ ಅಂಗವಿಕಲತೆಯುಳ್ಳವರಿಗೆ ತಿಂಗಳಿಗೆ ೧,೫೦೦ ರೂ ಮಾಶಾಸನ. ೬೦ ಶೇಕಡಾಗಿಂತ ಅಧಿಕ ಅಂಗವಿಕಲರಿಗೆ ೩,೦೦೦ ರೂ. ಮಾಶಾಸನ ಸಿಗಬೇಕಾಗಿದೆ. ಹಾಗಾದರೆ ೬೦ ಶೇಕಡಾ ಅಂಗವಿಕಲರು ಯಾವ ಗುಂಪಿಗೆ ಸೇರುತ್ತಾರೆ? ಆರೋಗ್ಯ ಇಲಾಖೆಯ ಪ್ರಕಾರ ಅವರೆಲ್ಲರು ಕೆಲಸ ಮಾಡಲು ಅಸಾಧ್ಯವಿರುವಷ್ಟು ಅಂಗವಿಕಲರು. ಆದುದರಿಂದ ಅವರೆಲ್ಲರನ್ನು ೩,೦೦೦ ರೂ. ಮಾಶಾಸನದ ಗುಂಪಿಗೆ ಸೇರಿಸಿದ್ದಾರೆ. ಆದರೆ ರೆವೆನ್ಯೂ ಇಲಾಖೆ ಪ್ರಕಾರ ಅವರೆಲ್ಲ ೧,೫೦೦ ರೂ. ಮಾಶಾಸನಕ್ಕೆ ಮಾತ್ರ ಅರ್ಹರು! “ಈ ಹಿಂದೆ ನಿಮಗೆ ೩,೦೦೦ ರೂ. ಮಾಶಾಸನ ಎಂದು ತಪ್ಪಾಗಿ ತಿಳಿಸಲಾಗಿತ್ತು. ಇನ್ನು ಮುಂದೆ ನಿಮಗೆ ಸಿಗುವುದು ೧,೫೦೦ ರೂಪಾಯಿ” ಎಂಬ ಶರಾ ನೀಡಿದ ದಾಖಲೆಯೂ ಇದೆ.

ಹುಟ್ಟಿದ್ದು ಯಾವಾಗ?

ವೈದ್ಯಕೀಯ ಶಿಬಿರಗಳಿಗೆ ಸಂತ್ರಸ್ತರು ಬಂದಾಗ ಅಥವಾ ರೆವೆನ್ಯೂ ಅಧಿಕಾರಿಗಳಲ್ಲಿ ವಿಚಾರಿಸಿದಾಗ ಅಧಿಕಾರಿಗಳು ಕೇಳುವ ಮೊದಲ ಪ್ರಶ್ನೆ – “ನೀವು ಹುಟ್ಟಿದ್ದು ಯಾವಾಗ?” ಅರಣ್ಯ ಇಲಾಖೆಯವರು ೧೯೮೦ರಿಂದ ಎಂಡೋ ಸಲ್ಫಾನ್‌ ಸಿಂಪಡಿಸಲು ಆರಂಭಿಸಿರುವುದರಿಂದ ಅದರ ಅನಂತರ ಹುಟ್ಟಿದವರು ಮಾತ್ರ ಪರಿಹಾರ ಪಡೆಯಲು ಯೋಗ್ಯರು ಎಂಬುದು ಅವರ ನಿಲುವು. ವಾಸ್ತವ ಸಂಗತಿ ಏನೆಂದರೆ, ಈ ನಿಲುವು ಅನ್ವಯಿಸುವುದು ಹುಟ್ಟಿದಾರಭ್ಯ ಇರುವ ಅಂಗವಿಕಲತೆ, ಪಿಟ್ಸ್ ಮುಂತಾದ ನರಮಂಡಲದ ರೋಗಗಳಿಗೆ ಮಾತ್ರ.

ಎಂಡೋಸಲ್ಫಾನ್‌ ಸೇವಿಸಿದ ಹಿರಿಯರಿಗೆ ಸ್ಕ್ವಿಜೋಪಿನಿಯಾ ಮುಂತಾದ ಮನೋವೈಕಲ್ಯ, ಕುರುಡು, ಚರ್ಮರೋಗ, ಕ್ಯಾನ್ಸರ್, ಹಾರ್ಮೋನ್ ಏರಿಳಿತದ ರೋಗಗಳು ಬರಲು ಸಾಧ್ಯವಿದೆ ಎಂದು ರೆವೆನ್ಯೂ ಅಧಿಕಾರಿಗಳಿಗೆ ತಿಳಿದಿಲ್ಲವೇಕೆ?
ಇಡೂರು ಗ್ರಾಮದ ನಾಗರಾಜ ಶೆಟ್ಟರನ್ನು ವೈದ್ಯಕೀಯ ಶಿಬಿರವೊಂದರಲ್ಲಿ ಪರೀಕ್ಷಿಸಿದ ವೈದ್ಯರು ಅವರಿಗೆ ೮೦ ಶೇಕಡಾ ಅಂಗವಿಕಲತೆ ಎಂದು ಸರ್ಟಿಫಿಕೇಟ್ ನೀಡಿದ್ದರು. ತಹಶೀಲ್ದಾರರೂ ಮುನ್ನೂರು ರೂ.ಗಳ ಮಾಶಾಸನವನ್ನು ಮಂಜೂರು ಮಾಡಿದರು. ಆದರೆ ಮಾಶಾಸನ ಬಂದೇ ಇಲ್ಲ. ಇದೀಗ ಅವರಿಗೆ ಮಾಶಾಸನ ರದ್ದು ಮಾಡಿದ ಸುದ್ದಿ ಬಂದಿದೆ. ಏಕೆಂದರೆ, ಅವರು ಹುಟ್ಟಿದ್ದು ೧೯೭೯ರಲ್ಲಿ !

ನಮ್ಮ ಪಟ್ಟಿಯಲ್ಲಿ ನಿಮ್ಮ ಹಳ್ಳಿ ಇಲ್ಲ

ಅರಣ್ಯ ಇಲಾಖೆಯವರು ಆರೋಗ್ಯ ಇಲಾಖೆಗೆ ಕೊಟ್ಟ ಪಟ್ಟಿಯಲ್ಲಿ ೫೪ ಗ್ರಾಮಗಳಲಿಲ ಮಾತ್ರ ಎರಡು ಸಲ್ಫಾನ್‌ ಸಿಂಪಡಿಸಿದ್ದೇವೆ ಎಂದು ಹೇಳಿದ್ದಾರೆ. ಆದುದರಿಂದ ಆ ೫೪ ಗ್ರಾಮದ ನಿವಾಸಿಗಳಿಗೆ ಮಾತ್ರ ನಾವು ಸಂತ್ರಸ್ತರು ಎಂದು ಪರಿಗಣಿಸುತ್ತೇವೆ ಎಂದು ಆರೋಗ್ಯ ಇಲಾಖೆ ಹಾಗೂ ರೆವೆನ್ಯೂ ಇಲಾಖೆಯ ವಾದ. ಪ್ರತಿಷ್ಠಾನದ ಕಾರ್ಯಕರ್ತರು ಭೇಟಿ ನೀಡಿದ ಖಂಬದಕೋಣೆ, ಗುಲ್ವಾಡಿ, ನಾವುಂದ, ಜಪ್ತಿ, ಶೇಡಿಮನೆ, ಹೆಮ್ಮಾಡಿ, ಕಟ್‌ಬೆಲ್ತೂರು, ಕಿರಿಮಂಜೇಶ್ವರ, ಮಡಾಮಕ್ಕಿ ಮುಂತಾದ ಗ್ರಾಮಗಳಲ್ಲಿ ಸಾಕಷ್ಟು, ಸಂಖ್ಯೆಯಲ್ಲಿ ಎಂಡೋ ಪೀಡಿತರಿರುವುದನು ಗಮನಿಸಿದರು. ಆದರೆ ಆರೋಗ್ಯ ಇಲಾಖೆಯ ವೈದ್ಯಕೀಯ ಶಿಬಿರಗಳು ನಡೆದಾಗ “ನಿಮ್ಮ ಗ್ರಾಮದವರನ್ನು ಸೇರಿಸಲು ನಮಗೆ ಮೇಲಿನಿಂದ ಆದೇಶ ಬಂದಿಲ್ಲ”ವೆಂದು ಇವರೆಲ್ಲರನ್ನೂ ಸಂತ್ರಸ್ತರ ಪಟ್ಟಿಯಿಂದ ಹೊರಗಿಡಲಾಗಿದೆ. ಈ ಎಲ್ಲಾ ಗ್ರಾಮಗಳ ಸಂತ್ರಸ್ತರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಿದಲ್ಲಿ ಸಂತ್ರಸ್ತರ ಸಂಖ್ಯೆ ಇಮ್ಮಡಿಯಾಗಬಹುದು.

ಆದರೆ ಇದೆಲ್ಲ ಎಂಡೋಸಲ್ಫಾನ್‌ ಕ್ರಿಮಿನಾಶಕಕ್ಕೆ ಹೇಗೆ ಗೊತ್ತಾಗಬೇಕು. ಹೆಲಿಕಾಪ್ಟರ್‌ನಲ್ಲಿ ಸಿಂಪಡಿಸಿದ ಎಂಡೋಸಲ್ಫಾನ್‌ ಇತರ ಹಳ್ಳಿಗಳಿಗೂ ತಲುಪಿ ನರಕವನ್ನೇ ಸೃಷ್ಟಿಸಿದೆ.

ಪುತ್ತೂರು ತಾಲೂಕಿನ ನೆಟ್ಟಣಿಗೆ, ವಿಟ್ಲ ಮುಂತಾದ ಗ್ರಾಮಗಳಲ್ಲಿ ಎಂಡೋ ಸಲ್ಫಾನ್‌ ಸಿಂಪಡಿಸಿಯೇ ಇಲ್ಲ. ಆದರೆ ನೆಟ್ಟಣಿಗೆಯಲ್ಲಿ ೧೧೩ ಮಕ್ಕಳು ಎಂಡೋ ಸಂತ್ರಸ್ತರು ಎಂದು ಗುರುತಿಸಲ್ಪಟ್ಟಿದ್ದಾರೆ. ವಿಟ್ಲದಲ್ಲಿ ೭೦ ಮಂದಿ ಸಂತ್ರಸ್ತರಿದ್ದಾರೆ. ಇವೆರಡೂ ಊರಿಗೆ ದೂರದ ಕೇರಳದ ಗೇರು ತೋಟಗಳಲ್ಲಿ ಸಿಂಪಡಿಸಿದ ಕೀಟನಾಶಕ ೧೬ ಕಿ.ಮೀ. ದೂರದ ಹಳ್ಳಿಗಳಿಗೂ ಬಂದಿದೆ ಎಂದರೆ ನೀವು ನಂಬುವಿರಾ? ಇಲ್ಲಿಯ ಪ್ರಶ್ನೆಯೇನೆಂದರೆ ಅವರಿಗೆ ಪರಿಹಾರ ನೀಡುವವರಾರು? ಕೇರಳ ಸರಕಾರವೇ? ಅಥವಾ ಕರ್ನಾಟಕ ಸರಕಾರವೇ?

ಕೆರ್ಗಾಲಿನ ರಾಮ ಮೊಗವೀರರ ಮಗ ಪ್ರಶಾಂತ ೧೮ ವರ್ಷದ ಯುವಕ. ಹುಟ್ಟಿದಂದಿನಿಂದ ಆತ ಹಾಸಿಗೆ ಬಿಟ್ಟು ಎದ್ದದ್ದೇ ಇಲ್ಲ. ಕೆರ್ಗಾಲಿನಲ್ಲಿ ಗೇರುತೋಪು ಇಲ್ಲವೆಂಬ ಕಾರಣಕ್ಕಾಗಿ ವೈದ್ಯಕೀಯ ಶಿಬಿರಕ್ಕೆ ಆತನಿಗೆ ಪ್ರವೇಶವನ್ನೇ ಕೊಟ್ಟಿಲ್ಲ.
ಜಪ್ತಿ ವಾಸುದೇವ ಮಧ್ಯಸ್ತರ ೧೪ ವರ್ಷದ ಮಗಳು ಆಶಾ ೮೦ ಶೇಕಡಾ ಅಂಗವಿಕಲತೆ ಎಂದು ವೈದ್ಯರು ಈ ಹಿಂದೆಯೇ ದೃಢಪತ್ರಿಕೆ ನೀಡಿದ್ದಾರೆ. ಜಪ್ತಿ ಗ್ರಾಮದ ಹೆಸರು ಅರಣ್ಯ ಇಲಾಖೆಯ ಪಟ್ಟಿಯಲ್ಲಿಲ್ಲವೆಂಬ ಕಾರಣಕ್ಕಾಗಿ ಆಕೆಗೆ ಮಾಶಾಸನವಿಲ್ಲ. ಚಿಕಿತ್ಸೆಯೂ ಇಲ್ಲ.

ಅಂಗವಿಕಲತೆ ಅಳೆಯುವುದು ಹೇಗೆ?

ಕಾಲ್ತೋಡು ಗ್ರಾಮದ ಕೋಡುಗದ್ದೆಯ ನಿವಾಸಿ ರತ್ನಾಕರ ಶೆಟ್ಟರ ೪ ವರ್ಷದ ಶ್ರೀಶಾಗೆ ಹುಟ್ಟಿದಾರಭ್ಯ ಮಂದ ದೃಷ್ಟಿ. ದೃಷ್ಟಿ ಸರಿಯಾಗಬಹುದೆಂಬ ಆಶೆಯಲ್ಲಿ ಶೆಟ್ಟರು ತಮಿಳುನಾಡಿನ ಚೆನ್ನೆ ಗೂಹೋಗಿಬಂದರು. ಸಿಕ್ಕ ಸಿಕ್ಕ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಮಗುವಿನ ದೃಷ್ಟಿ ಸುಧಾರಿಸಲಿಲ್ಲ. ಇದೀಗ ಅವಳಿಗೆ ಸಂಪೂರ್ಣ ಕುರುಡು. ಆದರೆ ಆರೋಗ್ಯ ಇಲಾಖೆಯ ವೈದ್ಯರು ನೀಡಿದ ದೃಢ ಪತ್ರದಲ್ಲಿ ಆಕೆಯ ಅಂಗವಿಕಲತೆ ೩೫% ಮಾತ್ರ!

ಬೈಂದೂರಿನ ಡ್ರೈವರ್ ದಿ| ಲಕ್ಷ್ಮೀನಾರಾಯಣರ ೨೨ ವರ್ಷದ ಪುತ್ರಿ ಆಶಾ ಇದುವರೆಗೆ ನಡೆದಿಲ್ಲ. ಹಾಸಿಗೆ ಬಿಟ್ಟು ಏಳಲೇ ಇಲ್ಲ. ಅಪಸ್ಮಾರ ಇದೆ. ತಿಂಗಳಿಗೆ ೨ ಸಾವಿರ ರೂಪಾಯಿಗಳ ಮಾತ್ರೆ ತಿನ್ನುತ್ತಾಳೆ. ಈ ಹಿಂದೆ ವೈದ್ಯರು ನೀಡಿದ ದೃಢ ಪತ್ರದಲ್ಲಿ ಆಕೆಯ ಅಂಗವಿಕಲತೆ ೮೦% ಎಂದು ಇದೆ. ಆದರೆ ಇತ್ತೀಚೆಗೆ ನಡೆದ ವೈದ್ಯಕೀಯ ಶಿಬಿರದಲ್ಲಿ ಆಕೆಯ ಅಂಗವಿಕಲತೆಯನ್ನು ೫೫ ಶೇಕಡಾ ಎಂದು ನಮೂದಿಸಿ ಆಕೆಯ ಮಾಶಾಸನವನ್ನು ಅರ್ಧಕ್ಕೆ ಇಳಿಸಿದ್ದಾರೆ!

ನಡೆಯಲಾರದ ಬಿಜೂರಿನ ನಾಗರತ್ನಾಳಿಗೆ ವೈದ್ಯರು ೫೦ ಶೇಕಡಾ ಅಂಗವಿಕಲತೆ ಎಂದು ನಿರ್ಧರಿಸಿದುದು ಹೇಗೆ ಎಂದು ಅವರೇ ವಿವರಿಸಬೇಕು.

ನಿರ್ಧಾರ ತಿಳಿಸುವುದಿಲ್ಲವೇಕೆ?

ಪ್ರತಿಷ್ಠಾನಕ್ಕೆ ದೂರು ನೀಡಿದ ಅರುವತ್ತಕ್ಕೂ ಹೆಚ್ಚು ಸಂತ್ರಸ್ತರು ಕಳೆದ ಐದಾರು ತಿಂಗಳಿಂದ ಮಾಶಾಸನಕ್ಕೆ ಕಾಯುತ್ತಿದ್ದಾರೆ. ಅವರಿಗೆಲ್ಲ ವೈದ್ಯರು ಪರೀಕ್ಷೆ ಮಾಡಿದ್ದಾರೆ. ಆದರೆ ಮಾಶಾಸನದ ಆದೇಶ ಇನ್ನೂ ಬಂದಿಲ್ಲ. ಒಂದು ವೇಳೆ ಮಾಶಾಸನ ಇಲ್ಲವೆಂದಾದಲ್ಲಿ , ಏಕೆ ಇಲ್ಲ ಎಂಬುದನ್ನಾದರೂ ತಿಳಿಸಲಿ ಎಂದು ಸಂತ್ರಸ್ತರ ಆಗ್ರಹ.

ಮಾಶಾಸನ ಪಡೆಯದೇ ಅಗಲಿದರು

ಶಿರೂರಿನ ನಾಗರಾಜ ಮೆಸ್ತನಿಗೆ ಸದ್ಕೆ ಮಹಮ್ಮದರ ಪುತ್ರ ಜಾಹಿರ್‌ಗೆ ೮೦ ಶೇಕಡಾ ಅಂಗವಿಕಲತೆ ಎಂದು ಈ ಹಿಂದೆಯೇ ವೈದ್ಯರು ಘೋಷಿಸಿದ್ದರು. ಆದರೆ ಅವರಿಗೆ ಮಾಶಾಸನ ಬರಲೇ ಇಲ್ಲ. ಇನ್ನು ಅವರಿಗೆ ಅದರ ಅಗತ್ಯವೂ ಇಲ್ಲ. ಏಕೆಂದರೆ ಇವರಿಬ್ಬರೂ ಈ ಲೋಕ ಬಿಟ್ಟು ತೆರಳಿದ್ದಾರೆ!

ಅಂತೂ ಕುಂದಾಪುರದ ೨೭ ಹಳ್ಳಿಗಳ ೩೦೦ ಕ್ಕೂ ಹೆಚ್ಚಿನ ಮನೆಗಳನ್ನು ಸಂದರ್ಶಿಸಿದ ಎಂಡೋ ಕಾರ್ಯಕರ್ತರಿಗೆ ಎಂಡೋ ದುರಂತದ ಭೀಕರತೆಯ ದರ್ಶನವಾಗಿದೆ. ಈ ದುರಂತಕ್ಕೆ ಬಲಿಯಾದ ಕೊನೆಯ ಮಗುವಿಗೂ ನ್ಯಾಯ ಸಿಗುವ ತನಕ ಸತ್ಯ ಶೋಧನೆಯ ಈ ಅಧ್ಯಯನ ಮುಂದುವರಿಯಲಿದೆ.

ದಿನಾಂಕ: ೧೧-೮-೨೦೧೪

ಡಾ| ರವೀಂದ್ರನಾಥ್ ಶ್ಯಾನುಭಾಗ್
ಉಡುಪಿ

ಅಧ್ಯಕ್ಷರು

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ (ರಿ)

ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯ, ಉಡುಪಿ – ೫೭೬೧೦೨ಸಲಾನ್ಸಲಾನ್

ಸೂಚನೆ: ಉಡುಪಿಯ ಮಾನವಹಕ್ಕುಗಳ ಪ್ರತಿಷ್ಠಾನದ ಕಾರ್ಯಕರ್ತರು ಸಂಗ್ರಹಿಸಿದ ಈ ಎಲ್ಲಾ ಮಾಹಿತಿಗಳನ್ನು -ಟೋ ಹಾಗೂ ವೀಡಿಯೋ ಸಹಿತ ಪ್ರತಿಷ್ಠಾನದ ವೆಬ್‌ಸೈಟ್ http//hrpfudupi.hpage.com ಇದರಲ್ಲಿ ನೋಡಬಹುದು.

 

 

Share. Facebook Twitter Pinterest LinkedIn Tumblr Email
Previous Articleಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
Next Article ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!

June 5, 2024

Comments are closed.

ಸುದ್ದಿ
  • ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!
  • ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • New study from CSE exposes massive environmental dumping of old and used vehicles in Africa and South Asia
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • Prashant Kishor : Disruptive, Harmful
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • Climate Change Report Warns of Dramatically Warmer World This Century
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • SC upholds constitutional validity of Right to Education Act : Judgement FULL TEXT
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ‘ಇಜ್ಞಾನ’ ಸಂಚಿಕೆ ಓದಿ
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • Future Electricity Supply Options for India
  • How essential is the nuclear power option for India?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Media Fest Presentation by Beluru Sudarshana
  • January 23: Participate in the Public Consultation (Bangalore) on Bt Brinjal
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ನನ್ನ ಪ್ರೀತಿಯ ದತ್ತಾಜಿ
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • DNA: Delayed , No Analysis?
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • Bhairappa’s interview 2002
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.