Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಸುದ್ದಿ»“ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
ಸುದ್ದಿ

“ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!

ಬೇಳೂರು ಸುದರ್ಶನBy ಬೇಳೂರು ಸುದರ್ಶನJuly 12, 2017Updated:May 19, 2025No Comments5 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ವಿಜ್ಞಾನಕ್ಕೆ ಆರೆಸೆಸ್‌ ಧರ್ಮವನ್ನು ಬೆರೆಸಲಿದೆಯೆ? ಹಾಗೆಂದು ವದಂತಿ ಹಬ್ಬಿಸುತ್ತಿರುವ ಕ್ಯಾಚ್‌ನ್ಯೂಸ್‌‌ ಎಂಬ ವೆಬ್‌ಸೈಟಿನ ಸುದ್ದಿ  ಓದಿದ್ದರೆ ಈ ಮಾಹಿತಿಯನ್ನೂ ಓದಿ. ದಾರಿ ತಪ್ಪಿಸುವ ಮತ್ತು ತಪ್ಪು ವರದಿಗಳ ಬಗ್ಗೆ ಎಚ್ಚರಿಕೆಯಿಂದಿರಿ!!

`ವಿಜ್ಞಾನ ಭಾರತಿ‘ ಎಂಬ ಸಂಘ ಪರಿವಾರದ ಸಂಘಟನೆಯು ಆರಂಭಿಸಿದ ಸೈನ್ಸ್‌ ಇಂಡಿಯಾ ಪೋರ್ಟಲ್‌ (http://www.scienceindia.in) ಎಂಬ ಜಾಲತಾಣದಲ್ಲಿ ವಿಜ್ಞಾನ ಮತ್ತು ಧರ್ಮ ಮಿಶ್ರಿತ ಲೇಖನಗಳಿವೆ ಎಂಬ ಈ ಸುದ್ದಿಯನ್ನು ಓದಿ ಕುತೂಹಲದಿಂದ ಅಲ್ಲಿಗೆ ಹೋಗಿ ನೋಡಿದೆ. ಕಂಡಿದ್ದು ಮೂರ್ನಾಲ್ಕು ಮಾದರಿ (ಸ್ಯಾಂಪಲ್‌) ಲೇಖನಗಳು. ಮೂಲತಃ ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳನ್ನು ಗಮನದಲ್ಲಿ ಇಟ್ಟುಕೊಂಡು ಆರಂಭವಾಗಿರುವ ಈ ವೆಬ್‌ಸೈಟ್‌ನ `ನಮ್ಮ ಬಗ್ಗೆ‘ ಪುಟದಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಬೇಕೆಂಬ ಭಾರತ ಸಂವಿಧಾನದ ಘೋಷಣೆಯನ್ನು ಉಲ್ಲೇಖಿಸಲಾಗಿದೆ.

Science India, through the mobilization of vast scientific contingent of India intends to promote Indian achievements in science and technology and develop curiosity and innovative ideas to address the challenges facing the globe. The Constitution of India in Article 51A on Fundamental Duties says:”It shall be the duty of every citizen of India…To develop the scientific temper, humanism and the spirit of enquiry and reform”

ಈ ವೆಬ್‌ಸೈಟ್‌ಗೆ ಭಾರತ ಸರ್ಕಾರದ ಸಂಸ್ಥೆಗಳ ಬೆಂಬಲ ಇರುವುದು ನಿಜವೇ. ಅಷ್ಟೇಕೆ, ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳ ಮುಖ್ಯಸ್ಥರು ಈ ವೆಬ್‌ಸೈಟಿನ ಸಲಹೆಗಾರರೂ, ಕಾರ್ಯಕಾರಿ ತಂಡದ ಸದಸ್ಯರೂ ಆಗಿದ್ದಾರೆ.

ಕ್ಯಾಚ್‌ ನ್ಯೂಸ್‌ ಸಂಸ್ಥೆಯು `ವಿಜ್ಞಾನ ಭಾರತಿಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್‌ ಎಂಬುವವರು ವೇದಕಾಲೀನ ವಿಜ್ಞಾನ, ಆಯುರ್ವೇದ, ಸಿದ್ಧ ವೈದ್ಯಕೀಯ ಪದ್ಧತಿಗಳ ಬಗೆಗೂ ಗಮನ ಕೊಡಲಾಗುವುದು ಎಂದಿದ್ದಾರೆ‘ ಎಂದು ವರದಿ ಮಾಡಿದೆ. ವಿಜ್ಞಾನದ ಅಧ್ಯಯನಕ್ಕೆ, ವೈಜ್ಞಾನಿಕ ಮನೋಭಾವಕ್ಕೆ ಬೇಕಾದ ವಾತಾವರಣ ಇಲ್ಲದಿದ್ದರೆ ಭಾರತವು ಉತ್ತಮ ವಿಜ್ಞಾನಿಗಳನ್ನು ಹೊಂದಲಾಗದು ಎಂದೂ ಜಯಕುಮಾರ್‌ ಹೇಳಿದ್ದಾರೆ.

ಇಷ್ಟೆಲ್ಲ ವರದಿ ಮಾಡಿದ ಕ್ಯಾಚ್‌ನ್ಯೂಸ್‌ ಆಮೇಲೆ ಮೋದಿಯವರು ಕರ್ಣ, ಗಣೇಶನ ಹುಟ್ಟನ್ನು ಜೆನೆಟಿಕ್‌ ಸೈನ್ಸ್‌, ಪ್ಲಾಸ್ಟಿಕ್‌ ಸರ್ಜರಿಗೆ ಹೋಲಿಸಿದ್ದನ್ನು, ಸಚಿವ ರಾಧಾ ಮೋಹನ್‌ಸಿಂಗ್‌ರವರು ಯೋಗಿಕ್‌ ಫಾರ್ಮಿಂಗ್‌ ಬಗ್ಗೆ ಹೇಳಿದ್ದನ್ನು ಈ ಸುದ್ದಿಯ ಮಧ್ಯೆ ತೂರಿಸಿ ಇವೂ ವಿಜ್ಞಾನ ಭಾರತಿಯ ಅಜೆಂಡಾ ಎಂಬಂತೆ ಬಿಂಬಿಸಿದೆ. ಕ್ಯಾಚ್‌ನ್ಯೂಸ್‌ ಬರೆದ An explosive compound: RSS’s latest plan to mix science and religion ಎಂಬ ಶೀರ್ಷಿಕೆಗೂ ವಿಜ್ಞಾನ ಭಾರತಿಗೂ ಯಾವುದೇ ಚಿಕ್ಕ ಸಂಬಂಧವೂ ಇಲ್ಲ.

ವಿಜ್ಞಾನ ಭಾರತಿಯ ವೆಬ್‌ಸೈಟಿನಲ್ಲಿ ಇರುವ ಪ್ರಚಾರ ವಿಡಿಯೋದಲ್ಲೂ ಮೋದಿ ಇದ್ದಾರೆ; ಆದರೆ ಅಲ್ಲೂ ಕರ್ಣ–ಗಣೇಶ ಬಗ್ಗೆ ಹೇಳಿದ್ದನ್ನು ಕಾಣಲಿಲ್ಲ; ಬದಲಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕೆಂಬ ಕರೆ ಕೊಟ್ಟಿದ್ದನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ.

ಆರೆಸೆಸ್‌ ಸ್ಥಾಪಕ ಸರಸಂಘಚಾಲಕರಾದ ಶ್ರೀ ಕೆ ಬಿ ಹೆಡಗೆವಾರ್‌ ವೈದ್ಯ ಶಿಕ್ಷಣ ಪಡೆದು ಡಾಕ್ಟರ್‌ ಆಗಿದ್ದವರು; ಎಂ ಎಸ್‌ ಗೋಳವಲಕರ್‌ ಅವರು ಬಿಎಸ್ಸಿ ಮಾಡಿ ಜೀವಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದವರು; ಶ್ರೀ ರಾಜೇಂದ್ರ ಸಿಂಗ್‌ (ರಜ್ಜು ಭೈಯ್ಯಾ) ಅವರು ಬಿಎಸ್ಸಿ, ಎಂಎಸ್ಸಿ, ಪಿಎಚ್‌ಡಿ ಮಾಡಿದ ಮೇಲೆ ಸ್ಪೆಕ್ಟ್ರೋಸ್ಕೊಪಿ ವಿಷಯದ ಮೇಲೆ ಪಾಠ ಮಾಡಲು ಅಲಹಾಬಾದ್‌ ವಿಶ್ವವಿದ್ಯಾಲಯ ಸೇರಿದವರು; ನೊಬೆಲ್‌ ಪ್ರಶಸ್ತಿ ಪುರಸ್ಕೃತ ಸರ್‌ ಸಿವಿ ರಾಮನ್‌ರಿಂದಲೇ exceptionally brilliant student ಎಂಬ ಶ್ಲಾಘನೆಗೆ ಪಾತ್ರರಾದವರು; ಅಲ್ಲದೆ ಆಗಿನ ಕಾಲದಲ್ಲಿ ಪ್ರಚಲಿತದಲ್ಲೇ ಇರದ ಪರಮಾಣು ಭೌತಶಾಸ್ತ್ರದಲ್ಲಿ (ನ್ಯೂಕ್ಲಿಯರ್‌ ಫಿಸಿಕ್ಸ್‌) ಪರಿಣತರು ಎಂದು ಹೆಸರುವಾಸಿಯಾಗಿದ್ದವರು; ಶ್ರೀ ಕು ಸೀ ಸುದರ್ಶನ್‌ ಟೆಲಿಕಮ್ಯುನಿಕೇಶನ್ಸ್‌ ಇಂಜಿನಿಯರಿಂಗ್ ಪದವಿ ಪಡೆದವರು ; ಈಗಿನ ಸರಸಂಘಚಾಲಕ ಶ್ರೀ ಮೋಹನ ಭಾಗವತರು ಪಶುವೈದ್ಯಕೀಯ ಶಾಸ್ತ್ರದಲ್ಲಿ ಪದವೀಧರರು; (ಇನ್ನುಳಿದ ಸರಸಂಘಚಾಲಕ ಶ್ರೀ ಬಾಳಾಸಾಹೇಬ ದೇವರಸರು ಕಾನೂನು ಓದಿದವರು). ಆ ಕಾಲದ ವಿಜ್ಞಾನದ ಓದು ಎಷ್ಟು ಕಠಿಣ ಮತ್ತು ಶಿಸ್ತಿನದಾಗಿತ್ತು ಎಂಬುದನ್ನು ಯಾರಿಗೂ ತಿಳಿಹೇಳುವ ಅಗತ್ಯ ಇದೆಯೆ?

ಇಷ್ಟಾಗಿಯೂ ಹೆಡಗೆವಾರ್‌ ಹೊರತುಪಡಿಸಿ ಉಳಿದವರೆಲ್ಲರೂ ಹಲವು ವರ್ಷಗಳ ಕಾಲ ಪ್ರಚಾರಕರಾದ ಮೇಲೆಯೇ ಆರೆಸೆಸ್‌ ಮುಖ್ಯಸ್ಥರ ಸ್ಥಾನಕ್ಕೆ ಬಂದರೇ ಹೊರತು ತಮ್ಮ ಡಿಗ್ರಿಗಳಿಂದಲ್ಲ. ಅವರೆಲ್ಲರ ಸಂಘಟನಾ ನಿಷ್ಠೆ, ಸಮಾಜಮುಖೀ ಕಾರ್ಯತತ್ಪರತೆಗಳೇ ಅವರ ಉನ್ನತಿಯ ಮಾನದಂಡಗಳಾಗಿದ್ದವು. ಈಗಲೂ ಆರೆಸೆಸ್‌ನ ಸಾವಿರಾರು ಪ್ರಚಾರಕರಲ್ಲಿ ಇಂಜಿನಿಯರ್‌ಗಳೂ, ಎಂಟೆಕ್‌ಗಳೂ ಇದ್ದಾರೆ ಎಂಬುದೂ ನಿಮಗೆ ಗೊತ್ತಿರಲಿ.

ಮನುಕುಲ ಕಂಡ ಮೇಧಾವಿ ವಿಜ್ಞಾನಿ (ಇವರೆಗೂ ಅವರ ಬಹ್ವಂಶ ಸಿದ್ಧಾಂತಗಳನ್ನು ಪ್ರಯೋಗಗಳ ಮೂಲಕ ಸಾಬೀತು ಮಾಡಲಾಗಿದೆಯೇ ವಿನಃ ಸುಳ್ಳೆಂದು ದೃಢೀಕರಿಸಿದ್ದು ಕಡಿಮೆಯೇ) ಆಲ್ಬರ್ಟ್‌ ಐನ್‌ಸ್ಟೀನ್‌ ಧರ್ಮ ಮತ್ತು ವಿಜ್ಞಾನದ ಕುರಿತು ಏನು ಹೇಳಿದ್ದಾರೆ ಎಂಬುದನ್ನು ನೋಡೋಣ (ಐನ್‌ಸ್ಟೀನ್‌ ಯೆಹೂದಿ ಅಲ್ಲವೆ, ಮೊನ್ನೆ ಮೋದಿ ಇಸ್ರೇಲಿಗೇ ಹೋಗಿದ್ದಲ್ಲವೆ ಇತ್ಯಾದಿ ತರ್ಕ ಇಲ್ಲಿ ಬೇಡ): A person who is religiously enlightened appears to me to be one who has, to the best of his ability, liberated himself from the fetters of his selfish desires and is preoccupied with thoughts, feelings and aspirations to which he clings because of their super-personal value. It seems to me that what is important is the force of this superpersonal content … regardless of whether any attempt is made to unite this content with a Divine Being, for otherwise it would not be possible to count Buddha and Spinoza as religious personalities. Accordingly a religious person is devout in the sense that he has no doubt of the significance of those super-personal objects and goals which neither require nor are capable of rational foundation … In this sense religion is the age-old endeavor of mankind to become clearly and completely conscious of these values and goals and constantly to strengthen and extend their effect. If one conceives of religion and science according to these definitions then a conflict between them appears impossible. For science can only ascertain what is, but not what should be.. (ನೋಡಿ: ವಿಕಿಪೀಡಿಯ: https://en.wikipedia.org/wiki/Religious_and_philosophical_views_of_Albert_Einstein).

ಈ ಪೋಸ್ಟ್‌ನ್ನು ನಾನು ಕೇವಲ ವಿಜ್ಞಾನ – ಧರ್ಮ ಚರ್ಚೆಗಾಗಿ ಹಾಕಿದ್ದೇನೆಯೇ ವಿನಃ ಆರೆಸೆಸ್‌ ಬಗೆಗಲ್ಲ; ಆದ್ದರಿಂದ ವಿಜ್ಞಾನ – ಮತಧರ್ಮ – ಈ ಕುರಿತು ಯಾವುದೇ ಬಗೆಯ ಚರ್ಚೆಯನ್ನೂ ಇಲ್ಲಿ ಮಾಡಬಹುದು. ಹೊರತು ಮತೀಯತೆ, ಕೋಮುವಾದ, ಮತಾಂಧತೆ, ಇವುಗಳ ಚರ್ಚೆ ಇಲ್ಲಿ ನಡೆಸಲಾಗದು. ಅಂಥ ವಿಚಾರಗಳನ್ನು ಅವರವರು ಸ್ವತಂತ್ರವಾಗಿ ತಂತಮ್ಮ ಗೋಡೆಗಳಲ್ಲಿ ಬರೆದುಕೊಳ್ಳಬಹುದು.

ಆರೆಸೆಸ್‌ ಬಗ್ಗೆ ಮೊದಲಿನಿಂದಲೂ ಪೂರ್ವಾಗ್ರಹವನ್ನೇ ಇಟ್ಟುಕೊಂಡ ಪತ್ರಕರ್ತರ ಪೈಕಿ ವಸ್ತುನಿಷ್ಠವಾಗಿ ವರದಿ ಮಾಡುತ್ತಿರುವವರ ಸಂಖ್ಯೆ ಕಡಿಮೆ. ಪೂರ್ವಾಗ್ರಹಪೀಡಿತ ಅನುರಾಗ್‌ ದೇ ಎಂಬುವವರ ವರದಿಯಲ್ಲಿ ರೋಚಕತೆಯೇ ತುಂಬಿದೆ. ವಾಸ್ತವಾಂಶಗಳಿಗೆ ಮೂಲೆ ಜಾಗ! 

ನನಗೆ ವಿಜ್ಞಾನದ ಓದು ಮತ್ತು ಆಧ್ಯಾತ್ಮಿಕ ಚಿಂತನೆ – ಇವುಗಳ ನಡುವೆ ಏನಂಥ ವ್ಯತ್ಯಾಸವೂ ಕಾಣುತ್ತಿಲ್ಲ. ಜೈನ ಕಾಸ್ಮಾಲಜಿಯ ಒಂದು ಪುಸ್ತಕದಲ್ಲಿ ಪ್ರಕಟವಾದ ಪ್ರಾಚೀನ ವರ್ಣಚಿತ್ರಗಳಿಗೂ, ಸ್ಟೀಫನ್‌ ಹಾಕಿಂಗ್‌ ಬರೆದ ದ ಯೂನಿವರ್ಸ್‌ ಇನ್‌ ಎ ನಟ್‌ಶೆಲ್‌ ಪುಸ್ತಕದಲ್ಲಿ ವಿವರಿಸಿದ ಕೃಷ್ಣ ವಿವರ – ಬ್ರಹ್ಮಾಂಡದ ಚಿತ್ರಗಳಿಗೂ ಸಾಮ್ಯವಿರುವುದನ್ನು ಆಕಸ್ಮಿಕವಾಗಿ ಗಮನಿಸಿದ ಮೇಲೆ ನನಗಂತೂ ವಿಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಾಗಿದೆ; ಆಧ್ಯಾತ್ಮದ ಚಿಂತನೆಗಳ ಬಗ್ಗೆ ಕುತೂಹಲವೂ ಹೆಚ್ಚಿದೆ.

ವಿಜ್ಞಾನವೆಂದರೆ ಆಧ್ಯಾತ್ಮಕ್ಕೆ ವಿರೋಧಿ ಎಂದು ಭಾವಿಸುವವರು ನಮ್ಮ ಪ್ರಾಚೀನ ಗ್ರಂಥಗಳನ್ನು ಒಮ್ಮೆಯಾದರೂ ಓದುವುದು ಒಳಿತು. ಸಿದ್ಧಾಂತಗಳ ವೈವಿಧ್ಯ ಏನೇ ಇರಲಿ, ನಮ್ಮ ನೆಲದ ಪ್ರಾಚೀನತೆ, ವೈಜ್ಞಾನಿಕತೆ, ಪ್ರಮಾಣೀಕರಣದ ಹಂಬಲ, ಬ್ರಹ್ಮಾಂಡದ, ಲೌಕಿಕ ಜಗತ್ತಿನ ಶೋಧದ ಇತಿಹಾಸ – ಇವೆಲ್ಲವನ್ನೂ ಅಲ್ಲಗಳೆಯುವುದು ನಮ್ಮ ಇರವನ್ನೇ ಅಲ್ಲಗಳೆಯುವ ಹುಂಬತನ.

ಯಜ್ಞಕುಂಡಗಳಿಗಾಗಿ ರೂಪಿಸಿದ ಶುಲ್ಭ ಸೂತ್ರಗಳು, ನಮ್ಮ ಆದಿವಾಸಿ ಸಮುದಾಯಗಳು ಈಗಲೂ ಬಳಸುವ ಪಾರಂಪರಿಕ ಅರಣ್ಯ / ವೈದ್ಯ/ ದೇಸಿ ಜ್ಞಾನ, ಇಡೀ ಜಗತ್ತೇ ಬೆರಗಾಗುವಂತೆ ಕಟ್ಟಿದ ಹರಪ್ಪಾ–ಮೊಹೆಂಜೋದಾರೋ – ರಾಖಿಗಢಿ ನಗರಗಳು, – ಎಲ್ಲವೂ ವಿಜ್ಞಾನವೇ. ಅವರ್ಯಾರೂ ಈಗಿನ ಕಾಲದ ಕ್ಷುದ್ರ ಸೆಕ್ಯುಲರ್‌ ಚಿಂತನೆಯನ್ನು ಹೊಂದಿರಲಿಲ್ಲ. ಶತಮಾನಗಳ ಕಾಲ ವಿಜ್ಞಾನ–ಸಂಪ್ರದಾಯಗಳು ಏಕೀಕರಣಗೊಂಡೇ ಬಾಳಿದ್ದವು.

ಅಂಥ ಇತಿಹಾಸವನ್ನೂ ಕಲಕಿ ವಿಜ್ಞಾನವೇ ಬೇರೆ ಜ್ಞಾನಪ್ರವಾಹ ಎಂಬ ಕಲಬೆರಕೆ ಸಿದ್ಧಾಂತ ನಮಗೆ ಬೇಡ. ಇಂದಿನ ಕಾರ್ಪೋರೇಟ್‌ ಅಡಿಯಾಳು ವಿಜ್ಞಾನಿಗಳು ಮಾಡಿದ ಸಂಶೋಧನೆಗಳು ಹೇಗೆ ನಮ್ಮ ನಾಗರಿಕತೆಯನ್ನೇ ಉಸಿರುಗಟ್ಟಿಸಿ ಸಾಯಿಸುತ್ತಿವೆ; ಹೇಗೆ ನಮ್ಮನ್ನು ಪ್ಲಾಸ್ಟಿಕ್‌ ಗುಲಾಮಿಗಳನ್ನಾಗಿ ಮಾಡಿವೆ, ಹೇಗೆ ನಮ್ಮ ರೈತರ ಬಿತ್ತನೆ ಬೀಜಗಳನ್ನೇ ಅಪಹರಿಸಿ ಮಾರುತ್ತಿವೆ, ಹೇಗೆ ನಮ್ಮ ದೇಸಿ ಜ್ಞಾನವನ್ನೆಲ್ಲ ಪೇಟೆಂಟ್‌ ಹೆಸರಿನಲ್ಲಿ ಕಬಳಿಸುತ್ತಿವೆ, ಹೇಗೆ ನಮ್ಮ ನೆಲ–ಜಲ–ಗಾಳಿಯನ್ನು ಮಲಿನಗೊಳಿಸುತ್ತಿವೆ – ಎಲ್ಲವನ್ನೂ ನೋಡಿಬಿಟ್ಟರೆ, ಈ ವಿಜ್ಞಾನಿಗಳ ಸಹವಾಸವೇ ಸಾಕು ಅನ್ನಿಸುತ್ತಿದೆ! ರಾಸಾಯನಿಕ ಕೀಟನಾಶಕಗಳು ಬರುವ ಮುನ್ನ ಇದ್ದ ಕೀಟ ಸಂಬಂಧಿ ಬೆಳೆನಷ್ಟದ ಪ್ರಮಾಣವು 25 ಸಾವಿರ ಕೀಟನಾಶಕ ಬ್ರಾಂಡ್‌ಗಳ ನಂತರ ಹೆಚ್ಚಾಗಿದೆ ಎಂದರೆ ನೀವೇ ಯೋಚಿಸಿ. ಪರಮಾಣು ವಿಜ್ಞಾನದ ಭೀಕರ ಪರಿಣಾಮಗಳಿಗೆ ಯಾರು ಹೊಣೆ? ಮತಧರ್ಮಗಳೆ, ಅಥವಾ ರಾಜಕಾರಣಿಗಳ ಆಟದ ಗೊಂಬೆಗಳಾದ ವಿಜ್ಞಾನಿಗಳೆ?

ವಿಜ್ಞಾನವು ನಮ್ಮ ಬದುಕನ್ನು ಕತ್ತರಿಸಬಾರದು ಎಂದರೆ ಅದರಲ್ಲಿ ಆಧ್ಯಾತ್ಮದ ಹೊಳಹು ಇರಲೇಬೇಕು ಎಂಬುದು ನನ್ನ ನಮ್ರ ಅನಿಸಿಕೆ.

Share. Facebook Twitter Pinterest LinkedIn Tumblr Email
Previous Article‘After I die, cut out my heart and eat it’ (Book Review: Tombstone)
Next Article ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!

June 5, 2024

Comments are closed.

ಸುದ್ದಿ
  • ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!
  • ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • New study from CSE exposes massive environmental dumping of old and used vehicles in Africa and South Asia
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • Prashant Kishor : Disruptive, Harmful
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • Climate Change Report Warns of Dramatically Warmer World This Century
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • SC upholds constitutional validity of Right to Education Act : Judgement FULL TEXT
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ‘ಇಜ್ಞಾನ’ ಸಂಚಿಕೆ ಓದಿ
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • Future Electricity Supply Options for India
  • How essential is the nuclear power option for India?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Media Fest Presentation by Beluru Sudarshana
  • January 23: Participate in the Public Consultation (Bangalore) on Bt Brinjal
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ನನ್ನ ಪ್ರೀತಿಯ ದತ್ತಾಜಿ
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • DNA: Delayed , No Analysis?
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • Bhairappa’s interview 2002
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.