Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
ಲೇಖನಗಳು

ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!

ಬೇಳೂರು ಸುದರ್ಶನBy ಬೇಳೂರು ಸುದರ್ಶನMay 14, 2014Updated:May 19, 20257 Comments4 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
೨೦೧೩. ಜಯನಗರದ ದೊಡ್ಡ ಹೋಟೆಲಿನಲ್ಲಿ ಕುಳಿತಿದ್ದೇನೆ. ಒಂದು ಪಾರ್ಟಿಗಾಗಿ ನನ್ನನ್ನ ಕರೆದಿದ್ದಾರೆ. ಮೊದಲು ಸ್ಟಾರ್ಟರ್‌; ತಿಳಿಹಳದಿ  ಹೋಳುಗಳ ಒಂದು ರಾಶಿ ಹೊತ್ತ ಪ್ಲೇಟು ನನ್ನ ಮುಂದಿದೆ. ಇದೇನು ಎಂದು ಕೇಳುತ್ತೇನೆ. ಪಪಾಯ ಕಾಯಿಯಿಂದ ಮಾಡಿದ ಸ್ಟಾರ್ಟರ್‌, ತುಂಬಾ ಫೇಮಸ್‌ ಎಂಬ ಉತ್ತರ ಸಿಗುತ್ತದೆ. ನಾನು ಅದರ ರುಚಿ ನೋಡುತ್ತೇನೆ. ಹುಳಿನೀರಲ್ಲಿ ತೋಯಿಸಿದ ಆ ಪಪಾಯಿ ಚೂರುಗಳು ರಬ್ಬರ್‌ ತುಂಡುಗಳಂತೆ ಕಾಣಿಸುತ್ತವೆ.
ಮೈನ್‌ ಕೋರ್ಸ್‌ ಬರುವ ಮುನ್ನ ನನ್ನ ಮನಸ್ಸು ೪೧ ವರ್ಷಗಳ ಹಿಂದಕ್ಕೆ ಓಡುತ್ತದೆ. ನನ್ನ ಅಕ್ಕಪಕ್ಕದವರು ಅದನ್ನೆಲ್ಲ ಮರೆತಿರಬಹುದು ಎಂಬುದು ಅವರ ಮಾತಿನಿಂದಲೇ ಖಚಿತವಾಗುತ್ತಿದೆ. ನೆನಪಿರಬಹುದಾದ ಒಬ್ಬಳೇ ಅಕ್ಕ, ಅವಳು ಈಗಿಲ್ಲ. ಪಪಾಯಿ ಕಾಯಿಯ ಕಥೆ ನನಗಿಂತ ಅವಳಿಗೇ ಚೆನ್ನಾಗಿ ಗೊತ್ತು.  ಪಪಾಯಿಯು ತೂಕ ಕಳೆದುಕೊಳ್ಳಲು ಅತ್ಯುತ್ತಮ, ಕ್ಯಾನ್ಸರ್‌ ನಿರೋಧಕ, ಎ ಮತ್ತು ಸಿ ಅನ್ನಾಂಗಗಳಿರುವ ಆಹಾರ ಎಂದೆಲ್ಲ ಈಗ ಓದಿ ತಿಳಿದಿದ್ದೇನೆ. ಆದರೆ ತೂಕ ಉಳಿಸಿಕೊಳ್ಳಲೆಂದೇ ಒಂದು ವಾರ ಅದನ್ನೇ ತಿಂದು ಜೀವಿಸಿದ್ದನ್ನು ಮರೆಯಲಾರೆ. 
ಪಪಾಯಿ ಕಾಯಿ ಸಪ್ತಾಹ
೧೯೭೩ರಲ್ಲಿ ನಾನು `ನಗರ’ದಲ್ಲಿದ್ದೆ.  ಅದನ್ನು ಹಳೆನಗರ, ಬಿದನೂರು ಎಂದೂ ಕರೆಯುತ್ತಾರೆ. ಹೊಸನಗರ ತಾಲೂಕಿನಲ್ಲಿರುವ ಊರು; ಒಂದೊಮ್ಮೆ ಕೆಳದಿ ಶಿವಪ್ಪನಾಯಕನ ರಾಜಧಾನಿ. ನಾನಾಗ ೩ನೇ ಕ್ಲಾಸು. ನನ್ನ ಶಾಲೆಯ ರಸ್ತೆಯ ಕೊನೆಯಲ್ಲೇ ನನ್ನ ಮನೆಯೂ ಇತ್ತು. ಮೂರು ರೂಮುಗಳು ಬಿಡಿಬಿಡಿಯಾಗಿದ್ದವು. ಹೊರಗೆ ಬಂದೇ ಒಳಗೆ ಹೋಗಬೇಕು. ಹಾಗೇ ಅಡುಗೆಮನೆಗೂ ಪ್ರತ್ಯೇಕ ಪ್ರವೇಶ. ಮಣ್ಣಿನ ನೆಲದಲ್ಲಿ ದಿನಾ ಗೆದ್ದಲು ಏಳುತ್ತಿತ್ತು. ಕಟ್ಟಿರುವೆಗಳ ಕಾಟ ತಪ್ಪಿಸಿಕೊಳ್ಳಲು ಹಾಸಿಗೆ ಸುತ್ತ ಸೀಮೆಎಣ್ಣೆಯನ್ನು ಸಿಂಪಡಿಸಿಕೊಂಡು ಹಾಯಾಗಿ ನಿದ್ದೆ ಜಾರುತ್ತಿದ್ದೆವು.
ಆಗ ನಮ್ಮ ಮನೆಗೆ ಆದಾಯವೇ ಇರಲಿಲ್ಲ. ಅವರಿವರ ನೆರವೇ ಮುಖ್ಯವಾಗಿತ್ತು. ಪದೇ ಪದೇ ಊರು ಬಿಟ್ಟು ಹೋಗುತ್ತಿದ್ದ ಮನೆಯ ಯಜಮಾನನಿಂದ ಹೆಚ್ಚಿನ ನೆರವು ಅಸಾಧ್ಯವಾಗಿತ್ತು. ಒಮ್ಮೆ ಪರಿಸ್ಥಿತಿ ಎಷ್ಟು ವಿಪರೀತಕ್ಕೆ ಇಟ್ಟುಕೊಂಡಿತು ಎಂದರೆ ಅಕ್ಕಿಯೂ ಮುಗಿಯಿತು. ತರಕಾರಿಯಂತೂ ಇರಲೇ ಇಲ್ಲ. ಹಿತ್ತಿಲಿನಲ್ಲಿ ಪಪಾಯ ಕಾಯಿಗಳು ಎಳೆಯ ಹಂತ ದಾಟುತ್ತಿದ್ದವಷ್ಟೆ. ತೀರಾ ಎಳೆಗಾಯಿ ತುಂಬಾ ಕಹಿಯಾಗಬಹುದು ಎಂದು ಒಂದು ದಿನ ಕಾದೆವು. ಆಮೇಲೆ ಅದನ್ನೇ ಕಿತ್ತು ಬೇಯಿಸಿದೆವು. ಉಪ್ಪು ಹಾಕಿಕೊಂಡು ತಿಂದೆವು. ಸುಮಾರು ಒಂದು ವಾರದ ಕಾಲ ಪಪಾಯಿ ಪಲ್ಯವೇ ನಮ್ಮ ಆಹಾರವಾಗಿತ್ತು.
ಅದಾಗಿ ಒಂದು ವಾರದ ಮೇಲೆ ಇರಬೇಕು, ನನ್ನ `ಔಟ್‌ಪುಟ್‌’  ನಿಂತೇ ಹೋಯಿತು. ಕನಿಷ್ಠ ಒಂದು ವಾರದ ಕಾಲ ನಾನು ಪಟ್ಟ ಯಾತನೆ, ಅವಮಾನ ಅಷ್ಟಿಷ್ಟಲ್ಲ. ಏನು ಮಾಡಿದರೂ, ಉಹು. ನನ್ನ ಅಕ್ಕ ನಗುನಗುತ್ತಲೇ ನನ್ನನ್ನು `ಧರೆ’ಗೆ ಕರೆದುಕೊಂಡು ಹೋಗುತ್ತಿದ್ದಳು; ಬೆನ್ನು ಒತ್ತಿ ಯತ್ನಿಸಿದಳು; ಪರಿಣಾಮ ಸೊನ್ನೆ. ಅಂತೂ ಒಂದು ವಾರದ ಮೇಲೆ ಹೇಗೋ, ಎಲ್ಲ ಸರಿಯಾಯಿತು. ನಾನು ಕ್ಲಾಸಿಗೆ ಹೋಗತೊಡಗಿದೆ.
ಅದೇ ಊರಿನಲ್ಲಿ ಹಸಿವಿನ ಬಾಧೆ ತೀರಿಸಿಕೊಳ್ಳಲು ಸಿಕ್ಕಿದ ಅಕ್ಕಿಯನ್ನೇ ಬೇಯಿಸಿ, ಹಿತ್ತಲಿನಲ್ಲಿ ಅನಾಯಾಸವಾಗಿ ಬೆಳೆದಿದ್ದ ಸೋರಲೆ ಸೊಪ್ಪಿನ ತಂಬಳಿಯನ್ನೇ ತಿಂಗಳುಗಟ್ಟಳೆ ಸವಿದಿದ್ದೂ ನೆನಪಿದೆ.
ರುಪಾಯಿಗೆ ನಾಕ್‌ ಬಾಳೆಹಣ್ಣು
೧೯೮೩ರಲ್ಲಿ ನಾನು ದಾವಣಗೆರೆಯಲ್ಲಿ ಇಂಜಿನಿಯರಿಂಗ್‌ ಮಾಡುತ್ತಿದ್ದೆ. ಆಗ ನನಗೆ ಹಣದ ತೊಡಕಾಯಿತು. ಅಲ್ಲಿ ಇಲ್ಲಿ ಬೇಡಿ ತಂದ ಹಣ ಸಾಕಾಗುತ್ತಿರಲಿಲ್ಲ. ಕೊನೆಗೆ ಹಣ ಉಳಿಸಲು ದಾವಣಗೆರೆ ಬಸ್‌ ಸ್ಟಾಂಡಿಗೆ ಬಂದು ಗಾಡಿ ಅಂಗಡಿಯ ಡಬಲ್‌  ಆಮ್ಲೆಟ್‌ ತಿನ್ನಲು ಶುರು ಮಾಡಿದೆ. ಅದಿಲ್ಲವಾದರೆ ಅಜ್ಜನ ಗಾಡಿಯ ಬಾಳೆ ಹಣ್ಣುಗಳು. ರೂಪಾಯಿಗೆ ನಾಕ್‌ ನಾಕ್‌ ಎಂದು ಕೂಗುತ್ತಿದ್ದ ಆ ಅಜ್ಜ ನನಗೆ ಎಷ್ಟೋ ಸಲ ಐದು, ಆರು ಹಣ್ಣುಗಳನ್ನು ಕೊಟ್ಟಿದ್ದೂ ಇದೆ.
ಸಾಲಕ್ಕೆ ಕೊಟ್ಟ ಪಲಾವ್‌ 
೧೯೮೭ರಲ್ಲಿ ದಾವಣಗೆರೆಯಿಂದ ಓಡಿ  ಬೆಂಗಳೂರಿಗೆ ಬಂದ ನಾನು ಎಲ್ಲೆಲ್ಲೋ ಕೆಲಸ ಮಾಡುತ್ತಿದ್ದೆ. ಆಗ ಕಾಟನ್‌ಪೇಟೆಯ ಕಾರ್ನರ್‌ನಲ್ಲಿ ಒಂದು ಪಲಾವ್‌ ಅಂಗಡಿ ಇತ್ತು. ಅದೀಗ ಮೊಬೈಲ್‌ ಅಂಗಡಿ ಆಗಿದೆ. ಆ ಕ್ಯಾಂಟೀನಿನ ಯಜಮಾನ ನನಗೆ ಎಷ್ಟೋ ಸಲ ಸಾಲದ ಮೇಲೆ ಪಲಾವ್‌ ಕೊಟ್ಟಿದ್ದಾನೆ. ಅವನ ಅಂಗಡಿಯಲ್ಲಿ ತಿಂದ ಪಲಾವಿನ ರುಚಿಯನ್ನು ನಾನು ಬೇರೆಲ್ಲೂ ಕಂಡಿಲ್ಲ.
ಮೇಲಿನ ಮೂರು ಘಟನೆಗಳು ನನ್ನನ್ನು ಸದಾ ಕೊರೆಯುತ್ತವೆ. ೨೦೦೯ರಲ್ಲಿ ನಾನು ನಗರಕ್ಕೆ ಹೋಗಿ ನನ್ನ ಆ ಹಳೆ ಮನೆ ನೋಡಿ ಬಂದೆ. ಮೊನ್ನೆ ಏಪ್ರಿಲ್‌ ೨೫ರಂದು ಮತ್ತೊಮ್ಮೆ ಹೋಗಿ ನಗರದ ಬಸ್‌ ನಿಲ್ದಾಣದಲ್ಲಿ ನನ್ನನ್ನೇ ನಾನು ನೆನಪಿಸಿಕೊಂಡೆ. ನಾನು ಕಾಟನ್‌ಪೇಟೆ ರಸ್ತೆಯಲ್ಲಿ ಕಾರಿನಲ್ಲಿ ಬರುವಾಗ  ಪಲಾವ್‌ ಕ್ಯಾಂಟೀನಿನ ಯಜಮಾನನ ಎಂಪಿ ಶಂಕರ್‌ ರೂಪದ ಮುಖ ನೆನಪಾಗುತ್ತದೆ. ದಾವಣಗೆರೆಗೆ ಹೋದಾಗ ಆರ್‌ ಎಚ್‌ ಛತ್ರದ ಬಳಿ ಗಾಡಿ ಅಂಗಡಿಗಳು ಇವೆಯೇ ಎಂದು ಕಣ್ಣಾಡಿಸುತ್ತೇನೆ. ಯಾರೂ ಕಾಣಿಸುವುದಿಲ್ಲ.
ಹಸಿವನ್ನು ಇಂಗಿಸುವವರು ನಿಜಕ್ಕೂ ದೇವರೇ. ಅವರೆಲ್ಲ ಚೆನ್ನಾಗಿದ್ದಾರೆ ಎಂದೇ ನಾನು ಭಾವಿಸುತ್ತೇನೆ. ಅವರೆಲ್ಲ ನನ್ನನ್ನು ಬದುಕಿಸಿದ್ದಾರೆ. ಆ ಪಪಾಯಿ, ಆ ಅಜ್ಜ, ಯಜಮಾನ – ಎಲ್ಲರೂ ದೈವಸ್ವರೂಪಿಗಳು. ಅವರಿಗೆಲ್ಲ ನನ್ನ ವಂದನೆಗಳು.
ಹಸಿವನ್ನು ಅರಗಿಸಿಕೊಂಡಿದ್ದೇವೆ ಎಂದು ಹಲವರು ಹೇಳುತ್ತಾರೆ. ಇರಬಹುದು. ನನ್ನ ಬದುಕಿನಲ್ಲಿ ಎಷ್ಟೋ ಸಲ ಬಂದು ಹೋದ ಹಸಿವು ನನ್ನ ನಾಚಿಕೆಯನ್ನು ಹೊರಗಟ್ಟಿದೆ. ೧೯೮೮ರ ಹೊತ್ತಿನಲ್ಲೂ ನಾನು ಹತ್ತು ರುಪಾಯಿ ಸಾಲ ಪಡೆದು  ಮೆಜೆಸ್ಟಿಕ್ಕಿನ ಸುಬ್ರಹ್ಮಣ್ಯ ಹೋಟೆಲಿನಲ್ಲಿ ಫುಲ್‌ ಮೀಲ್ಸ್‌ಗೆ ಹೊರಡುತ್ತಿದ್ದೆ. `ಸುದರ್ಶನ, ಹೀಗೆಲ್ಲ ದುಡ್ಡು ಕೇಳಬಾರದು’ ಎಂದು ಹಿರಿಯ ಮಿತ್ರರು ಒಮ್ಮೆ ಅತ್ಯಂತ ಪ್ರೀತಿಯಿಂದ ಹೇಳಿದರು. ನಾನು ಅಂದು ವಿಷಣ್ಣನಾಗಿ ನಗು ಬೀರಿದ್ದೆ.
ಹೀಗೆಲ್ಲ ಬರೆಯುವುದು ಖಾಸ್‌ಬಾತ್‌ ಎಂಬುದು ನಿಜ. ಆದರೆ ಈಗಿನ ಯುವಸಮುದಾಯಕ್ಕೆ ಹಸಿವಿನ ಕಥೆ ಗೊತ್ತಾಗಬೇಕು; ಅವರೆಲ್ಲರೂ ಕನ್ನಡದಲ್ಲೇ ನಮ್ಮ ಆಗಿನ ಹಸಿವಿನ ಕಥೆಯನ್ನು ಓದಬೇಕು ಎನ್ನಿಸಿದ್ದಕ್ಕೇ ಇಷ್ಟು ಬರೆದೆ. ಎಷ್ಟೋ ಸಲ ನಮಗೆ ನಮ್ಮ ಭೂತಕಾಲವನ್ನು ಸ್ಮರಿಸಿಕೊಳ್ಳುವ ಅಗತ್ಯ ಕಾಣುವುದಿಲ್ಲ; ಅದೆಲ್ಲ ಈಗೇಕೆ, ಆರಾಮಾಗಿದ್ದೇವಲ್ಲ ಎಂಬ ವಾದ ಮುಂದಾಗುತ್ತದೆ. ೪೧ ವರ್ಷಗಳ ಹಿಂದೆ ನಾನಿದ್ದ ಸ್ಥಿತಿಯಲ್ಲೇ ಇನ್ನೂ ಹಲವರು ಇರಬಹುದು; ಕಡಿಮೆ ಸಂಬಳದಲ್ಲಿ ಕಷ್ಟ ಪಡುತ್ತಿರಬಹುದು. ಅವರಿಗೆಲ್ಲ ನನ್ನ ಆಗಿನ ಅನುಭವ ಏನನ್ನಾದರೂ ತಿಳಿಸಬಹುದು ಎಂಬ ಭಾವನೆ ನನ್ನದು. ನಾನೇನೂ ಈಗಲೂ ಸಾಮಾನ್ಯ ಪದಗಳಲ್ಲಿ ವ್ಯಾಖ್ಯಾನಿಸುವಂತೆ `ಸ್ಥಿತಿವಂತ’ನಲ್ಲ; ಆದರೆ ಸ್ವಾವಲಂಬಿಯಾಗಿ ಮತ್ತು ನನ್ನದೇ ಸುಖದ ವ್ಯಾಖ್ಯೆಗೆ ತಕ್ಕಂತೆ ಬದುಕುತ್ತಿದ್ದೇನೆ.
ನನ್ನಂತೆ ಬಾಲ್ಯದಲ್ಲಿ ಹಸಿವಿನಿಂದ ಕಂಗೆಟ್ಟಿದ್ದರೂ ಕೊನೆಗೆ ಮೇಲೆ ಬಂದ ಹಲವರ ಕಥೆಗಳನ್ನು ನಾನು ಕಂಡಿದ್ದೇನೆ. ಏಳೇ ವರ್ಷಗಳ ಹಿಂದೆ ಐಷಾರಾಮಿ ಬದುಕು ನಡೆಸುತ್ತಿದ್ದ ಒಬ್ಬನ ಸಂಸಾರವು ಗಣಿ ರಂಪದ ಗಾಣಕ್ಕೆ ಸಿಲುಕಿ ಹೈರಾಣಾಗಿರುವುದನ್ನು ಮೊನ್ನೆಯಷ್ಟೇ ಕಂಡಿದ್ದೇನೆ. ಬದುಕಿನ ಏರಿಳಿತಗಳ ವಿಪ್ಲವವನ್ನು ಬಣ್ಣಿಸಲಾಗದು. ಆದರೆ ಇಂಥ ವಿಫಲತೆ – ಸಫಲತೆಗಳು ನಮ್ಮನ್ನು ಮಾರಿಕೊಳ್ಳುವ ಸರಕಾಗಬಾರದು. ಈ ಎಚ್ಚರಿಕೆ ಇದ್ದರೆ ಸಾಕು.  ಅಂದಂದಿನ ಆಹಾರವನ್ನು ಅಂದಂದೇ ಹುಡುಕುವ ಫಿಲಾಸಫಿಯನ್ನು ಅಳವಡಿಸಿಕೊಂಡಿರುವ ನನಗೆ ಬದುಕಿನ ಆರ್ಥಿಕತೆಯನ್ನು ನಿಭಾಯಿಸುವ ಅನುಭವ ಸುಮಾರಾಗಿ ದಕ್ಕಿದೆ. ಹಸಿವೇ ನಮ್ಮನ್ನು ಬದುಕಿಗೆ ತಳ್ಳುತ್ತದೆ; ಆದರೆ ಆ ಬದುಕು ಸಮಾಜಕ್ಕೆ ಘಾತಕವಾಗದಂತೆ, ಹೊರೆಯಾಗದಂತೆ ನೋಡಿಕೊಳ್ಳಬೇಕಾದ್ದು ನಮ್ಮ ಹೊಣೆಗಾರಿಕೆ. ಉಳಿದವರ ಹೊಟ್ಟೆ ಹೊಡೆಯಬೇಕಿಲ್ಲ; ಸೈಟಿಗಾಗಿ ಭಿಕ್ಷೆ ಬೇಡಬೇಕಿಲ್ಲ; ಕಳ್ಳರಾಗಬೇಕಿಲ್ಲ.
ಈ ವಸುಂಧರೆಯ ಒಡಲಿನಲ್ಲಿ ಈಗಲೂ ತುತ್ತು ಕೂಳಿಗೆ ಒದ್ದಾಡುವ ಜನರಿಗೆ ಸಮಾಜವು ನೆರವಾಗಲಿ, ಎಂದು ಬೇಡಿಕೊಳ್ಳುತ್ತ ಈ ಬ್ಲಾಗನ್ನು ಕೊನೆಗೊಳಿಸುತ್ತಿದ್ದೇನೆ.
Share. Facebook Twitter Pinterest LinkedIn Tumblr Email
Previous Articleಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
Next Article ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
ಬೇಳೂರು ಸುದರ್ಶನ
  • Website

Related Posts

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ

October 27, 2020

www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ

July 17, 2020

7 Comments

  1. ರಾಮಸ್ವಾಮಿ ಹುಲಕೋಡು on May 14, 2014 2:02 pm

    ಹೌದು, ನಿಮ್ಮ ಈ ಹಸಿವಿನ ನೆನಪಿನಲ್ಲಿ ತುಂಬಾ ಪೌಷ್ಟಿಕತೆ ಇದೆ. ಕೊನೆಯ ಎರಡು ಪ್ಯಾರಾಗಳಂತೂ ಬಹಳ ಇಷ್ಟವಾದವು. ನಿಮ್ಮ ಈ ಬರಹ ನನ್ನ ಬಾಲ್ಯದ ದಿನಗಳನ್ನು ನೆನಪಿಸುತ್ತಾ ಓದಿಸಿಕೊಂಡು ಹೋಯಿತು…

  2. Ramachandra Hegde on May 14, 2014 3:16 pm

    ತುಂಬಾ ಆಪ್ತವಾದ ಬರಹ. ‘ಬದುಕಿನ ಏರಿಳಿತಗಳ ವಿಪ್ಲವವನ್ನು ಬಣ್ಣಿಸಲಾಗದು. ಆದರೆ ಇಂಥ ವಿಫಲತೆ – ಸಫಲತೆಗಳು ನಮ್ಮನ್ನು ಮಾರಿಕೊಳ್ಳುವ ಸರಕಾಗಬಾರದು. ಈ ಎಚ್ಚರಿಕೆ ಇದ್ದರೆ ಸಾಕು.’ – ನಿಜವಾದ ಮಾತು. ನನಗೂ ದೊಡ್ಡ ಹೋಟೆಲಿನ ಪಾರ್ಟಿ ಗಳಲ್ಲಿ ಕೂತಾಗ ‘ಆ ದಿನಗಳ’ ನೆನಪಾಗುತ್ತದೆ. ಆದರೆ ‘ಆ ದಿನಗಳೇ’ ನನಗೆ ಬದುಕನ್ನು ಎದುರಿಸುವ ಶಕ್ತಿ ತುಂಬಿದ್ದು. ಈಗ ಎದುರಾಗುವ ತೊಡಕುಗಳನ್ನು ಆ ದಿನಗಳಿಗೆ ಹೋಲಿಸಿದಾಗ ಇದೇನೂ ದೊಡ್ಡದಲ್ಲ ಅನ್ನಿಸಿ ನಾನದನ್ನು ಸಮರ್ಥವಾಗಿ ಎದುರಿಸಿ ಬಿಡುತ್ತೇನೆ. ‘ಹಸಿವೇ ನಮ್ಮನ್ನು ಬದುಕಿಗೆ ತಳ್ಳುತ್ತದೆ; ಆದರೆ ಆ ಬದುಕು ಸಮಾಜಕ್ಕೆ ಘಾತಕವಾಗದಂತೆ, ಹೊರೆಯಾಗದಂತೆ ನೋಡಿಕೊಳ್ಳಬೇಕಾದ್ದು ನಮ್ಮ ಹೊಣೆಗಾರಿಕೆ. ‘ ಎಂಬ ನಿಮ್ಮ ಮಾತಿಗೆ ಶರಣು.

  3. Pramod on May 15, 2014 4:25 am

    ಆಫೀಸಿ೦ದ ಊಟಕ್ಕೆ ಹೊರಗೆ ಹೋದಾಗಲೆಲ್ಲ ಗಿಲ್ಟಿ ಫೀಲಿ೦ಗ್ ಆಗುತ್ತದೆ. ಅರ್ಧ೦ಬರ್ಧ ತಿ೦ದು ಎಸೆಯುವಾಗ ಲೋಕದ ಇನ್ನರ್ಧ ಜನ ಒ೦ದು ಹೊತ್ತಿನ ತುತಿಗೂ ಎಷ್ಟು ದೂರ ಕಾಲು ಸವೆಸಬೇಕು, ಬೆವರು ಸುರಿಸಬೇಕು ಎ೦ಬುದು ಯಾರಿಗೂ ನೆನಪಿರುವುದಿಲ್ಲ. ಬರಿ ವಿಷಾದ ರಸ

  4. Tejaswini Hegde on May 15, 2014 9:16 am

    ‘ಬದುಕಿನ ಏರಿಳಿತಗಳ ವಿಪ್ಲವವನ್ನು ಬಣ್ಣಿಸಲಾಗದು. ಆದರೆ ಇಂಥ ವಿಫಲತೆ – ಸಫಲತೆಗಳು ನಮ್ಮನ್ನು ಮಾರಿಕೊಳ್ಳುವ ಸರಕಾಗಬಾರದು. ಈ ಎಚ್ಚರಿಕೆ ಇದ್ದರೆ ಸಾಕು.’ – ಸತ್ಯಕ್ಕೆ ಸತ್ಯವಾದ ಮಾತು….. ಹಳೆಯ ನೆನಪುಗಳೆಲ್ಲಾ ಹೊಳಪಾದವು…

  5. Anonymous on May 16, 2014 3:24 pm

    it is best lesson to the youths we all are proud of you from kakkeri family.

  6. chaithra on May 26, 2014 5:51 pm

    Hasivigintha dodda paata mattondilla. Hasivina saavu badukina saavu… Hasividdavanige jeevana thilivudu… Thrupti Tanda lekhana sir

  7. SSNK on June 11, 2014 8:45 am

    ‘ಆ ದಿನಗಳ’ ನೆನಪು ಸದಾ ಹಸಿರು.

ಲೇಖನಗಳು
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.