Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
ಲೇಖನಗಳು

ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 29, 2010Updated:May 19, 2025No Comments7 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

(ಗಮನಿಸಿ: ಈ ಲೇಖನವು ಕೊಂಚ ದೀರ್ಘವಾಗಿದೆ. ಯಾಕೆಂದರೆ ಇಲ್ಲಿ ದೇಶದ ಒಂದಲ್ಲ, ಆರು ಘನತೆವೆತ್ತ ವಿಜ್ಞಾನಸಂಸ್ಥೆಗಳ ಮಾಹಿತಿಗಳ್ಳತನದ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ)

ಸಂಸ್ಥೆ ೧: ಇಂಡಿಯನ್ ಅಕಾಡೆಮಿ ಆಫ್ ಸೈನ್ಸಸ್. ಸ್ಥಾಪನೆ ೧೯೩೪. ಸ್ಥಾಪಕರು : ನೊಬೆಲ್ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ. ರಾಮನ್.

ಸಂಸ್ಥೆ ೨: ದಿ ಇಂಡಿಯನ್ ನ್ಯಾಶನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್, ಹೊಸದಿಲ್ಲಿ. ಸ್ಥಾಪನೆ ೧೯೮೭. ಭಾರತದ ಪ್ರತಿಷ್ಠಿತ ಇಂಜಿನಿಯರುಗಳು, ಇಂಜಿನಿಯರ್ – ವಿಜ್ಞಾನಿಗಳು ಮತ್ತು ತಂತ್ರಜ್ಞರನ್ನು ಒಳಗೊಂಡ ಸಂಸ್ಥೆ.

ಸಂಸ್ಥೆ ೩: ಇಂಡಿಯನ್ ನ್ಯಾಶಲ್ ಸೈನ್ಸ್ ಅಕಾಡೆಮಿ, ಹೊಸದಿಲ್ಲಿ. ಅದರ ವೆಬ್‌ಸೈಟೇ ಹೇಳುವಂತೆ ದೇಶದ ಮುಂಚೂಣಿ ವಿಜ್ಞಾನ ಅಕಾಡೆಮಿ.

ಸಂಸ್ಥೆ ೪: ನ್ಯಾಶನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್, ಹೊಸದಿಲ್ಲಿ. ದೇಶದ ಕೃಷಿ ಸಂಬಂಧಿ ನೀತಿ ಕುರಿತಂತೆ ವಿಶ್ವಾಸಾರ್ಹ ಚಿಂತನಾ ತಂಡವಾಗಿ ಮಾನ್ಯತೆ ಪಡೆಯುವುದೇ ಈ ಸಂಸ್ಥೆಯ ಉದ್ದೇಶವಂತೆ.

ಸಂಸ್ಥೆ ೫: ನ್ಯಾಶನಲ್ ಅಕಾಡೆಮಿ ಆಫ್ ಮೆಡಿಕಲ್ ಸೈನ್ಸಸ್, ಹೊಸದಿಲ್ಲಿ. ಈ ವೆಬ್‌ಸೈಟನ್ನು ನೋಡಿದರೆ ಸಾಕು, ಈ ಸಂಸ್ಥೆಯ ಶಿಸ್ತು ಗೊತ್ತಾಗುತ್ತದೆ. ಇದಕ್ಕಿಂತ ಹೆಚ್ಚಿನ ವಿವರಣೆ ಬೇಕಿಲ್ಲ. ಎತ್ತು ಉಚ್ಚೆ ಹೊಯ್ಯುವುದಕ್ಕಿಂತ ವಿಭಿನ್ನವಾದ ವಿನ್ಯಾಸ. ಆದ್ದರಿಂದ ಹೆಚ್ಚಿನ ಮಾಹಿತಿ ಸಿಗುತ್ತಿಲ್ಲ, ಕ್ಷಮಿಸಿ.

ಸಂಸ್ಥೆ ೬: ನ್ಯಾಶನಲ್ ಅಕಾಡೆಮಿ ಆಫ್ ಸೈನ್ಸಸ್, ಅಲಹಾಬಾದ್. ಸ್ಥಾಪನೆ ೧೯೩೦. ಭಾರತೀಯ ವಿಜ್ಞಾನಿಗಳು ತಮ್ಮ ಸಂಶೋಧನೆಯನ್ನು ಪ್ರಕಟಿಸಲು ರಾಷ್ಟ್ರೀಯ ವೇದಿಕೆಯನ್ನು ಒದಗಿಸುವುದೇ ಈ ಸಂಸ್ಥೆಯ ಉದ್ದೇಶ.

ಈ ಆರೂ ಸಂಸ್ಥೆಗಳು ಸೇರಿ ತಯಾರಿಸಿದ ವರದಿಯೇ  ‘ಇಂಟರ್ ಅಕಾಡೆಮಿ ರಿಪೋರ್ಟ್ ಆನ್ ಜಿ ಎಂ ಕ್ರಾಪ್ಸ್’ (ಕುಲಾಂತರಿ ಬೆಳೆಗಳ ಮೇಲೆ ಅಂತರ್- ಅಕಾಡೆಮಿ ವರದಿ). ಈ ವರದಿಯನ್ನು ಇದೇ ಸೆಪ್ಟೆಂಬರ್ ತಿಂಗಳಿನಲ್ಲಿ ರೂಪಿಸಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಿಗೆ ಸಲ್ಲಿಸಲಾಗಿದೆ. ಸಚಿವ ಜೈರಾಂ ರಮೇಶ್ ಮತ್ತು ಯೋಜನಾ ಆಯೋಗದ ಸದಸ್ಯ ಡಾ. ಕೆ. ಕಸ್ತೂರಿ ರಂಗನ್ ರವರ ಸೂಚನೆಯ ಮೇಲೆ ತಯಾರಿಸಿದ ಈ ವರದಿಯನ್ನು ಹೇಗೆ ತಯಾರಿಸಲಾಗಿದೆ ಎಂದೂ ವರದಿಯಲ್ಲೇ ಬರೆಯಲಾಗಿದೆಯಂತೆ. ಅಂದಮೇಲೆ ಈ ವರದಿಯು ನೀವು ಅತ್ಯಂತ ಘನವಾದ ಸಂಶೋಧನೆಗಳನ್ನೂ, ವಸ್ತುನಿಷ್ಠ ವೈಜ್ಞಾನಿಕ ಮಾಹಿತಿಗಳನ್ನೂ ಒಳಗೊಂಡಿದೆ ಎಂದು ವಿಶ್ವಾಸದಿಂದ ಬೀಗುತ್ತೀರಿ. ಆದರೆ ಹಾಗಾಗಿಲ್ಲ. ಈ ಆರೂ ಸಂಸ್ಥೆಗಳ ಘನ ವಿಜ್ಞಾನಿಗಳು ಇನ್ನಾವುದೋ ಕುಲಾಂತರಿ ಬದನೆ ಪ್ರೇಮಿ ವಿಜ್ಞಾನಿಯ ಲೇಖನವನ್ನೇ ಅನಾಮತ್ತಾಗಿ ಎತ್ತಿಕೊಂಡು ವರದಿಯನ್ನು ಕಟ್ಟಿ ಇಡೀ ದೇಶಕ್ಕೇ ಅವಮಾನ ಮಾಡಿದ್ದಾರೆ. ದೇಶದ ಜೀವವೈವಿಧ್ಯ ಉಳಿಸಬೇಕಾದ ಈ ವಿಜ್ಞಾನಿಗಳು ವಿಜ್ಞಾನ ಸಂಶೋಧನಾ ಪ್ರಬಂಧದ ಎಲ್ಲ ನೀತಿ ನಿಯಮಗಳನ್ನೂ ಗಾಳಿಗೆ ತೂರಿ ಬಿಟಿ ಬದನೆಯ ಪರವಾಗಿ ತುತ್ತೂರಿ ಊದಿದ್ದಾರೆ. ಇದು ದೇಶದ ಪ್ರಜ್ಞಾವಂತರೆಲ್ಲ ಖಂಡಿಸಬೇಕಾದ ಘಟನೆ.

ವಿಜ್ಞಾನವನ್ನು ಕಾರ್ಪೋರೇಟ್ ಹಿತಾಸಕ್ತಿಗಳಿಗೆ ಬಳಸಿಕೊಳ್ಳಬಹುದು ಎಂದಷ್ಟೇ ಭಾವಿಸಿದ್ದ ನಮಗೆ ದೇಶದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳನ್ನೂ ಹೀಗೆ ಕಾರ್ಪೋರೇಟ್ ಪ್ರಭಾವದಿಂದ ತಾಳಕ್ಕೆ ತಕ್ಕಂತೆ ಕುಣಿಸಬಹುದು; ಇದಕ್ಕೆ ವಿಜ್ಞಾನಿಗಳೂ ತೆಪ್ಪಗೆ ಮಣಿಯುತ್ತಾರೆ ಎಂದು ಈ ವರದಿಯು ಖಚಿತಪಡಿಸಿದೆ. ಈ ವರದಿಯನ್ನು ಓದಿ, ಈ ವರದಿಗೆ ಮೂಲವಾದ ಲೇಖನವನ್ನೂ ಓದಿ, ಈ ಎಲ್ಲಾ ಸಂಸ್ಥೆಗಳಲ್ಲಿ ಸಿಗಬಹುದಾದ ಮಾಹಿತಿಗಳನ್ನು ಕಲೆಹಾಕಿ ಈ ಲೇಖನ ಸಿದ್ಧಪಡಿಸಿದ್ದೇನೆ. ಆದ್ದರಿಂದ ನೀವು ಸ್ವತಂತ್ರ ಸಂಶೋಧನೆ ಮಾಡುವುದಕ್ಕಿಂತ ಮೊದಲು ನನ್ನ ಲೇಖನವನ್ನು ನಕಲು ಮಾಡುವುದು ಉತ್ತಮ!

ಕುಲಾಂತರಿ ಮುಕ್ತ ಭಾರತ ಮೈತ್ರಿಕೂಟ (ಜಿ ಎಂ ಫ್ರೀ ಕೋಯಲಿಶನ್ ಇಂಡಿಯಾ)ವು ಈ ವರದಿಯು ಪ್ಲಜಿರಿಸಮ್‌ನ (ಕದ್ದು ಬಳಸುವುದು, ಕೃತಿಚೌರ್ಯ) ಪಕ್ಕಾ ಉದಾಹರಣೆ ಎಂದಿದೆ. ಆದರೆ ಈ ಎಲ್ಲಾ ಸಂಸ್ಥೆಗಳೂ ಪ್ರತಿಕ್ರಿಯೆ ನೀಡಿ ‘ಛೆ, ಛೆ, ಹಾಗಾಗುವುದುಂಟೆ? ನಮ್ಮ ವರದಿಯಲ್ಲಿನ ವಾಕ್ಯಗಳಿಗೆ ಉಲ್ಲೇಖ ನೀಡಿರಲಿಲ್ಲ. ಈಗ ಅದನ್ನೂ ನೀಡುತ್ತೇವೆ’ ಎಂದು ಸಮಜಾಯಿಷಿ ನೀಡಿವೆ. ದಶಕಗಳ ಕಾಲ ಸಂಶೋಧನೆ ಮಾಡಿ ಟನ್ನುಗಟ್ಟಳೆ ವೈಜ್ಞಾನಿಕ ವರದಿಗಳನ್ನು ತಯಾರಿಸಿದ ಈ ಸಂಸ್ಥೆಗಳಿಗೆ ಒಂದೇ ಪ್ರಶ್ನೆ: ಅಲ್ಲಾರೀ, ಬಿಟಿ ಬದನೆಯಂಥ ಜ್ವಲಂತ ಪಾರಿಸರಿಕ ವಿಷಯದ ಬಗ್ಗೆ ದೇಶವೇ ಹೊತ್ತುರಿದು, ಭಾರೀ ಪ್ರತಿಭಟನೆ ನಡೆದು ಅದರ ಪ್ರವೇಶಕ್ಕೇ ನಿಷೇಧ ಹೇರಿರುವಾಗ, ಅದೇ ವಿಷಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ನೀಡುವಾಗ ವೈಜ್ಞಾನಿಕ ವರದಿಯನ್ನು ತಯಾರಿಸುವ ಸ್ಟೈಲ್‌ಶೀಟುಗಳೆಲ್ಲ ಮರೆತೇಹೋದವೆ? ಏನನ್ನು ತಿಂದ ಪರಿಣಾಮವಾಗಿ ನೀವು ಈ ರೀತಿ ಉಲ್ಲೇಖಗಳನ್ನು ಕೊಡದೇ ಮಕ್ಕಿ ಕಾ ಮಕ್ಕಿ ಮಾಡಿ ವರದಿ ತಯಾರಿಸಿದಿರಿ?

ಮೊದಲು ಈ ವರದಿಯನ್ನು ಎಷ್ಟು ಕಷ್ಟಪಟ್ಟು ತಯಾರಿಸಲಾಗಿದೆ ಎಂದು ಈ ವರದಿಯೇ ಹೇಳಿದ್ದನ್ನು ತಿಳಿದುಕೊಳ್ಳೋಣ: ಮೊದಲು ಈ ವರದಿ ತಯಾರಿಸಲು ಬಂದ ಪತ್ರವನ್ನು ಎಲ್ಲ ಸಂಸ್ಥೆಗಳಿಗೂ ಕಳಿಸಲಾಯಿತಂತೆ. ಆಮೇಲೆ ೨೦೦೯ರ ಜೂನ್ ೧ರಂದು ಒಂದು ಬ್ರೈನ್ ಸ್ಟಾರ್ಮಿಂಗ್ ಗೋಷ್ಠಿಯನ್ನು ಐ ಎನ್ ಎಸ್ ಎ ನಲ್ಲಿ ನಡೆಸಲಾಯಿತಂತೆ. ಅಲ್ಲಿ ಅತಿ ಆಳವಾದ ಚರ್ಚೆ ನಡೆಯಿತಂತೆ. ಈ ವರದಿಯನ್ನು ಸಭೆಯ ನಡಾವಳಿಯನ್ನು ಅವಲಂಬಿಸಿಯೇ ತಯಾರಿಸಲಾಯ್ತಂತೆ. ಅಷ್ಟೇ ಅಲ್ಲ, ಅಲ್ಲಿ ಹಾಜರಿದ್ದ ಫೆಲೋಗಳು (ಹೂ ಆರ್ ದೀಸ್ ಫೆಲೋಸ್? ಐ ಡೋಂಟ್ ನೋ!!!!) ಅಲ್ಲಿ ತೋರಿಸಿದ ಹಲವು ದಾಖಲೆಗಳನ್ನೂ ಈ ವರದಿ ಒಳಗೊಂಡಿದೆಯಂತೆ. (The present document is based on the discussions at this meeting, the written comments given by Fellows and the documents brought to the attention of the meeting by different Fellows..)

ಹೀಗೆ ಭಾರೀ ಕಷ್ಟಪಟ್ಟು ತಯಾರಿಸಿದ ಈ ವೈಜ್ಞಾನಿಕ ವರದಿಯು ಆನಂದಕುಮಾರ್ ಎಂಬ ಬಿಟಿ ಬದನೆ ಪರವಾಗಿರುವ ವಿಜ್ಞಾನಿಯು ಕೇಂದ್ರ ಜೈವಿಕ ತಂತ್ರಜ್ಞಾನ ಸಚಿವಾಲಯದ ಪ್ರಕಟಣೆಯಾದ ಬಯೋಟೆಕ್ ನ್ಯೂಸ್ ಮ್ಯಾಗಜಿನ್‌ನ ಡಿಸೆಂಬರ್ ೨೦೦೯ರ ಸಂಚಿಕೆಯಲ್ಲಿ ಬರೆದ ಲೇಖನದ ಹಲವು ಪ್ಯಾರಾಗಳನ್ನು ಅನಾಮತ್ತಾಗಿ ಎತ್ತಿ ಸೇರಿಸಿಕೊಂಡಿದೆ. ಈ ವರದಿಯಲ್ಲಿ ಹೇಳಿರುವ ಹಾಗೆ ಈ ಲೇಖನವನ್ನೂ ಜೂನ್ ೧ ರ ಸಭೆಯಲ್ಲಿ ಮಂಡಿಸಲಾದ ಬಗ್ಗೆ ಮಾಹಿತಿ ಈವರೆಗೂ ಸಿಕ್ಕಿಲ್ಲ.

ಅದಿರಲಿ, ಪ್ರತಿಯೊಂದೂ ವೈಜ್ಞಾನಿಕ ವರದಿಯಲ್ಲಿ ಸೈಟೇಶನ್, ರೆಫರೆನ್ಸ್, – ಇತ್ಯಾದಿ ಮೂಲ ಆಕರಗಳನ್ನು ಉಲ್ಲೇಖಿಸುವ ಸಿದ್ಧ ಪರಂಪರೆಯೇ ಇದೆ. ಇದನ್ನು ಆಲ್ಬರ್ಟ್ ಐನ್‌ಸ್ಟೈನ್‌ನಿಂದ ಹಿಡಿದು ಸ್ಟೀಫನ್ ಹಾಕಿಂಗ್‌ವರೆಗೆ ಎಲ್ಲರೂ ಮಾಡುತ್ತಾರೆ. ಆದರೆ ಸಾವಿರಾರು ವಿಜ್ಞಾನಿಗಳಿಗೆ ವೈಜ್ಞಾನಿಕ ವರದಿಗಳನ್ನು ತಯಾರಿಸಲು ಸೂಚಿಸಿ ಅವುಗಳನ್ನೆಲ್ಲ ಜರಡಿ ಹಿಡಿದು ಪ್ರಕಟಿಸುವ ಹೊಣೆಗಾರಿಕೆ ಇರುವ ಈ ಆರೂ ಸಂಸ್ಥೆಗಳು ಯಾವುದೇ ಉಲ್ಲೇಖವೂ ಇಲ್ಲದ ಮತ್ತು ಬೇಕಾಬಿಟ್ಟಿ ಸ್ವೀಪಿಂಗ್ ಹೇಳಿಕೆಗಳನ್ನು ಮಾಡಿರುವ ವರದಿಯನ್ನು ತಯಾರಿಸಿರುವುದು ನಾಚಿಕೆಗೇಡು. ಈ ವರದಿಯ ಪ್ರಕಾರ ಬಿಟಿ ಬದನೆಯಿಂದ, ಅಥವಾ ಕುಲಾಂತರಿ ತಳಿಗಳಿಂದ ಜೀವವೈವಿಧ್ಯದ ಮೇಲೆ ಯಾವುದೇ ದುಷ್ಪರಿಣಾಮವೂ ಇಲ್ಲ!  ಈ ವಾದ ಎಷ್ಟು ಪೊಳ್ಳು ಎನ್ನುವುದಕ್ಕೆ ನೀವು ಪ್ರೊ. ಬಿ.ಎಂ. ಕುಮಾರಸ್ವಾಮಿಯವರ ಈ ಭಾಷಣವನ್ನು ಹತ್ತು ನಇಮಿಷ ಕೇಳಿದರೆ ಸಾಕು.

ಮೊದಲೇ ಈ ಬಿಟಿ ಬದನೆಯನ್ನು ತಯಾರಿಸುವಾಗ ನಮ್ಮ ದೇಸಿ ತಳಿಗಳನ್ನು ಯಾವ ಅಧಿಕೃತ ಅನುಮತಿಯೂ ಇಲ್ಲದೆ ಬಳಸಿಕೊಳ್ಳಲಾಗಿದೆ ಎಂದು ಧಾರವಾಡ ವಿಶ್ವವಿದ್ಯಾಲಯದ ಮೇಲೆ ಎನ್‌ವಿರಾನ್‌ಮೆಂಟ್ ಸಪೋರ್ಟ್ ಗ್ರೂಪ್ ಈಗಾಗಲೇ ಕರ್ನಾಟಕ ಜೀವವೈವಿಧ್ಯ ಮಂಡಳಿಗೆ ದೂರು ನೀಡಿದ್ದು ಅದೀಗ ವಿಚಾರಣೆಯಲ್ಲಿದೆ. ಸಂಶೋಧನೆಗಾಗೇ ನಮ್ಮ ಪ್ರಿಯ ಬದನೆಯನ್ನು ಕದ್ದ ಮೇಲೆ ಅದನ್ನು ವಿರೂಪಗೊಳಿಸುವ ಸಿದ್ಧಾಂತಗಳನ್ನು ಕದಿಯುವುದರಲ್ಲಿ ಅಚ್ಚರಿಯೇನೂ ಇಲ್ಲ!

ಕೃತಿಚೌರ್ಯದ ಬಗ್ಗೆ ಈ ಆರು ಸಂಸ್ಥೆಗಳಲ್ಲಿ ಒಂದಾದ ಇಂಡಿಯನ್ ಅಕಾಡೆಮಿ ಆಫ್ ಸೈನ್ಸಸ್ ತನ್ನ ವೆಬ್‌ಸೈಟಿನಲ್ಲೇ ಹೀಗೆ ಹೇಳಿಕೊಂಡಿದೆ:

The degree of plagiarism could be as mild as the copying of a single sentence from another author without acknowledgement, or could involve more extensive ‘lifting of material’ from other sources, including previous publications of the same author.

 ಕೃತಿಯ ಆಕರವನ್ನು ಉಲ್ಲೇಖಿಸದೆಯೇ ಒಂದು ವಾಕ್ಯವನ್ನೂ ಮರುಪ್ರಕಟಿಸುವುದು ಕೃತಿಚೌರ್ಯ ಎಂದು ಬೊಬ್ಬಿಡುವ ಈ ಸಂಸ್ಥೆಯೂ ಕುಲಾಂತರಿ ಬದನೆ ಕುರಿತ ವರದಿಯ ಪ್ಯಾರಾಗಟ್ಟಳೆ ಕಳ್ಳತನಕ್ಕೆ ಸಹಿ ಹಾಕಿದೆ. ಇಷ್ಟಾಗಿ, ಕೃತಿಚೌರ್ಯದ ವಿಷಯ ಗೊತ್ತಾದರೆ ಕೂಡಲೇ ಕ್ರಮ ತೆಗೆದುಕೊಳ್ಳುವುದಾಗಿಯೂ ಅದು ಖಚಿತಪಡಿಸಿದೆ:

To counter these problems, we are instituting several measures with immediate effect, uniformly for all Academy journals. Every case of suspected plagiarism brought to our attention will be investigated objectively and transparently by the journal editors as speedily as possible. If plagiarism is detected during the refereeing process, apart from immediate rejection the Academy will consider other steps commensurate with the seriousness of the case. In those situations where plagiarism is proven after publication, appropriate announcements will be placed, both on the Journal’s Web site and in the next possible print issue of the journal. The Academy reserves the right to bring such instances to the attention of the author’s employers, funding agencies and (where applicable) the original author whose work has been plagiarised. The journal from where the plagiarised material has been taken may also be alerted.

 ಹೀಗೆ ಈ ಸಂಸ್ಥೆಯೇ ಬರೆದುಕೊಂಡ ಮೇಲೆ, ಈ ಸಂಸ್ಥೆಯ ವಿರುದ್ಧವೇ ದೂರು ಕೊಡಬೇಕಾದ ಸ್ಥಿತಿ ಒದಗಿದೆ! ಛೆ, ಛೆ!

ಈ ವಿಜ್ಞಾನಿಗಳ ಸಭೆ ನಡೆದ ಐ ಎನ್ ಎಸ್ ಯ ಅಧ್ಯಕ್ಷರಾಗಿದ್ದ ಪ್ರೊ. ಎಂ. ಎಸ್. ವಲಿಯಾಥನ್ ೨೦೦೩ರ ಮಾರ್ಚ್ ೮ರಂದು ಸೊಸೈಟಿ ಫಾರ್ ಸೈಂಟಿಫಿಕ್ ವ್ಯಾಲ್ಯೂಸ್ (ಎಸ್ ಎಸ್ ವಿ) ಎಂಬ ಸ್ವತಂತ್ರ ಸಂಸ್ಥೆಯಲ್ಲಿ ‘ಎಥಿಕ್ಸ್ ಇನ್ ಸೈನ್ಸ್’ ವಿಚಾರ ಸಂಕಿರಣದಲ್ಲಿ ಮಾಡಿದ ಭಾಷಣದ ಒಂದು ಪ್ಯಾರಾ ಇಲ್ಲಿದೆ:

In his inaugural remarks, Prof M S Valiathan, President INSA, underlined the ethical concerns which have taken a central place in global societies particularly after the second world-war due to ever increasing role of science and technology in our lives. With rapid advances in life sciences, issues of medical, genetic and ecological sciences are riddled with ethical problems which are of concern to government departments, social organizations, NGOs, academies and learned societies. The dilemma of ethics for a scientist is epitomized by what Duryodhana of Mahabharat said : ” I know what I ought to do but I cannot do it; I know what I ought not do but I cannot help doing it”.

 ಹೀಗೆ ವಿಜ್ಞಾನ ರಂಗದಲ್ಲಿ ನೈತಿಕತೆಯ ಬಗ್ಗೆ ಉಪನ್ಯಾಸ ನೀಡುವ ಸಂಸ್ಥೆಗಳ ಮುಖ್ಯಸ್ಥರು ೨೦೧೦ರಲ್ಲಿ ಇಂಥ ಕಟ್ಟುಕಥೆಯನ್ನೂ ಮೀರಿಸುವ ವರದಿಗೆ ಸಹಿ ಹಾಕಿದ್ದಾದರೂ ಹೇಗೆ? ಇಲ್ಲಿ ಇವರೆಲ್ಲರೂ ದುರ್ಯೋಧನರೇ?

ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನ ಪ್ರಕಾರ ರೆಫರೆನ್ಸ್ ನೀಡುವ ಪದ್ಧತಿ ಹೀಗಿದೆ:

References
In many journals and books, references are placed at the end of the article or chapter; in others, they are treated as footnotes. In any case, place your list of references at the end of the manuscript.

 ಈ ಆನಂದಕುಮಾರ್ ಬರೆದ ವರದಿಯನ್ನು ಓದಿದರೆ ಎಂಥವರಿಗೂ ಇದು ಬಿಟಿ ಬದನೆಯ ಪರವಾಗಿಯಾವ ವಸ್ತುನಿಷ್ಠತೆಯೂ ಇಲ್ಲದೆ ಬರೆದದ್ದು ಎಂದು ಗೊತ್ತಾಗುತ್ತದೆ. ಈ ವಿಜ್ಞಾನಿಯು ಈ ಮೊದಲೇ ಬಿಟಿ ಬದನೆಯನ್ನು ಮಾನ್ಯ ಮಾಡಿದ್ದ ಜೆನೆಟಿಕ್ ಇಂಜಿನಿಯರಿಂಗ್ ಅಪ್ರೂವಲ್ ಕಮಿಟಿಯ (ಜಿ ಇ ಎ ಸಿ) ಸದಸ್ಯರಾಗಿದ್ದರು ಅನ್ನೋದು ವಿಷಯವನ್ನು ಇನ್ನಷ್ಟು ವಿಶದೀಕರಿಸುತ್ತದೆ. ಇದೇ ಜಿ ಇ ಎ ಸಿಯ ವರದಿಯನ್ನೇ ದೇಶದಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಗಳ ತರುವಾಯ ಸಚಿವ ಜೈರಾಂ ರಮೇಶ್ ತಿರಸ್ಕರಿಸಿದ್ದರು.

 

ಇನ್ನೂ ಒಂದು ವಿಷಯ: ಈ ಲೇಖನ ಬಂದ ಸಂಚಿಕೆಯಲ್ಲೇ ಮೊನ್ಸಾಂಟೋ ಯಾಜಮಾನ್ಯದ ಮಹಿಕೋ ಸಂಸ್ಥೆಯನ್ನು ವಾಚಾಮಗೋಚರವಾಗಿ ಹಾಡಿ ಹೊಗಳಿದ ಭಾರೀ ಲೇಖನವೊಂದು ಇದೇ ಸಂಚಿಕೆಯಲ್ಲಿ ಪ್ರಕಟವಾಗಿದೆ. ಅದು ಇಲ್ಲಿದೆ:

ಹೀಗೆ ನಕಲೇ ಅಸಲು ಎಂದು ನಂಬಿಸುವ ಕೆಲಸವನ್ನು ನಮ್ಮ ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳೇ ಮಾಡಿವೆ. ಬಹುಶಃ ನಮ್ಮ ದೇಶದ ಜೀವ ವೈವಿಧ್ಯಕ್ಕೆ, ಪರಂಪರೆಗೆ ಈ ಸಂಸ್ಥೆಗಳು ಎಂಥ ಅಪಚಾರ ಮಾಡಿವೆ ಎಂಬುದು ಈಗ ಗೊತ್ತಾಗುವುದಿಲ್ಲ. ಬಿಟಿ ಬದನೆಯು ವಕ್ಕರಿಸಿದ ಮೇಲೆಯೇ ತಿಳಿಯುತ್ತದೆ. ನಿಯಂತ್ರಿತ ವಾತಾವರಣದಲ್ಲಿ (ಕಂಟ್ರೋಲ್‌ಡ್ ಕಂಡಿಶನ್ಸ್) ಪ್ರಯೋಗ; ಹವಾನಿಯಂತ್ರಿಕ ಕೋಣೆಗಳಲ್ಲಿ ಸಭೆ – ಹೀಗೆಯೇ ಮಾಡುತ್ತ ಹೋದರೆ ಇವರೆಲ್ಲ ದೇಶದ ಜನರ ನಂಬಿಕೆಯನ್ನು ಪೂರ್ತಾ ಕಳೆದುಕೊಳ್ಳುತ್ತಾರೆ.

ಸದ್ಯ, ಈ ಲೇಖನ ಬರೆಯೋ ಹೊತ್ತಿಗೆ ಸಂಸ್ಥೆ ಸಂಖ್ಯೆ ೫, ನ್ಯಾಶನಲ್ ಅಕಾಡೆಮಿ ಆಫ್ ಮೆಡಿಕಲ್ ಸೈನ್ಸಸ್ ಪತ್ರಿಕಾ ಹೇಳಿಕೆ ನೀಡಿ ಸದರಿ ವರದಿಗೆ ಹಾಕಿದ ಸಹಿಯನ್ನು ಹಿಂದೆಗೆದುಕೊಂಡಿದೆ. ಈಗ ಗೊತ್ತಾಗಿರೋ ಪ್ರಕಾರ, ಜೂನ್ ೧ರ ಸಭೆಯಲ್ಲಿ ೯೦ಕ್ಕೂ ಹೆಚ್ಚು ವಿಜ್ಞಾನಿಗಳು ಭಾಗವಹಿಸಿದ್ದರು. ಆದರೆ ವರದಿ ಬರೆಯುವ ಹೊಣೆಗಾರಿಕೆಯನ್ನು ಐ ಎನ್ ಎಸ್ ಎ ವಹಿಸಿಕೊಂಡಿತಂತೆ. ೯೦ ಜನ ವಿಜ್ಞಾನಿಗಳೂ ನಂಬಿ ಮೋಸ ಹೋದರೆ? ಈ ವರದಿಯನ್ನು ಬರೆದ ಮೇಲೆ ಒಬ್ಬರಿಗೂ ಈ ವರದಿಯ ಅಂಶಗಳ ಬಗ್ಗೆ ಸೂಕ್ತವಾದ ಸೈಟೇಶನ್‌ಗಳನ್ನು ಬರೆಯಬೇಕು ಎಂಬುದು ತಲೆಗೆ ಹೊಳೆಯಲಿಲ್ಲವೆ?

ಕಣ್ಣುಮುಚ್ಚಿ ವರದಿಗೆ ಸಹಿ ಹಾಕುವ, ಹಿತಾಸಕ್ತ ಕಾರ್ಪೋರೇಟ್‌ಗಳ ಮೂಗಿನ ನೇರಕ್ಕೆ ವರದಿಯನ್ನು ಬರೆಯುವ ಇಂಥ ವಿಜ್ಞಾನಿಗಳ ಸಮೂಹವನ್ನು ಚೆನ್ನಾಗಿ ನಿಭಾಯಿಸದಿದ್ದರೆ ಇವರು ಹೇಳಿದ್ದೆಲ್ಲ ಘೋರ ಸತ್ಯಗಳು ಎಂದು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಬರುತ್ತದೆ.

ಈಗಲೇ ನಾವೆಲ್ಲ ಇಂಥ ನಕಲಿ ವರದಿಗಳನ್ನು ತಡೆಯುವ ಕೆಲಸ ಮಾಡಬೇಕು. ಕಾಲ ಮಿಂಚುತ್ತಿದೆ.

beluru sudarshana BT Brinjal mitramaadhyama plagiarism
Share. Facebook Twitter Pinterest LinkedIn Tumblr Email
Previous Article‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
Next Article ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

Comments are closed.

ಲೇಖನಗಳು
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.