Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter)
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ವಿಮರ್ಶೆ»ಹನುಮಾನ್ ಅಂಶ್: ಸಿಲಿಕಾನ್ ಕಣಿವೆಗೂ ಸಂದೇಶ ಕೊಟ್ಟ ಸಂತ!
ವಿಮರ್ಶೆ

ಹನುಮಾನ್ ಅಂಶ್: ಸಿಲಿಕಾನ್ ಕಣಿವೆಗೂ ಸಂದೇಶ ಕೊಟ್ಟ ಸಂತ!

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 6, 2026No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
ಪ್ರಿಯ ರಾಕಿಂಗ್ ಸ್ಟಾರ್ ಯಶ್…..
ನೀವೇನಾದ್ರೂ ಇವತ್ತು ಧಾರವಾಡದ ಐನಾಕ್ಸ್ ಮಾಲಿನ ಥಿಯೇಟರ್ 1ರಲ್ಲಿ ಟಾಕ್ಸಿಕ್ ಸಿನೆಮಾದಲ್ಲಿ ನಟಿಸ್ತಾ ಮಧ್ಯಂತರದಲ್ಲಿ ಥಿಯೇಟರ್ 2 ಗೆ ಬಂದಿದ್ರೆ, ಹನುಮಾನ್ ಅಂಶ್ ಸಿನೆಮಾದ ಕೆಲವು ದೃಶ್ಯಗಳನ್ನು ನೋಡಿರ್ತಿದ್ರಿ. ಅಕಸ್ಮಾತ್ ನೋಡಿದ್ರೆ ಬಹುಶಃ ಟಾಕ್ಸಿಕ್ ಸಿನೆಮಾದ ಇನ್ನರ್ಧ ಭಾಗದ ಶೋನಲ್ಲಿ ನೀವು ಇರ್ತಾನೇ ಇರಲಿಲ್ಲ!!!
……..
ಯಶ್ ನಿಜಕ್ಕೂ ಸಿಕ್ಕಿದ್ರೆ ಈ ಮಾತು ಹೇಳ್ತಾ ಇದ್ದೆ ಅನ್ಸುತ್ತೆ. ‘ಹನುಮಾನ್ ಅಂಶ್’ ಸಿನೆಮಾ ನೋಡಿದ ಮೇಲೆ, ಫೇಸ್ ಬುಕ್ಕಿನಲ್ಲಿ ಟಾಕ್ಸಿಕ್ ಸಿನೆಮಾ ಕುರಿತ ಬಗೆಬಗೆಯ ವಿಮರ್ಶೆಗಳನ್ನು ನೆನಪಿಸಿಕೊಂಡಾಗ ಹೀಗೆಲ್ಲ ಹೇಳಬಹುದೇನೋ ಅನ್ನಿಸಿದ್ದು ನಿಜ. ಏಕೆಂದರೆ ನೀಮ್ ಕರೋಲಿ ಬಾಬಾ (ನೀಬ್ ಕರೋರಿ ಬಾಬಾ ಅಂತಾನೂ ಹೇಳ್ತಾರೆ) ಅವರ ಜೀವನ ಕುರಿತ ಈ ಸಿನೆಮಾವನ್ನು ಅದೇ ಥಿಯೇಟರ್ 2 ರಲ್ಲಿ ನೋಡಿದೆ.
……..
ಸಾಧು ಸಂತರ ನಿಜಜೀವನದ ಸಿನೆಮಾ ಎಂದಕೂಡಲೇ ಪವಾಡಗಳು ಇದ್ದೇ ಇರುತ್ತವೆ ಎಂದು ಊಹಿಸಬಹುದು. ಇವೆ ಕೂಡ. ಆದರೆ ಈ ಸಿನೆಮಾದ ಅತ್ಯುತ್ತಮ ಅಂಶಗಳೆಂದರೆ: ಪ್ರಬುದ್ಧ ನಟನೆ, ಗುಣಮಟ್ಟದ ಮೂಲ ಹಾಡು – ಸಂಗೀತ, ಅತ್ಯದ್ಭುತ ಪ್ರೊಡಕ್ಷನ್ ಟ್ರೀಟ್ ಮೆಂಟ್, ಎಲ್ಲೂ ಬೇಸರ ಮೂಡಿಸದ ಕಥಾಹರಿವು. ಸಿನೆಮಾ ಮುಗಿಯುವ ಕ್ಷಣ ಇನ್ನೂ ದೂರ ಇದೆ ಎಂಬ ಸಮಾಧಾನ ಮೂಡುವ ಹೊತ್ತಿಗೇ ಟೈಟಲ್ ಕಾರ್ಡುಗಳು ಮೂಡುತ್ತವೆ. ಬಹುಶಃ ಎರಡನೆಯ ಭಾಗವೂ ಇರಬಹುದು.
ಹಾಗೆ ನೋಡಿದರೆ, ನೀಮ್ ಕರೋಲಿ ಬಾಬಾ ಅವರ ಆಧ್ಯಾತ್ಮಿಕ ಚಿಂತನೆಗಳು ಈಗಲೂ ಜಗತ್ತನ್ನು ಪ್ರಭಾವಿಸಿವೆ. ಆಪಲ್ ಸಂಸ್ಥೆಯ ಸ್ಥಾಪಕ ಸ್ಟೀವ್ ಜಾಬ್ಸ್ 1974ರಲ್ಲಿ ಮಿತ್ರ ರಾಬರ್ಟ್ ಫ್ರೀಡ್ ಲ್ಯಾಂಡ್ ಸಲಹೆಯಂತೆ ನೀಮ್ ಕರೋಲಿ ಬಾಬಾ ಅವರನ್ನು ಕಾಣಲು ನೈನಿತಾಲಿಗೆ ಹೋಗುತ್ತಾರೆ. ಆದರೆ ಹಿಂದಿನ ವರ್ಷವೇ ಬಾಬಾ ನಿಧನರಾಗಿರುತ್ತಾರೆ. ಅದೇ ಸಮಯಕ್ಕೆ ಸ್ಟೀವ್ ಜಾಬ್ಸ್ ಗೆ ಅತಿಸಾರವಾಗಿ ಅಲ್ಲೇ ಉಳಿಯುತ್ತಾರೆ. ಆಟೋಬಯಾಗ್ರಫಿ ಆಫ್ ಎ ಯೋಗಿ ಪುಸ್ತಕವನ್ನು ಪದೇ ಪದೇ ಓದುತ್ತಾರೆ. ಇದೇ ಪ್ರವಾಸದಲ್ಲಿ ಅವರು ಮೊದಲು ಹರಿದ್ವಾರಕ್ಕೂ ಹೋಗಿ ಕುಂಭ ಮೇಳವನ್ನು ನೋಡಿದ್ದರು.
ಬಾಬಾರಿಂದಲೇ ‘ರಾಮ ದಾಸ್’ ಎಂದೇ ನಾಮಕರಣಗೊಂಡ, ಬಾಬಾರವರ ಜೊತೆ ಒಡನಾಡಿದ್ದ ರಿಚರ್ಡ್ ಆಲ್ಪರ್ಟ್ (1931–2019) ಬರೆದ Be here now ಪುಸ್ತಕವು ಸ್ಟೀವ್ ಮೇಲೆ ಅತ್ಯಂತ ಪ್ರಭಾವ ಬೀರಿತ್ತು. ಈ ಪುಸ್ತಕದಲ್ಲಿ ಬಾಬಾ ಅವರ ಬಗೆಗೆ ಮಾತ್ರವಲ್ಲ, ಸೈಕೆಡೆಲಿಕ್ ಔಷಧೀಯ ಸಂಗತಿಗಳ ಅನುಭವದ ಬಗ್ಗೆಯೂ ರಾಮದಾಸ್ ಬರೆದಿದ್ದಾರೆ. ಈ ಪುಸ್ತಕದಲ್ಲಿ ರಾಮದಾಸ್ ಬರೆದ ಗ್ರಾಫಿಕ್ ನಿರೂಪಣೆಗಳು ಗಮನಾರ್ಹ.
ಈ ಘಟನೆ ನಡೆದ ಹಲವು ದಶಕಗಳ ನಂತರ, 2015ರಲ್ಲಿ ನರೇಂದ್ರ ಮೋದಿ ಜೊತೆಗಿನ ಸಂವಾದದಲ್ಲಿ ಫೇಸ್ ಬುಕ್ ಸ್ಥಾಪಕ ಮಾರ್ಕ್ ಝುಕರ್ ಬರ್ಗ್ ಸ್ವತಃ ತಾನು ಫೇಸ್ ಬುಕ್ ಸಂಸ್ಥೆಯನ್ನೇ ಮಾರುವ ಯೋಚನೆಯಲ್ಲಿದ್ದಾಗ, ತನ್ನ ಮೆಂಟರ್ ಸ್ಟೀವ್ ಜಾಬ್ಸ್ ಭಾರತದ ‘ಆ ದೇಗುಲ’ಕ್ಕೆ ಹೋಗು ಎಂದು ಸೂಚಿಸಿದ್ದರೆಂದೂ, ತಾನು ಅಲ್ಲಿಗೆ ಹೋಗಿ ಬಂದ ಮೇಲೆ ಜಗತ್ತಿನ ಜನರನ್ನು ಪರಸ್ಪರ ಜೋಡಿಸುವ ತನ್ನ ಕೆಲಸದ ಮಹತ್ವ ಎಂಬುದು ಮತ್ತಷ್ಟು ಗಟ್ಟಿಯಾಯಿತೆಂದೂ ಹೇಳುತ್ತಾರೆ. (https://bit.ly/3TgUTjF)
ಬಾಬಾ ಅವರ ಪ್ರಭಾವದ ಬಗ್ಗೆ ಇನ್ನೂ ಕೆಲವು ದಾಖಲಿತ ಸಂಗತಿಗಳಿವೆ:
ಭಾರತದಲ್ಲಿ ಸಿಡುಬು(smallpox) ನಿವಾರಣಾ ಅಭಿಯಾನದ ರೂವಾರಿ ಲ್ಯಾರಿ ಬ್ರಿಲಿಯಂಟ್ ತನ್ನ ಅನುಭವಗಳನ್ನು ದಾಖಲಿಸುತ್ತ, ನೀಮ್ ಕರೋಲಿ ಬಾಬಾರವರೇ ತನಗೆ ಸಿಡುಬು ನಿವಾರಣಾ ಅಭಿಯಾನಕ್ಕೆ ಪ್ರೇರಣೆಯಾಗಿದ್ದೇ ಬಾಬಾ ಎಂದಿದ್ದಾರೆ (Sometimes Brilliant: Larry Brilliant, 2016).ಮುಂದೆ ಬ್ರಿಲಿಯಂಟ್ ಮತ್ತು ಸ್ಟೀವ್ ಜಾಬ್ಸ್ ಮಿತ್ರರಾಗಿದ್ದರು.
ನನಗೆ ಸಿಕ್ಕಿದ ಒಂದು ಮಾಹಿತಿಯ ಪ್ರಕಾರ ಸ್ಟೀವ್ ಜಾಬ್ಸ್ ತೀರಿಕೊಂಡಾಗ, ಅವರ ಖಾಸಗಿ ಕೋಣೆಯಲ್ಲಿ ನೀಮ್ ಕರೋಲಿ ಬಾಬಾ ಅವರ ಭಾವಚಿತ್ರ ಇತ್ತು ಎಂದು ಅವರ ನಿಧನದ ನಂತರ ಸ್ವತಃ ಲ್ಯಾರಿ ಬ್ರಿಲಿಯಂಟ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಲ್ಯಾರಿ ಅವರ ಪತ್ನಿ ಗಿರಿಜಾರವರು ಒಮ್ಮೆ ಬಾಬಾ ಬಳಸುತ್ತಿದ್ದ ಒಂದು ಕಂಬಳಿಯನ್ನು ಸ್ಟೀವ್ ಜಾಬ್ಸ್ ಗೆ ಕೊಟ್ಟಿದ್ದರು.
ಹನುಮಾನ್ ಅಂಶ್ ಸಿನೆಮಾದಲ್ಲಿ ಸ್ಟೀವ್ ಜಾಬ್ಸ್, ಮಾರ್ಕ್ ಇನ್ನೂ ಬಂದಿಲ್ಲ. ಆದ್ದರಿಂದ ಎರಡನೆಯ ಭಾಗದಲ್ಲಿ ಇವೆಲ್ಲ ಇರಬಹುದು ಎಂದು ಊಹಿಸುತ್ತೇನೆ. ಎರಡು ಕೋಟಿ ರೂ. ಬಜೆಟ್ಟಿನ ಈ ಸಿನೆಮಾ ಇವತ್ತಿಗಾಗಲೇ 40 ಕೋಟಿ ರೂ. ಗಳಿಸಿ ಶೇಕಡಾವಾರು ಲಾಭದ ಲೆಕ್ಕದಲ್ಲಿ ದಾಖಲೆ ಬರೆದಿದೆ. ನೀಮ್ ಕರೋಲಿ ಬಾಬಾ ಅವರ ಮೇಲಿನ ಶ್ರದ್ಧೆಯಿಂದ ಸಿನೆಮಾ ನಿರ್ಮಾಣವಾಗಿದೆ ಎಂದಮೇಲೆ ಸ್ಟೀವ್ ಜಾಬ್ಸ್, ಝುಕರ್ ಬರ್ಗ್ ಅಂತಹವರನ್ನೇ ಪ್ರಭಾವಿಸಿದ ಸಂತನ ಕುರಿತ ಸಿನೆಮಾ ಗೆಲ್ಲದೆ ಇರುತ್ತದೆಯೆ? ನಾನೂ ಇದ್ದ ಇವತ್ತಿನ ಧಾರವಾಡದ ಶೋ ಹೌಸ್ ಫುಲ್ ಆಗಿತ್ತು!
‘ಎಮೋಶನಲ್ ಇಂಟೆಲಿಜೆನ್ಸ್’ ಪದಗುಚ್ಛವನ್ನು ವಿಶ್ವದಾದ್ಯಂತ ಪ್ರಚುರಪಡಿಸಿದ ಡೇನಿಯೆಲ್ ಗೋಲ್ ಮನ್ ಕೂಡಾ ಬಾಬಾ ಸಹವಾಸದಲ್ಲಿದ್ದರು.
ಬಾಬಾ ಸಹವಾಸದಿಂದಾಗಿ ಜೆಫ್ರಿ ಕಾಗೆಲ್ ತನ್ನ ಹೆಸರನ್ನು ಕೃಷ್ಣದಾಸ್ ಎಂದು ಬದಲಿಸಿಕೊಂಡರು. ಅವರು ಪಾಶ್ಚಾತ್ಯ ದೇಶಗಳಲ್ಲಿ ಕೀರ್ತನೆಗಳಿಂದಲೇ ಆಧ್ಯಾತ್ಮಿಕತೆಯನ್ನು ಸಾರಿದರು.
ಅಂದ್ರೆ ವೈದ್ಯಕೀಯ ರಂಗ, ಸಂಗೀತ, ತಂತ್ರಜ್ಞಾನ, ಆಧ್ಯಾತ್ಮಿಕತೆ, ಸಿಲಿಕಾನ್ ಕಣಿವೆ ಕ್ರಾಂತಿ – ಇವೆಲ್ಲದರ ಮೇಲೂ ನೀಮ್ ಕರೋಲಿ ಬಾಬಾ ಅವರ ಪ್ರಭಾವ ಇತ್ತು ಎಂದು ಹೇಳಲು ಯಾವ ಸಮಸ್ಯೆಯೂ ಇಲ್ಲ. ಈ ವ್ಯಕ್ತಿಗಳು ಸಾಮಾನ್ಯರೇನೂ ಆಗಿರಲಿಲ್ಲ; ಸ್ವತಃ ತಮ್ಮ ಪ್ರತಿಭೆಯಿಂದಲೇ ಬೆಳೆದವರು. ಆದಾಗ್ಯೂ ಅತ್ಯಂತ ಗೌರವದಿಂದ ನೀಮ್ ಕರೋಲಿ ಬಾಬಾರನ್ನು ಸ್ಮರಿಸುತ್ತಾರೆ.
ಬಾಬಾ ಅವರಿಗೆ ನೂರಾರು ಸೆಲೆಬ್ರಿಟಿಗಳು, ರಾಜಕಾರಣಿಗಳು ಭಕ್ತರು ಎಂದು ತಿಳಿದುಕೊಂಡೆ. ಆದರೆ ತಮ್ಮ ಜೀವನದ ಮೇಲೆ ಪರಿಣಾಮ ಬೀರಿದ ಬಗ್ಗೆ ಖಚಿತವಾಗಿ ಹೇಳಿದ ಕೆಲವರನ್ನಷ್ಟೆ ಇಲ್ಲಿ ಉದಾಹರಿಸಿದ್ದೇನೆ.
ಯಾವ ನಿರೀಕ್ಷೆಗಳೂ ಇಲ್ಲದೆಯೇ ಈ ಸಿನೆಮಾ ನೋಡಿದ ಮೇಲೆ ನನಗೆ ವಿಷಪೂರಿತ (TOXIC) ವಾತಾವರಣದಿಂದ ಹೊರಬಂದು ನಿರಾಳವಾಗಿ ಉಸಿರಾಡಿದ ಅನುಭವ ಆಗಿದ್ದು ಮಾತ್ರ ನಿಜ!
ಮಲೈ ಮಹದೇಶ್ವರನ ಸನ್ನಿಧಿಗೆ ಹೋದಾಗಲೆಲ್ಲ ಸಿಗುವ ಬಣ್ಣಿಸಲಾಗದ ಸಮಾಧಾನವೂ ಬಹುಶಃ ಈ ಬಗೆಯ ಪ್ರಭಾವವೇ ಇರಬಹುದು ಎಂದು ಈಗ ಅನ್ನಿಸುತ್ತಿದೆ
Hanuman Ansh Mark Zuckerberg Neem Karoli Baba Steve jobs
Share. Facebook Twitter Pinterest LinkedIn Tumblr Email
Previous Articleಎರಡು ದಶಕಗಳ ಹಿಂದಿನ ಡಿಜಿಟಲ್ ಕಾವ್ಯ!
Next Article ಸಂಗೀತ ತಪಸ್ವಿಗೆ 75: ಪಂಡಿತ ಶ್ರೀ ಗಣಪತಿ ಭಟ್ ಹಾಸಣಗಿ
ಬೇಳೂರು ಸುದರ್ಶನ
  • Website

Related Posts

ಸಂಗೀತ ತಪಸ್ವಿಗೆ 75: ಪಂಡಿತ ಶ್ರೀ ಗಣಪತಿ ಭಟ್ ಹಾಸಣಗಿ

September 6, 2026

ಎರಡು ದಶಕಗಳ ಹಿಂದಿನ ಡಿಜಿಟಲ್ ಕಾವ್ಯ!

September 3, 2026

ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೭ : WHEN THE INDICATED REMEDY FAILS IN HOMEOPATHIC PRACTICE

August 24, 2026
Leave A Reply Cancel Reply

You must be logged in to post a comment.

ವಿಮರ್ಶೆ, ಸುದ್ದಿ
  • ಸಂಗೀತ ತಪಸ್ವಿಗೆ 75: ಪಂಡಿತ ಶ್ರೀ ಗಣಪತಿ ಭಟ್ ಹಾಸಣಗಿ
  • ಎರಡು ದಶಕಗಳ ಹಿಂದಿನ ಡಿಜಿಟಲ್ ಕಾವ್ಯ!
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೭ : WHEN THE INDICATED REMEDY FAILS IN HOMEOPATHIC PRACTICE
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೬ : ಹೋಮಿಯೋಪಥಿ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೫ : ಪಶುವೈದ್ಯ ರತ್ನಾಕರ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೨ : ಆರೋಗ್ಯಕರ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೧ : ಆರೋಗ್ಯ ದರ್ಶನ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೧೦ : ನಾಡ ಮದ್ದು
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೯ : ಊರೌಷಧಿಗಳ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೮: ಗರ್ಭಿಣಿ ಮತ್ತು ಬಾಣಂತಿ ಉಪಚಾರ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೭: ಗಾಂವಠೀ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೬: ಆರೋಗ್ಯವೇ ಭಾಗ್ಯ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ ೫: ರೂಢಿಯ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 4: ಆರೋಗ್ಯ ಧರ್ಮಪಾಲನೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 3: ಅನುಭವ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 2: ಸುಲಭ ಚಿಕಿತ್ಸೆ
  • ಎಲ್ ಆರ್ ಹೆಗಡೆ ವೈದ್ಯಕೀಯ ಪುಸ್ತಕಮಾಲೆ 1: ಜನಪದ ವೈದ್ಯ
  • ರಜಿನಿಕಾಂತ್: ಒಂದು ಖಚಿತ ಜೀವನ ಚರಿತ್ರೆ | ಇಂಗ್ಲಿಶಿನಿಂದ ಕನ್ನಡಕ್ಕೆ : ಬೇಳೂರು ಸುದರ್ಶನ
  • ಪೂಜ್ಯ ದಲಾಯಿ ಲಾಮಾರವರ ಸ್ಪರ್ಶದರ್ಶನ ಭಾಗ್ಯಶಾಲಿ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಇನ್ನು ಬಯಲಾಗಬೇಕಿರೋದು : ಮುಚ್ಚಿಟ್ಟ ಅಂಬೇಡ್ಕರ್ ಚರಿತ್ರೆ! ( “ಮುಚ್ಚಿಟ್ಟ ದಲಿತ ಚರಿತ್ರೆ: ಪುಸ್ತಕದ ಒಂದು ದಿಢೀರ್‌ ವಿಮರ್ಶೆ)
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಸಾವರ್‌ಕರ್‌ :  ಸ್ವಾತಂತ್ರ್ಯವೀರನಷ್ಟೇ ಅಲ್ಲ, ಖಚಿತ ವಿಚಾರಗಳ ಸ್ವತಂತ್ರ ಜೀವಿ      
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • `ಜೋಕರ್’ಗೆ ಇನ್ನುಮುಂದೆ ಬದುಕು ಕಾಮೆಡಿ
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • New study from CSE exposes massive environmental dumping of old and used vehicles in Africa and South Asia
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • ‘After I die, cut out my heart and eat it’ (Book Review: Tombstone)
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • `ದ ಸ್ವರ್ವ್’: ಆಧುನಿಕ ಯುರೋಪಿಗೆ ಮುನ್ನುಡಿಯಾದ ಕಾವ್ಯದ ಶೋಧ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • `ಮ್ಯಾಡ್‌ ಮ್ಯಾಕ್ಸ್‌: ಫ್ಯೂರಿ ರೋಡ್‌’: ಶತಮಾನದ ಸಿನೆಮಾ!
  • `ELLE’ : ಬಾಳಿಗೊಂದು ಎಲ್ಲೆ ಎಲ್ಲಿದೆ? ನಿನ್ನಾಸೆಗೆಲ್ಲಿ ಕೊನೆಯಿದೆ? 
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಡಿಸೆಂಟಿಂಗ್ ಡಯಾಗ್ನಸಿಸ್‌: ವೈದ್ಯಕೀಯ ರಂಗದ ದುರಾಚಾರ ರೋಗಕ್ಕೆ ವೈದ್ಯರದೇ ಚಿಕಿತ್ಸೆ
  • ಪಿಂಕ್: ಬಾಲಿವುಡ್ ಪಾಪಕರ್ಮಗಳಿಗೆ ಪುಟ್ಟ, ಅಸಂಪೂರ್ಣ ಪ್ರಾಯಶ್ಚಿತ್ತ!
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • Prashant Kishor : Disruptive, Harmful
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ಪತ್ರಕರ್ತ ಸಿ ಎಸ್‌ ಚರಣ್‌ರ ಕಥಾಸಂಕಲನ `ಆಂಟಿ ಕ್ಲಾಕ್‌’ಗೆ ಬರೆದಿದ್ದೇನೆ ನನ್ನ ಮೊದಲ ಮುನ್ನುಡಿ!
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಕನ್ನಡದಲ್ಲಿ ವಿಜ್ಞಾನ ತಂತ್ರಜ್ಞಾನ ಸಾಹಿತ್ಯ : ವಿಶ್ವಾಸಾರ್ಹತೆ ಹೆಚ್ಚಿಸಿಕೊಂಡ ಕಸಾಪ | ಈ ಮಹತ್ವದ ಕೃತಿಗಳು ಜಾಲತಾಣದಲ್ಲೂ ಮುಕ್ತವಾಗಿ ಪ್ರಕಟವಾಗಲಿ!
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಅಂದು ಶಾಂತ ಕಡಲು, ಇಂದು ಹುಚ್ಚುಹೊಳೆ! : ವಿವೇಕ ಶಾನಭಾಗರ ಕಾದಂಬರಿ ‘ಊರುಭಂಗ’ದ ಇನ್‌ಸ್ಟಂಟ್‌ ವಿಮರ್ಶೆ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • Climate thriller without Kalashnikov [Book Review: The Sands of Sarasvati by Risto Isomaki]
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • Sacred Plants of India: Marvellous lucidity of Puranic facts [book review]
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • Business Sutra : Desi Sutras for Modern Business [Book review]
  • ಹಲ್ಕಟ್‌ಗಿರಿ ಸ್ಟೋರಿಗೆ ಹೈದರ್‍ರೇ ಯೋಗ್ಯ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಖಗೋಳ ವೀಕ್ಷಣೆಯ ನೀರವದಲ್ಲಿ ಭೂ-ಗತಕಾಲದ ಹುಡುಕಾಟ : ‘ನಾಸ್ಟಾಲ್ಜಿಯಾ ಫಾರ್ ದ ಲೈಟ್’
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • THE ACCIDENTAL PRIME MINISTER : ಪುಸ್ತಕ ವಿಮರ್ಶೆ: `ಶಾಣ್ಯಾ’ ಸಂಜಯ ಬಾರು; `ಭೋಳ್ಯಾ’ ಡಾ||ಸಿಂಗ್‌!
  • `ಉಳಿದವರು ಕಂಡಂತೆ’ : ವೃತ್ತಿಪರ, ದಕ್ಷ ಮತ್ತು ಸಮಾಜ-ಸನ್ನಿವೇಶದ ಹೊಣೆಯರಿತ ನಿರ್ಮಾಣ
  • ಸ್ವರ್ಣಭರಿತ ದೇಗುಲದ ಶಿಲಾಮೂಲ: ರೋಚಕ ಸಂಶೋಧನೆಯ ಕೃತಿ ‘ಅಳಿವಿಲ್ಲದ ಸ್ಥಾವರ’
  • ‘ವಿಶ್ವ ಎನ್ನುವ ವಿಸ್ಮಯ’ ಪುಸ್ತಕ ವಿಮರ್ಶೆ : ಅಚ್ಚಗನ್ನಡದಲ್ಲಿ ಬ್ರಹ್ಮಾಂಡದ ಚಿಂತನೆಗೆ ಹಚ್ಚುವ ಕೃತಿ
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Musical journey of a different kind
  • Future of solar energy seems bleak if sector reforms do not pull through
  • BOOK REVIEW [A FORT OF NINE TOWERS] : This Kabuliwala weaves a blood-chilling story
  • Climate Change Report Warns of Dramatically Warmer World This Century
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • SC upholds constitutional validity of Right to Education Act : Judgement FULL TEXT
  • ಚಿಮಾಮಂಡ ಎನ್ಗೋಜಿ ಅದೀಚೆ: ಅಪ್ಪಟ ದೇಸಿ ಕತೆಗಾರ್ತಿ
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ‘ಇಜ್ಞಾನ’ ಸಂಚಿಕೆ ಓದಿ
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ನಾನ್‌ಜಿಂಗ್ ! ನಾನ್‌ಜಿಂಗ್!! : ಲೈಫು ಇಷ್ಟೇನಾ?
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ಹಾರರ್, ಸಸ್ಪೆನ್ಸ್ ಥ್ರಿಲ್ಲರ್‌ಗಳ ಹೊಸ ಹೀರೋ : ನಿರ್ದೇಶಕ ಬ್ರಾಡ್ ಆಂಡರ್‌ಸನ್
  • ವೇದಾಂತ : ಅಗೆದಷ್ಟೂ ಅವಾಂತರ
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ನಿಂದನೆಯ ಕವಲೊಡೆದ ಚರ್ಚೆಗೆ ನನ್ನ ಪ್ರತಿಕ್ರಿಯೆ
  • ಕಟಿನ್: `ಭೀಕರ’ವೂ ಕ್ಷುಲ್ಲಕವಾದ ಆ ಕ್ಷಣಗಳು…
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • Future Electricity Supply Options for India
  • How essential is the nuclear power option for India?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Media Fest Presentation by Beluru Sudarshana
  • January 23: Participate in the Public Consultation (Bangalore) on Bt Brinjal
  • ರೈನ್‌ಮ್ಯಾನ್ (೧೯೮೮) : ದಿವ್ಯಜ್ಞಾನಿ ಕಿಮ್ ಪೀಕ್ ಇನ್ನಿಲ್ಲ
  • ಅವತಾರ್ : ಅ‘ಮರ’ ಕಥೆಯ ಅದ್ಭುತ ನೇಯ್ಗೆ
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಗ್ರಾನ್ ಟೊರಿನೋ : ಕ್ಲೈಂಟ್ ಈಸ್ಟ್‌ವುಡ್‌ನ ಕೊನೇ ಪರ್ಫೆಕ್ಟ್ ಫ್ರೇಮ್ !
  • ಕ್ರಿಸ್: ನಿನ್ನಿಂದ ನಾವು ಕಲಿಯೋದು ತುಂಬಾ ಇದೆ !
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಡಿಸ್ಟ್ರಿಕ್ಟ್ ೯ : ಈ ವರ್ಷದ ರಮ್ಯ, ಅದ್ಭುತ, ನೈಜ ಸಿನೆಮಾ
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ಹ್ಯಾನಿಬಾಲ್ ಲೆಕ್ಟರ್: ಆಂಥೋನಿ ಹಾಪ್‌ಕಿನ್ಸ್‌ನ ರೌದ್ರಾವತಾರ
  • A Beautiful mind : ಬೆಟ್ಟದಂಥ ಕಥೆ ; ಇಲಿಯಂತ ಸಿನಿಮಾ
  • ಫಿಲಿಪೋಸ್ ಬರೆದ ಹಡಗಿನ ಕಥನಗಳು : ಜಸ್ಟ್ ಅನ್‌ಪುಟ್‌ಡೌನಬಲ್ !
  • Please visit www.mitramaadhyama.co.in
  • ನನ್ನ ಫೇವರಿಟ್ ಹಾಲಿವುಡ್ ಸಿನಿಮಾಗಳು
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ವುಮೆನ್ ಟ್ರಾಫಿಕಿಂಗ್ ಕುರಿತ ಎರಡು ಸಿನೆಮಾಗಳು : ವೆಲ್ ‘ಟೇಕನ್’ : ಬೆಸ್ಟ್ ‘ಟ್ರೇಡ್’
  • ಎಂಪೈರ್‍ಸ್ ಆಫ್ ದಿ ಇಂಡಸ್: ಥ್ರಿಲ್ಲರ್ ಪ್ರವಾಸಕಥನ : ಪರಿಚಯ ಭಾಗ ೧
  • ‘ದಿ ಕ್ಯೂಬ್’ ಸರಣಿ ಚಿತ್ರಗಳು: ದಿಕ್ಕೆಟ್ಟ ಬದುಕಿಗೆ ಆರೇ ಬಾಗಿಲು
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ನನ್ನ ಪ್ರೀತಿಯ ದತ್ತಾಜಿ
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • DNA: Delayed , No Analysis?
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • Bhairappa’s interview 2002
ಹುಡುಕಿ!
ವಿಭಾಗಗಳು
  • ಉಚಿತ ಪುಸ್ತಕ ಸಂಸ್ಕೃತಿ (23)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (19)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (265)
  • ವಿಮರ್ಶೆ (49)
  • ಶಂಕರ್ ಶರ್ಮ (23)
  • ಸಣ್ಣ ಕಥೆಗಳು (20)
  • ಸುದ್ದಿ (170)
  • ಹಳೆ ಸುದ್ದಿ (2)
  • ಹಿಮದೊಡಲ ತಳಮಳ (1)
Archives
© 2026 ಬೇಳೂರುಸುದರ್ಶನ.

Type above and press Enter to search. Press Esc to cancel.