Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
ಲೇಖನಗಳು

ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ

ಬೇಳೂರು ಸುದರ್ಶನBy ಬೇಳೂರು ಸುದರ್ಶನFebruary 17, 2010Updated:May 19, 20251 Comment4 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಇರುವ ತದಡಿಯಲ್ಲಿ ೨೧೦೦ ಮೆಗಾವಾಟ್‌ಗಳ ಉತ್ಪಾದನಾ ಸಾಮರ್ಥ್ಯದ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಕರ್ನಾಟಕ ವಿದ್ಯುತ್  ನಿಗಮದ ಪ್ರಸ್ತಾಪಕ್ಕೆ ಮೊದಲ ಹಿನ್ನಡೆ ಉಂಟಾಗಿದೆ. ಇದೇ ಜನವರಿ ೧೧-೧೨ರಂದು ನಡೆದ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ತಜ್ಞ ಪರಾಮರ್ಶನಾ ಸಮಿತಿ (ಎಕ್ಸ್‌ಪರ್ಟ್ ಅಪ್ರೈಸಲ್ ಕಮಿಟಿ , ಇ ಎ ಸಿ)ಯ ೬೦ನೇ  ಸಭೆಯಲ್ಲಿ ಈ ಕೆಳಗಿನಂತೆ ನಿರ್ಣಯವನ್ನು ಕೈಗೊಳ್ಳಲಾಗಿದೆ:

 

“ಪಾರಿಸರಿಕವಾಗಿ ಅತ್ಯಂತ ಸೂಕ್ಷ್ಮವಾಗಿರುವ ಮತ್ತು ಜೀವವೈವಿಧ್ಯದ ಮುಖ್ಯತಾಣವಾಗಿರುವ  ಈ ಪ್ರದೇಶದಲ್ಲಿ ಉಷ್ಣ ವಿದ್ಯುತ್ ಯೋಜನೆಗಳನ್ನು ಸ್ಥಾಪಿಸುವ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧ ಬಂದಿರುವ ಹಿನ್ನೆಲೆಯಲ್ಲಿ ಮತ್ತು ಈ ನದೀ ಮುಖಜ ಪ್ರದೇಶವು ಅತ್ಯಂತ ಗರಿಷ್ಠ ಉತ್ಪಾದಕತೆಯ ಜೀವಿವ್ಯವಸ್ಥೆಯನ್ನು ಹೊಂದಿರುವುದರ ಹಿನ್ನೆಲೆಯಲ್ಲಿ ಈ ಪ್ರಸ್ತಾಪವನ್ನು ಪರಿಶೀಲಿಸಿದ ನಂತರ, ಈ ಪ್ರಸ್ತಾಪವನ್ನು ಮಾಡಿದವರು ಮೊದಲು ಸಾರ್ವಜನಿಕ ಜನಮತಾಭಿಪ್ರಾಯವನ್ನು ನಡೆಸಿ ಅದರ ಫಲಿತಾಂಶಗಳನ್ನು ಈ ಯೋಜನೆಯ ಹೆಚ್ಚಿನ ಪರಿಶೀಲನೆಗಾಗಿ ಸಲ್ಲಿಸಲು ಸಮಿತಿಯು ನಿರ್ಧರಿಸಿತು.”

ಪಾರಿಸರಿಕವಾಗಿ ಅತ್ಯಂತ ಸೂಕ್ಷ್ಮವಾಗಿರುವ, ಜೀವವೈವಿಧ್ಯದ ಮುಖ್ಯತಾಣವಾಗಿರುವ  ಮತ್ತು ಅತ್ಯಂತ ಹೆಚ್ಚಿನ ಉತ್ಪಾದಕತೆಯ ಜೀವಿವ್ಯವಸ್ಥೆಯನ್ನು ಹೊಂದಿರುವ ಪ್ರದೇಶದಲ್ಲಿ ಇಂಥ ಯೋಜನೆಯ ಪ್ರಸ್ತಾಪವನ್ನು ಮಾಡಿರುವುದು ನಮ್ಮ ಸಮಾಜವು ಕಳವಳಪಡಬೇಕಾದ ಸಂಗತಿ. ಪಶ್ಚಿಮಘಟ್ಟದ ಬೆಟ್ಟಸಾಲಿನಲ್ಲೇ ಇರುವ ಅಘನಾಶಿನಿ ನದಿಯ ಮುಖಜಪ್ರದೇಶವೇ ಈ ಪ್ರಸ್ತಾಪಿತ ಯೋಜನೆಯ ಸ್ಥಳ; ಇದು ಸಾಮಾಜಿಕ ಮತ್ತು ಪಾರಿಸರಿಕ ಕಾರಣಗಳಿಗಾಗಿ ಸೂಕ್ಷ್ಮ ಎಂದೇ ಪರಿಗಣಿತವಾಗಿದೆ. ಇದೇ ಕಾರಣಕ್ಕಾಗಿಯೇ ವ್ಯಾಪಕ ಪ್ರತಿಭಟನೆ ಕಂಡುಬಂದಿದ್ದರಿಂದ ಕಲ್ಲಿದ್ದಲು ಆಧಾರಿತ ಶಾಖೋತ್ಪನ್ನ ವಿದ್ಯುತ್ ಸ್ಥಾವರ ಸ್ಥಾಪನೆಯ (ಅಲ್ಟ್ರಾ ಮೆಗಾ ಪವರ್ ಪ್ರಾಜೆಕ್ಟ್, ಯು ಎಂ ಪಿ ಪಿ) ಈ ಹಿಂದಿನ ಪ್ರಸ್ತಾಪವನ್ನು ಸರ್ಕಾರವು ಕೈಬಿಟ್ಟಿತ್ತು ಎನ್ನುವುದು ಗಮನಾರ್ಹ. ಈ ಪ್ರದೇಶದಲ್ಲಿ ಇಂಥ ಯಾವುದೇ ದೊಡ್ಡ ಯೋಜನೆಗಳನ್ನು ಕೈಗೊಳ್ಳಬಾರದು ಎಂದು ಸಾರ್ವಜನಿಕರು ಮತ್ತು ಪರಿಸರವಾದಿಗಳು ಹೇಳುವುದಕ್ಕೆ ಬೇಕಾದಷ್ಟು ಕಾರಣಗಳಿವೆ.

ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಕ್ಕೆ ಹೋಲಿಸಿದರೆ ಅನಿಲ ಆಧಾರಿತ ವಿದ್ಯುತ್ ಸ್ಥಾವರದಿಂದ ಕಡಿಮೆ ಪರಿಸರ ಮಾಲಿನ್ಯ ಉಂಟಾಗುತ್ತದೆ ಎನ್ನುವುದು ನಿಜವಾದರೂ, ಇಂಥ ಬೃಹತ್ ಪ್ರಮಾಣದ ಅನಿಲ ವಿದ್ಯುತ್ ಸ್ಥಾವರ ಯೋಜನೆಯಿಂದ ಒಟ್ಟಾರೆಯಾಗಿ ಈ ಪ್ರದೇಶದ ಮೇಲೆ ಆಗುವ ಸಾಮಾಜಿಕ – ಪಾರಿಸರಿಕ ದುಷ್ಪ್ರಭಾವಗಳನ್ನು ಅಲ್ಲಗಳೆಯಲು ಬರುವುದೇ ಇಲ್ಲ.

ಇಲ್ಲಿ ಉತ್ಪಾದಿಸಿದ ವಿದ್ಯುತ್ತನ್ನು ಪಶ್ಚಿಮ ಘಟ್ಟಗಳ ಮೇಲಿನಿಂದಲೇ ಬೆಂಗಳೂರು / ಮೈಸೂರು ಗಳಿಗೆ ರವಾನಿಸಬೇಕಾಗುತ್ತದೆ; ಹೈ ವೋಲ್ಟೇಜ್ ಟ್ರಾನ್ಸ್‌ಮಿಶನ್ ಲೈನುಗಳನ್ನು ಸ್ಥಾಪಿಸಲು ಸಾವಿರಾರು ಎಕರೆ ಮಳೆಕಾಡಿನ ಪ್ರದೇಶವನ್ನು ನಾಶ ಮಾಡಬೇಕಾಗುತ್ತದೆ.

ಅಘನಾಶಿನಿ ನದಿಮುಖಜ ಪ್ರದೇಶವು ಅತ್ಯಂತ ಸಿರಿವಂತ ಜೀವವೈವಿಧ್ಯದ ತಾಣವಾಗಿದೆ. ಇದು ಸಾವಿರಾರು ಕುಟುಂಬಗಳಿಗೆ ಜೀವನೋಪಾಯವನ್ನು ಒದಗಿಸುತ್ತಿದೆ. ಈ ಯೋಜನೆ ಬಂದಾಗ ಈ ಸಾವಿರಾರು ಕುಟುಂಬಗಳಿಗೆ ಮೀನುಗಾರಿಕೆಗೆ ಅಥವಾ ಗಝನಿ ಭೂಮಿಯಲ್ಲಿ ಭತ್ತ ಬೆಳೆಯಲು ಅವಕಾಶವೇ ಇರುವುದಿಲ್ಲ.

 

 

ಯೋಜನಾಸ್ಥಳವು ಸಮುದ್ರದ ಮೇಲುಬ್ಬರಕ್ಕೆ ತುತ್ತಾಗುವ ಪ್ರದೇಶ; ಆದ್ದರಿಂದ ಹಲವಾರು ತಿಂಗಳುಗಳ ಕಾಲ ಈ ಪ್ರದೇಶವು ನೀರು ತುಂಬಿ ಜವುಗಾಗಿರುತ್ತದೆ. ಆದ್ದರಿಂದ ಇದು ಕರಾವಳಿ ನಿಯಂತ್ರಣ ವಲಯ(೧)ದ (ಕೋಸ್ಟಲ್ ರೆಗ್ಯುಲೇಟರಿ ಝೋನ್, ಸಿ ಆರ್ ಝಡ್ ೧) ವ್ಯಾಪ್ತಿಗೆ ಬರುತ್ತದೆ.

ಅಲ್ಲದೆ ಈ ಯೋಜನಾ ಪ್ರದೇಶವು ತಾಂತ್ರಿಕ – ಆರ್ಥಿಕ ಕಾರಣಗಳಿಗಾಗಿಯೂ ಅತ್ಯಂತ ದೋಷಪೂರಿತ ಯೋಜನೆಯೇ ಸರಿ. ಈ ಸ್ಥಳದಲ್ಲಿ ಯೋಜನೆಯನ್ನು ಸ್ಥಾಪಿಸುವ ಏಕೈಕ ಉದ್ದೇಶ ಎಂದರೆ ಇಲ್ಲಿಗೆ ಅನಿಲವನ್ನು ಆಮದು ಮಾಡಿಕೊಳ್ಳಬಹುದು ಎಂಬುದು. ಆದರೆ ಈಗ ಬಂದಿರುವ ಮಾಧ್ಯಮದ ವರದಿಗಳ ಪ್ರಕಾರ ಭಾರತೀಯ ಅನಿಲ ಪ್ರಾಧಿಕಾರವು (ಜಿ ಐ ಎ ಎಲ್) ಮಹಾರಾಷ್ಟ್ರದ ದಾಭೋಲ್‌ನಿಂದ ಬೆಂಗಳೂರಿನವರೆಗೆ ಗೃಹ ಮತ್ತು ವಾಣಿಜ್ಯಕ ಬಳಕೆಯ ಅನಿಲದ ಪ್ರಮಾಣದ ಜೊತೆಗೇ ೮೦೦೦ ಮೆಗಾವಾಟ್‌ನಷ್ಟು ವಿದ್ಯುತ್ ಉತ್ಪಾದಿಸಲು ಬೇಕಾಗುವ ಅನಿಲವನ್ನೂ ಸರಬರಾಜು ಮಾಡಬಲ್ಲ ಅನಿಲ ಕೊಳವೆಯನ್ನು ಸ್ಥಾಪಿಸಲಿದೆ. ಆದ್ದರಿಂದ ಇಂಥ ಅನಿಲ ಆಧಾರಿತ ಯೋಜನೆಗಳನ್ನು ಈ ಕೊಳವೆಯ ಹಾದಿಯಲ್ಲಿ ಬೇರೆ ಬೇರೆ ಕಡೆಗಳಲ್ಲಿ ಸ್ಥಾಪಿಸಬಹುದು. ಇದರಿಂದ ತದಡಿಯಂಥ ಒಂದು ಸೂಕ್ಷ್ಮ ಪ್ರದೇಶದಲ್ಲಿ ಬೃಹತ್ ಸ್ಥಾವರನ್ನು ಸ್ಥಾಪಿಸುವ ಅಪಾಯವನ್ನು ತಪ್ಪಿಸಬಹುದು. ೯೦ರ ದಶಕದಲ್ಲೇ ಬೃಹತ್ ಅನಿಲ ಆಧಾರಿತ ವಿದ್ಯುತ್ ಸ್ಥಾವರಕ್ಕಾಗಿ ಬಿಡದಿಯ ಬಳಿ ರಾಜ್ಯ ಸರ್ಕಾರವು ವಶಪಡಿಸಿಕೊಂಡ ಭಾರೀ ಭೂಪ್ರದೇಶದಲ್ಲಿ ಯಾಕೆ ಈ ಅನಿಲ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಬಾರದು?

ಬೆಂಗಳೂರಿನ ಹತ್ತಿರದಲ್ಲಿ ಯಾವುದೇ ಬೃಹತ್ ವಿದ್ಯುತ್ ಸ್ಥಾವರವಿಲ್ಲ; ಅಲ್ಲದೆ ಬೆಂಗಳೂರಿಗೇ ಹೆಚ್ಚಿನ ಪ್ರಮಾಣದ ವಿದ್ಯುತ್ ಬೇಕಾಗಿದೆ. ಬಿಡದಿಯ ಬಳಿ ವಿದ್ಯುತ್ ಸ್ಥಾವರ ಸ್ಥಾಪನೆಯಾದರೆ ವಿದ್ಯುತ್ ಸಾಗಾಟದ ನಷ್ಟವನ್ನೂ ಸಾಕಷ್ಟು  ತಗ್ಗಿಸಬಹುದಾಗಿದೆ. ಅಲ್ಲದೆ  ಪಶ್ಚಿಮ ಘಟ್ಟದ ಮಳೆಕಾಡನ್ನೂ ಈ ಮೂಲಕ ಉಳಿಸಬಹುದಾಗಿದೆ.

ಇದಲ್ಲದೆ ಇನ್ನೂ ಒಂದು ಮೂಲಭೂತ ಪ್ರಶ್ನೆಯನ್ನು ಇಲ್ಲಿ ಕೇಳಬೇಕಿದೆ: ಈಗಿರುವ ವಿದ್ಯುತ್ ಉತ್ಪಾದನಾ ಘಟಕಗಳ ಸಂಪೂರ್ಣ ಉತ್ಪಾದನಾ ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಲಾಗಿದೆಯೆ ? ಸಾಗಾಟ ಹಾಗೂ ವಿತರಣೆ ಸೋರಿಕೆಯನ್ನು ಸಮರ್ಥವಾಗಿ ತಗ್ಗಿಸಲಾಗಿದೆಯೆ? ಕರ್ನಾಟಕ ರಾಜ್ಯದ ವಿದ್ಯುತ್ ಸೋರಿಕೆ ಪ್ರಮಾಣ ಶೇ. ೩೦ರಷ್ಟು.  ಶಕ್ತಿಯ ಸಮರ್ಥ ಬಳಕೆ – ಸಂರಕ್ಷಣೆ, ಡಿಮ್ಯಾಂಡ್ ಸೈಡ್ ಮ್ಯಾನೇಜ್‌ಮೆಂಟ್ (ಡಿ ಎಸ್ ಎಂ), ಮರುಬಳಕೆ ಶಕ್ತಿಮೂಲಗಳ ಬಳಕೆ, – ಇತ್ಯಾದಿ ಸಂಗತಿಗಳಲ್ಲಿ ಇರುವ ಲಾಭಗಳನ್ನು ಗಣನೆಗೆ ತೆಗೆದುಕೊಂಡು ಇಲ್ಲಿ ಸಿಗಬಹುದಾದ ಹೆಚ್ಚುವರಿ ವಿದ್ಯುತ್ತಿನ ಪ್ರಮಾಣವನ್ನು ಲೆಕ್ಕ ಹಾಕಿದರೆ ಈಗ ಪ್ರಸ್ತಾಪಿಸಿರುವ ಬೃಹತ್ ಯೋಜನೆಗಳು ಸಂಪೂರ್ಣವಾಗಿ ಅನಗತ್ಯ ಎಂಬುದು ಅರಿವಾಗುತ್ತದೆ.

ಇದಲ್ಲದೆ ಭಾರತವು ಅಂತಾರಾಷ್ಟ್ರೀಯ ಸಮುದಾಯಕ್ಕೆ ತನ್ನ ಶಕ್ತಿ ಬೇಡಿಕೆಯನ್ನು ಶೇ. ೨೫-೪೦ರಷ್ಟು ತಗ್ಗಿಸುವುದಾಗಿ ಮಾತು ಕೊಟ್ಟಿದೆ; ಮಳೆಕಾಡುಗಳನ್ನು, ಕಾಡಿನ ಪ್ರಮಾಣವನ್ನು ಸಂರಕ್ಷಿಸುವುದಾಗಿ ಭರವಸೆ ನೀಡಿದೆ. ಈಗಾಗಲೇ ಕರ್ನಾಟಕದಲ್ಲಿ ಕಾಡಿನ ಪ್ರಮಾಣವು ಭಾರತದ ರಾಷ್ಟ್ರೀಯ ಗುರಿಯಾದಶೇ. ೩೩ರಷ್ಟರ ಬದಲಿಗೆ ಕೇವಲ ಶೇ. ೨೦ರಷ್ಟಿದೆ.

ತದಡಿಯಲ್ಲಿ ಕರ್ನಾಟಕ ಉದ್ಯಮ ಪ್ರದೇಶ ಅಭಿವೃದ್ಧಿ ಮಂಡಳಿ (ಕೆ ಐ ಎ ಡಿ ಬಿ) ಬಳಿ ಇದೆ ಎಂದು ಈಗ ಹೇಳಲಾಗಿರುವ   ೧೮೦೦ ಎಕರೆ ಭೂಪ್ರದೇಶವನ್ನು ಖಾಸಗಿ ಉದ್ಯಮಕ್ಕೆಂದೇ ಹಲವು ವರ್ಷಗಳ ಹಿಂದೆ ವಶಪಡಿಸಿಕೊಳ್ಳಲಾಗಿದೆ. ಅಂದಿನಿಂದಲೂ ಈ ಪ್ರದೇಶದಲ್ಲಿ ಹಲವು ಯೋಜನೆಗಳನ್ನು ಪ್ರಸ್ತಾಪಿಸಲಾಗಿದ್ದು ಅವೆಲ್ಲವನ್ನೂ ಸ್ಥಳೀಯರು ಪ್ರಬಲವಾಗಿ ವಿರೋಧಿಸುತ್ತ ಬಂದಿದ್ದಾರೆ.  ಆದ್ದರಿಂದ ಸಮಾಜದ ಹಿತದೃಷ್ಟಿಯಲ್ಲಿ ಈ ಪ್ರದೇಶವನ್ನು ಸಮುದ್ರ ಸಂಪತ್ತಿನ ಮೀಸಲು ಪ್ರದೇಶ ಅಥವಾ ಜೈವಿಕವಲಯ ಅಥವಾ ಪರಿಸರ ಪ್ರವಾಸದ ನೈಸರ್ಗಿಕ ಥೀಮ್ ಪಾರ್ಕ್ ಎಂದೋ ಘೋಷಿಸಿ ಅದನ್ನು ಇನ್ನುಮುಂದೆ ಯಾವುದೇ ದೊಡ್ಡ ಪ್ರಮಾಣದ ನಿರ್ಮಾಣಕ್ಕೆ ನೀಡದಂತೆ ನೋಡಿಕೊಳ್ಳುವುದು ಅತ್ಯಂತ ಸೂಕ್ತವಾದ ನಿರ್ಧಾರವಾಗುತ್ತದೆ.

ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ೨೦೧೦ರ ಅಂತಾರಾಷ್ಟ್ರೀಯ ಜೀವವೈವಿಧ್ಯ ವರ್ಷದಲ್ಲಿ ರಿಯೋ+೨೦ ಶೃಂಗಸಭೆಯನ್ನು ಸಂಘಟಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ  ಇಂಥ ಜೈವಿಕ ಮುಖ್ಯತಾಣವನ್ನು ಅತಿ ದುಷ್ಪ್ರಭಾವ ಬೀರುವ ವಿದ್ಯುತ್ ಯೋಜನೆಗೆ ನೀಡುವುದು ಜೀವವೈವಿಧ್ಯ ಸಮಾವೇಶದಲ್ಲಿ ಹೇಳಿದ ಜೀವವೈವಿಧ್ಯ ಸಂರಕ್ಷಣೆಯ ಮುನ್ನೆಚ್ಚರಿಕೆಯ ನೀತಿಗೆ ವಿರುದ್ಧವಾದ ನಡೆಯಾಗಿದೆ.
ಇಂಥ ಸಂದರ್ಭದಲ್ಲಿ ಇ ಎ ಸಿ ಯು (ತನ್ಮೂಲಕ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು) ಒಂದು ಹೊಸ ಮತ್ತು ವಿಧಾಯಕ ನೀತಿಯನ್ನು ಅನುಸರಿಸಿ, ದೂರಗಾಮಿ ಪರಿಣಾಮಗಳಿರುವ ನಿರ್ಣಯಗಳ ಪ್ರಕ್ರಿಯೆಯಲ್ಲಿ ಜನರು ಭಾಗವಹಿಸಬೇಕೆಂದು ಹೇಳಿರುವುದು ಸ್ವಾಗತಾರ್ಹವಾಗಿದೆ. ನಮ್ಮ ರಾಜ್ಯದ ನೀತಿ ನಿರೂಪಕರು ಇನ್ನು ಮುಂದಾದರೂ ರಾಜ್ಯದ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಬೃಹತ್ ಯೋಜನೆಗಳನ್ನು ಕೈಗೊಳ್ಳುವ ಮುನ್ನ ಈಗ ಇರುವ ಎಲ್ಲ ಅವಕಾಶಗಳನ್ನೂ ಸುಸ್ಥಿರ ಅಭ್ಯುದಯ (ಸಸ್ಟೈನಬಲ್ ಡೆವಲಪ್‌ಮೆಂಟ್) ಮಾದರಿಯಲ್ಲಿ ಪರಿಶೀಲಿಸುವುದು ನಾಡಿನ ಜನತೆಯ ಹಿತದಿಂದ ಅತ್ಯಂತ ಸೂಕ್ತ ಕ್ರಮವಾಗಿದೆ.

ಕನ್ನಡಕ್ಕೆ: ಬೇಳೂರು ಸುದರ್ಶನ

(Published in Kannadaprabha 17.2.2010)

Pictures by Beluru Sudarshana, Tadadi, 2008

mitramaadhyama shankar sharma Tadadi
Share. Facebook Twitter Pinterest LinkedIn Tumblr Email
Previous Articleಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
Next Article Impact of Electric Power Sector on Western Ghats : Issues and remedies
ಬೇಳೂರು ಸುದರ್ಶನ
  • Website

Related Posts

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ

October 27, 2020

www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ

July 17, 2020

1 Comment

  1. harsha on March 12, 2010 1:18 pm

    ಅಸ್ಟೆ ಅಲ್ಲ ಥರ್ಮಲ್ ಪವರ್ ಪ್ಲ್ಯಾಂಟ್ ಇಂದ ಹೆಲ್ತ್ ಡಿಸಾರ್ಡರ್ ಕೂಡ ತುಂಬಾ..
    ಮಂತ್ರಿ ಗಳಿಗೆ ತಮ್ಮ ಸ್ವಿಸ್ ಅಕೌಂಟ್ ನಲ್ಲಿ ದುಡ್ಡು ಬೇಕು…
    ಅದಕ್ಕೆ ಜಿಂದಾಲ್ ಪವರ್ .&. ಪವರ್ ಗಳಂಥ ಕಂಪನೀ ಇಂದ ಅಂಡರ್ ಟೇಬಲ್ ದುಡ್ಡು ಬರುತೇ… ಯಾಕೆ ಅಂದ್ರೆ ಪ್ರಾಫಿಟ್….
    ಹಿಂದೆ ರಾಜರು ಮಾಡಿ ದಂತ ದಬ್ಬಾಳಿಕೆ ಏಗ ಮುದ್ಗ ಜಾಣರ ಮೇಲಗುತೆ..
    ಅವರು ವಾದ್ಯ ವಾಂತರಲ್ಲ್ ಸೋ ಅವರಿಗೆ ಗೆ ಅದು ಅರಿವಾಗುವುದಿಲ್ಲ ….

    ವಿದ್ಯಾ ವಾಂತರು ಇದನ್ನು ನಿಲ್ಲಿಸಬೇಕು

    ಚೆಕ್ ಮಾಡೀ ಎ ಲಿಂಕ್
    http://www.slideshare.net/guest1d7cce/ill-effects-of-thermal-power-plants

ಲೇಖನಗಳು, ಶಂಕರ್ ಶರ್ಮ
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • The relevance of nuclear power from Climate Change perspective: A letter to Hon’ble Vice President of India
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Shankar Sharma’s Blog: Serious implications of the proposal to supply water from Linganamakki to Bengaluru, and other ghastly projects (resulting in cutting of 12.75 lakh trees)
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • Shankar Sharma: India’s Ongoing Water and Power Crises
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • SHANKAR SHARMA: CREATION OF A SUSTAINABLE URBAN ENERGY SYSTEM
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Shankar Sharma: Environmentalists to support the development of safer nuclear power as one way to cut fossil fuel pollution? Some serious concerns
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • Coal Blooded-Putting Profits Before People
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • Integrated Power Policy: Download the book here!
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Shankar Sharma: Feedback on National Electricity Plan on Generation – 12th & 13th Plan periods
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಕೂಡಿಗಿ ಕಲ್ಲಿದ್ದಲು ಶಾಖೋತ್ಪನ್ನ ವಿದ್ಯುತ್‌ ಸ್ಥಾವರದಿಂದ ಲಾಭವಿದೆಯೆ?
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • An effective Climate Action Plan for Karnataka
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • OPEN LETTER to Jairam Ramesh: Nuclear power park to be set up in Jaitapur, in Maharashtra’s Ratnagiri district within WGs
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Towards a sustainable power policy in Karnataka
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • Shankar Sharma: A way out of Power Crisis
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • Shankar Sharma: Electricity supply management – Lessons from Kerala
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • Future Electricity Supply Options for India
  • How essential is the nuclear power option for India?
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.